Homeಮುಖಪುಟಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

- Advertisement -
- Advertisement -

ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಪ್ರಕರಣದಲ್ಲಿ, ‘ಇದು ಆಕಸ್ಮಿಕ ಸ್ಪರ್ಶ’ ಎಂಬ ಆರೋಪಿಯ ವಾದವನ್ನು ತಳ್ಳಿ ಹಾಕಿರುವ ದೆಹಲಿ ಹೈಕೋರ್ಟ್‌, ಆ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಿದ್ದು, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಇದರೊಂದಿಗೆ ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಆರು ವರ್ಷದಿಂದ ಐದು ವರ್ಷಕ್ಕೆ ಇಳಿಸಿದೆ.

ಶಾಲೆಯತ್ತ ನಡೆದು ಹೋಗುತ್ತಿದ್ದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಘಟನೆ 2017ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ದೆಹಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಸೆಪ್ಟೆಂಬರ್‌ 2019ರಲ್ಲಿ ತೀರ್ಪು ನೀಡಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ಸೆಕ್ಷನ್‌ 10 (ಉಲ್ಬಣಗೊಂಡ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು ಪ್ರಾಸಿಕ್ಯೂಷನ್‌, ಅನುಮಾನಗಳನ್ನು ಮೀರಿ ಸಾಕ್ಷಿಯನ್ನು ಸಾಬೀತುಪಡಿಸುತ್ತದೆ ಎಂದು ತಿಳಿಸಿದರು. ಆರೋಪಿ ಸ್ಥಳದಲ್ಲಿ ಇದ್ದಾನೆ ಎಂಬುದು ನಿರ್ವಿವಾದ ಎಂದಿರುವ ನ್ಯಾಯಾಲಯ, ಆತನ ಕೈ ಆಕಸ್ಮಿಕವಾಗಿ ಬಲಿಪಶುವಿಗೆ ತಾಗಿದೆಯೇ ಅಥವಾ ಸಂತ್ರಸ್ತೆ ಆರೋಪಿಸಿದಂತೆ ಘಟನೆ ನಡೆದಿದೆಯೇ ಎಂಬುದು ಮಾತ್ರ ಸಮಸ್ಯೆಯಾಗಿ ಉಳಿದಿದೆ ಎಂದು ಹೇಳಿದೆ.

ಈ ಘಟನೆ ನಡೆದಿದ್ದ ಸಂದರ್ಭದಲ್ಲಿ ಬಾಲಕಿಯ ತಂದೆ ಅವಳಿಂದ ಕೇವಲ 10-15 ಹೆಜ್ಜೆಗಳ ಹಿಂದೆ ಇದ್ದರು. ಶಾಲೆಗೆ ಹೋಗುವ ರಸ್ತೆಯ ತಿರುವಿನಲ್ಲಿ ಘಟನೆ ನಡೆದಿದ್ದು, ಬಾಲಕಿಯ ತಂದೆಯೇ ಪ್ರಾಥಮಿಕ ಸಾಕ್ಷಿ ಎಂದು ವಕೀಲರು ದೃಢೀಕರಿಸಿದ್ದರು. ಈ ಘಟನೆ ನಂತರ ಸಂತ್ರಸ್ತೆಯನ್ನು ಪೊಲೀಸ್‌ ಠಾಣೆಗೆ ಕರೆದೊಯ್ದು ದೂರು ನಿಡಲಾಯಿತು. ಮರುದಿನವೇ ಸೆಕ್ಷನ್‌ 164 ರಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರಿಂದ, ಸಾಕ್ಷ್ಯಾಧಾರಗಳನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಕಡಿಮೆ ಎಂದು ನ್ಯಾಯಾಲಯ ಹೇಳಿದೆ.

ಇಂತಹ ಅಪರಾಧಗಳಿಗೆ ಸೂಚಿಸಲಾದ ಕನಿಷ್ಟ ಶಿಕ್ಷೆ ಐದು ವರ್ಷ ಮತ್ತು ಗರಿಷ್ಠ ಏಳು ವರ್ಷಗಳು ಎಂದಿರುವ ನ್ಯಾಯಾಲಯವು, ’ಅಪೀಲುದಾರರು ಈ ಹಿಂದೆ ಯಾವುದೇ ಪ್ರಕರಣಗಳನ್ನು ಒಳಗೊಂಡಿಲ್ಲ. ವಿಚಾರಣೆ ಸಮಯದಲ್ಲಿ ಮತ್ತು ಮೇಲ್ಮನವಿ ವಿಚಾರಣೆ ನಡೆಯುವಾಗಲು, ನಿರಂತರ ಸೆರೆವಾಸದಲ್ಲಿದ್ದರು’ ಎಂದಿರುವ ನ್ಯಾಯಮೂರ್ತಿ ಗುಪ್ತಾ ಅವರು ಶಿಕ್ಷೆಯನ್ನು ಒಂದು ವರ್ಷ ಕಡಿಮೆಗೊಳಿಸಿದರು.

ಪೊಲೀಸರ ಪ್ರಕಾರ, ಶಾಲೆಗೆ ಹೋಗುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಇದ್ದಕ್ಕಿದ್ದಂತೆ ಹಿಡಿದುಕೊಂಡು, ಅವಳ ಕೆನ್ನೆಗೆ ಬಲವಂತವಾಗಿ ಚುಂಬಿಸಿದ್ದನು. ಬಾಲಕಿಯು ಕಿರುಚಿಕೊಂಡಾಗ ಸ್ಥಳಕ್ಕೆ ಧಾವಿಸಿದ ಬಾಲಕಿಯ ತಂದೆ, ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಥಳಿಸಿದ್ದಾರೆ’ ಎಂದು ವಕೀಲರು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಆರೋಪಿಯು ಶಿಕ್ಷೆಗೆ ಒಳಗಾಗುವ ಮೊದಲು, ‘ತಾನು  ಶಾಲಾ ಮಾರ್ಗದ ಮೂಲಕ ಹಾದು ಹೋಗುತ್ತಿದ್ದಾಗ, ಬಾಲಕಿಯು ವಿರುದ್ಧ ದಿಕ್ಕಿನಿಂದ ಬರುತ್ತಿದ್ದಳು. ಆ ಸಮಯದಲ್ಲಿ ಆಕಸ್ಮಿಕವಾಗಿ ನನ್ನ ಕೈ ಬಾಲಕಿಗೆ ತಗುಲಿತ್ತು. ಅದಕ್ಕಾಗಿ ತಕ್ಷಣವೇ ಆಕೆಯ ತಂದೆಗೆ ಕ್ಷಮೆಯಾಚಿಸಿದೆ. ಆದರೆ ಬಾಲಕಿಯ ತಂದೆ ಕ್ಷಮಾಪಣೆ ಸ್ವೀಕರಿಸದೇ ಥಳಿಸಲು ಆರಂಭಿಸಿದರು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದನು.

(ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ಹಿಂಸಾಚಾರಗಳು ಹೆಚ್ಚುತ್ತಿವೆ. ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಮಹಿಳಾ ಮತ್ತು ಪ್ರಜ್ಞಾವಂತ ಸಂಘಟನೆಗಳ ಹೋರಾಟದಿಂದ ಹಲವಾರು ಕಾನೂನು ಬದಲಾವಣೆಗಳು ಬಂದಿವೆ. ಈ ಪ್ರಕರಣಗಳಲ್ಲಿ ಆರೋಪಿಗೆ ಗರಿಷ್ಟ ಶಿಕ್ಷೆಯ ಸಂಭವವಿದೆ. 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪೋಕ್ಸೊ ಅಡಿಯಲ್ಲಿ ಬರುತ್ತದೆ. ಆಗ ಅಪರಾಧ ನಡೆದಿಲ್ಲ ಎಂದು ಸಾಬೀತುಪಡಿಸುವ ಹೊಣೆ ಆರೋಪಿಯ ಮೇಲಿರುತ್ತದೆ. ಲೈಂಗಿಕ ಹಿಂಸೆ, ಅತ್ಯಾಚಾರದ ವಿರುದ್ಧ ದನಿಯೆತ್ತೋಣ. ಆರೋಗ್ಯಕರ ಸಮಾಜ ನಮ್ಮದಾಗಿಸಿಕೊಳ್ಳೋಣ)


ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...