Homeಮುಖಪುಟಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

- Advertisement -
- Advertisement -

ದೆಹಲಿಯ  ಗೋವಿಂದ್‌ ವಲ್ಲಭ್‌ ಪಂತ್‌ ಆಸ್ಪತ್ರೆ (GIPMER) ತನ್ನ ನರ್ಸ್‌ಗಳು ಮಲಯಾಳಿ ಭಾಷೆಯಲ್ಲಿ ಮಾತನಾಡುವುದನ್ನು ನಿಷೇಧಿಸಿದೆ. ಆಸ್ಪತ್ರೆಯ ಆವರಣದಲ್ಲಿ ಮಲಯಾಳಂ ಬದಲು ಹಿಂದಿಯಲ್ಲಿಯೇ ಮಾತಾಡುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ತನ್ನ ಆರೋಗ್ಯ ಸಿಬ್ಬಂದಿಗೆ ಕಠಿಣವಾದ ಎಚ್ಚರಿಕೆ ಮತ್ತು ನಿರ್ದೇಶನಗಳನ್ನು ನೀಡಿದೆ. ಜೊತೆಗೆ ಹಿಂದಿ ಮತ್ತು ಇಂಗ್ಲೀಷ್‌ ಭಾಷೆಯಲ್ಲಿ ಮಾತನಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಹೆಚ್ಚಿನ ರೋಗಿಗಳು ಮಲಯಾಳಂ ಭಾಷೆಯನ್ನು ಅರ್ಥ ಮಾಡಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ನರ್ಸ್‌ಗಳು ಮಲಯಾಳಂ ಭಾಷೆಯಲ್ಲಿ ಸಂಭಾಷಣೆಯನ್ನು ನಡೆಸತೊಡಗಿದರೆ ರೋಗಿಗಳಲ್ಲಿ ಅಸಹಾಯಕ ಭಾವನೆ ಹುಟ್ಟುತ್ತದೆ. ಹಾಗಾಗಿ ಮಲಯಾಳಂ ಭಾಷೆಯಲ್ಲಿ ಮಾತನಾಡದಂತೆ ನರ್ಸ್‌ಗಳಿಗೆ ಆದೇಶಿಸಿದ್ದೇವೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ನಾವು 300-350 ನರ್ಸಿಂಗ್‌ ಸಿಬ್ಬಂದಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ನಾವು ಯಾವಾಗಲೂ ಹಿಂದಿಯಲ್ಲಿಯೇ ರೋಗಿಗಳೊಂದಿಗೆ ಸಂಭಾಷಣೆ ನಡೆಸುತ್ತೇವೆ. ನಾವು ಮಲಯಾಳಂ ನಲ್ಲಿ ಮಾತನಾಡಿದರೆ ರೋಗಿಗಳಿಗೆ ಏನೂ ಅರ್ಥವಾಗುವುದಿಲ್ಲವೆಂದೂ ತಿಳಿದಿದೆ. ಆದರೆ ನಾವು ಸಿಬ್ಬಂದಿಗಳು ಪರಸ್ಪರ ಮಾತನಾಡುವಾಗ ಮಲೆಯಾಳಂ ಭಾಷೆಯನ್ನು ಬಳಸುವಂತಿಲ್ಲ ಎಂದು ಈಗ ಆಸ್ಪತ್ರೆ ಹೇಳಿದೆ ಎಂದು ನರ್ಸ್‌ ಒಬ್ಬರು ತಿಳಿಸಿದ್ದಾರೆ.

ದೆಹಲಿಯ ಗೋವಿಂದ್‌ ವಲ್ಲಭ ಪಂತ್‌ ಆಸ್ಪತ್ರೆಯ ಮಲಯಾಳಂ ವಿರೋಧಿ ಧೋರಣೆಗೆ ದೇಶದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ಅನೇಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ದೇಶದಲ್ಲಿ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾದ ಭಾಷೆಯಲ್ಲಿ ಮುಕ್ತವಾಗಿ ಮಾತನಾಡುವ ಹಕ್ಕಿದೆ. ಸಂವಿಧಾನದ ಅನುಚ್ಛೇಧ 19 ರಲ್ಲಿ ಹೇಳಲಾದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಆಸ್ಪತ್ರೆ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಶಶಿ ತರೂರ್‌,  ಥಾಮಸ್‌ ಐಸಾಕ್‌ ಸೇರಿದಂತೆ ದೇಶದ ಅನೇಕ ರಾಜಕೀಯ ನಾಯಕರು ಮತ್ತು ಗಣ್ಯರು ದೆಹಲಿ ಆಸ್ಪತ್ರೆಯ ಹಿಂದಿ ಹೇರಿಕೆಯ ವಿರುದ್ಧ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಆಸ್ಪತ್ರೆಯ ಈ ಕ್ರಮ ಕಂಡನಾರ್ಹ. ಸಂವಿಧಾನಾತ್ಮಕ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಈ ಆಸ್ಪತ್ರೆ ಈ ಕೂಡಲೇ ನಿಲ್ಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....