Homeಮುಖಪುಟದೆಹಲಿ: ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಲೋಕತಂತ್ರ ಬಚಾವೋ’ ರ್‍ಯಾಲಿ

ದೆಹಲಿ: ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ‘ಲೋಕತಂತ್ರ ಬಚಾವೋ’ ರ್‍ಯಾಲಿ

- Advertisement -
- Advertisement -

ಪ್ರತಿಪಕ್ಷದ ಇಂಡಿಯಾ ಬ್ಲಾಕ್ ನಾಯಕರು ಭಾನುವಾರ ತಮ್ಮ ‘ಲೋಕತಂತ್ರ ಬಚಾವೋ’ (ಪ್ರಜಾಪ್ರಭುತ್ವ ಉಳಿಸಿ) ರ್ಯಾಲಿಗಾಗಿ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಸಮಾವೇಶಗೊಂಡಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧಿಸಿರುವುದನ್ನು ಖಂಡಿಸಿ ಈ ರ್ಯಾಲಿ ಎಂದು ಮೈತ್ರಿಕೂಟದ ಸದಸ್ಯ ಎಎಪಿ ಹೇಳಿದರೆ, ಇಂಡಿಯಾ ಮೈತ್ರಿಕೂಟದ ಅತಿದೊಡ್ಡ ಪಕ್ಷ ಕಾಂಗ್ರೆಸ್, ಇದು ನಿರ್ದಿಷ್ಟ ವ್ಯಕ್ತಿ ಅಥವಾ ವಿಚಾರಕ್ಕೆ ಸಂಬಂಧಿಸಿದ ಪ್ರತಿಭಟನೆಯಲ್ಲ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರದ ವಿರುದ್ಧ ಪ್ರತಿಪಕ್ಷಗಳು ಧ್ವನಿ ಎತ್ತಲಿವೆ ಎಂದು ಹೇಳಿದೆ.

ಕೆಲವು ಷರತ್ತುಗಳೊಂದಿಗೆ ದೆಹಲಿ ಪೊಲೀಸರು ರ್ಯಾಲಿಗೆ ಅನುಮತಿ ನೀಡಿದ್ದಾರೆ. ಸ್ಥಳದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅವಕಾಶ ನೀಡಬಹುದಾದರೂ,  20,000 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದೆ. 30,000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯನ್ನು ಪೊಲೀಸರು ಇಟ್ಟುಕೊಂಡಿದ್ದಾರೆ. ಆದರೆ AAP ಪಕ್ಷವು ಮೈದಾನವು ಸಂಪೂರ್ಣವಾಗಿ ತುಂಬಲಿದೆ ಎಂದು ಹೇಳಿಕೊಂಡಿದೆ.

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮತ್ತು ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಇಂಡಿಯಾ ಬ್ಲಾಕ್‌ನ ಬಹುತೇಕ ಎಲ್ಲಾ ಉನ್ನತ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮಾಜಿ ಸಿಎಂ ಅವರನ್ನು ಜನವರಿಯಲ್ಲಿ ಇಡಿ ಬಂಧಿಸಿತ್ತು.

ಈ ಸರ್ವಾಧಿಕಾರಿ ಮತ್ತು ಕೋಮುವಾದಿ ಸರ್ಕಾರದ ವಿರುದ್ಧ ದೇಶಾದ್ಯಂತ ಜನರು ಒಟ್ಟುಗೂಡಿದ್ದಾರೆ ಎಂಬ ಸಂದೇಶವನ್ನು ನೀಡುವುದಾಗಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಹೇಮಂತ್ ಸೋರೆನ್ ಅವರ ಬಂಧನ, ಯುಎಪಿಎ ನಿರಂತರ ಬಳಕೆ ಮತ್ತು ಇಡಿ-ಸಿಬಿಐ ದುರ್ಬಳಕೆ ವಿರುದ್ಧ ದೆಹಲಿಯ ಈ ಮಹಾ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ, ಇದು ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನ ಎಂದು ಕೂಡ ಹೇಳಲಾಗುತ್ತಿದೆ.

ಇದನ್ನು ಓದಿ: ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...