Homeಮುಖಪುಟಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

- Advertisement -
- Advertisement -

ದೆಹಲಿಯ  ಗೋವಿಂದ್‌ ವಲ್ಲಭ್‌ ಪಂತ್‌ ಆಸ್ಪತ್ರೆ (GIPMER) ತನ್ನ ನರ್ಸ್‌ಗಳು ಮಲಯಾಳಿ ಭಾಷೆಯಲ್ಲಿ ಮಾತನಾಡುವುದನ್ನು ನಿಷೇಧಿಸಿದೆ. ಆಸ್ಪತ್ರೆಯ ಆವರಣದಲ್ಲಿ ಮಲಯಾಳಂ ಬದಲು ಹಿಂದಿಯಲ್ಲಿಯೇ ಮಾತಾಡುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ತನ್ನ ಆರೋಗ್ಯ ಸಿಬ್ಬಂದಿಗೆ ಕಠಿಣವಾದ ಎಚ್ಚರಿಕೆ ಮತ್ತು ನಿರ್ದೇಶನಗಳನ್ನು ನೀಡಿದೆ. ಜೊತೆಗೆ ಹಿಂದಿ ಮತ್ತು ಇಂಗ್ಲೀಷ್‌ ಭಾಷೆಯಲ್ಲಿ ಮಾತನಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಹೆಚ್ಚಿನ ರೋಗಿಗಳು ಮಲಯಾಳಂ ಭಾಷೆಯನ್ನು ಅರ್ಥ ಮಾಡಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ನರ್ಸ್‌ಗಳು ಮಲಯಾಳಂ ಭಾಷೆಯಲ್ಲಿ ಸಂಭಾಷಣೆಯನ್ನು ನಡೆಸತೊಡಗಿದರೆ ರೋಗಿಗಳಲ್ಲಿ ಅಸಹಾಯಕ ಭಾವನೆ ಹುಟ್ಟುತ್ತದೆ. ಹಾಗಾಗಿ ಮಲಯಾಳಂ ಭಾಷೆಯಲ್ಲಿ ಮಾತನಾಡದಂತೆ ನರ್ಸ್‌ಗಳಿಗೆ ಆದೇಶಿಸಿದ್ದೇವೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ನಾವು 300-350 ನರ್ಸಿಂಗ್‌ ಸಿಬ್ಬಂದಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ನಾವು ಯಾವಾಗಲೂ ಹಿಂದಿಯಲ್ಲಿಯೇ ರೋಗಿಗಳೊಂದಿಗೆ ಸಂಭಾಷಣೆ ನಡೆಸುತ್ತೇವೆ. ನಾವು ಮಲಯಾಳಂ ನಲ್ಲಿ ಮಾತನಾಡಿದರೆ ರೋಗಿಗಳಿಗೆ ಏನೂ ಅರ್ಥವಾಗುವುದಿಲ್ಲವೆಂದೂ ತಿಳಿದಿದೆ. ಆದರೆ ನಾವು ಸಿಬ್ಬಂದಿಗಳು ಪರಸ್ಪರ ಮಾತನಾಡುವಾಗ ಮಲೆಯಾಳಂ ಭಾಷೆಯನ್ನು ಬಳಸುವಂತಿಲ್ಲ ಎಂದು ಈಗ ಆಸ್ಪತ್ರೆ ಹೇಳಿದೆ ಎಂದು ನರ್ಸ್‌ ಒಬ್ಬರು ತಿಳಿಸಿದ್ದಾರೆ.

ದೆಹಲಿಯ ಗೋವಿಂದ್‌ ವಲ್ಲಭ ಪಂತ್‌ ಆಸ್ಪತ್ರೆಯ ಮಲಯಾಳಂ ವಿರೋಧಿ ಧೋರಣೆಗೆ ದೇಶದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ಅನೇಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ದೇಶದಲ್ಲಿ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾದ ಭಾಷೆಯಲ್ಲಿ ಮುಕ್ತವಾಗಿ ಮಾತನಾಡುವ ಹಕ್ಕಿದೆ. ಸಂವಿಧಾನದ ಅನುಚ್ಛೇಧ 19 ರಲ್ಲಿ ಹೇಳಲಾದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಆಸ್ಪತ್ರೆ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಶಶಿ ತರೂರ್‌,  ಥಾಮಸ್‌ ಐಸಾಕ್‌ ಸೇರಿದಂತೆ ದೇಶದ ಅನೇಕ ರಾಜಕೀಯ ನಾಯಕರು ಮತ್ತು ಗಣ್ಯರು ದೆಹಲಿ ಆಸ್ಪತ್ರೆಯ ಹಿಂದಿ ಹೇರಿಕೆಯ ವಿರುದ್ಧ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಆಸ್ಪತ್ರೆಯ ಈ ಕ್ರಮ ಕಂಡನಾರ್ಹ. ಸಂವಿಧಾನಾತ್ಮಕ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಈ ಆಸ್ಪತ್ರೆ ಈ ಕೂಡಲೇ ನಿಲ್ಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...