Homeಚಳವಳಿದೆಹಲಿ | ಜಾಮಿಯಾ ವಿದ್ಯಾರ್ಥಿಗಳ ಮೇಲೆ ಮತ್ತೆ ದಾಳಿ, 14 ವಿದ್ಯಾರ್ಥಿಗಳ ಬಂಧನ

ದೆಹಲಿ | ಜಾಮಿಯಾ ವಿದ್ಯಾರ್ಥಿಗಳ ಮೇಲೆ ಮತ್ತೆ ದಾಳಿ, 14 ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ವಿದ್ಯಾರ್ಥಿಗಳ ವಿರುದ್ಧ ದೌರ್ಜನ್ಯ ಸೇರಿದಂತೆ ಹಲವಾರು ವಿಚಾರಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಕನಿಷ್ಠ 14 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ, ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಅನೇಕ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದು, ಅವರು ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ತಿಳಿಸಿವೆ. ದೆಹಲಿ | ಜಾಮಿಯಾ

ಇಬ್ಬರು ಪಿಎಚ್‌ಡಿ ವಿದ್ಯಾರ್ಥಿಗಳ ವಿರುದ್ಧ ವಿಶ್ವವಿದ್ಯಾಲಯದ ಶಿಸ್ತು ಕ್ರಮವನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇದರೊಂದಿಗೆ, ಇತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 10 ರಿಂದ ಕ್ಯಾಂಪಸ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರು. ಅದಾಗ್ಯೂ, ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ತಮ್ಮೊಂದಿಗೆ ಯಾವುದೆ ಮಾತುಕತೆ ನಡೆಸದೆ ನೇರವಾಗಿ ಅಮಾನತು ಕ್ರಮ ಕೈಗೊಂಡಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿ 13 ರ ಗುರುವಾರ ಬೆಳಗಿನ ಜಾವ ದೆಹಲಿ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಎಂದು ವಿದ್ಯಾರ್ಥಿಗಳ ಹೇಳಿದ್ದಾರೆ ಎಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ. ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಸ್ವತಃ “ಈ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದೆ” ಎಂದು ಅವರು ಆರೋಪಿಸಿದ್ದಾರೆ. ಪೊಲೀಸರು ಬಂಧಿತ ವಿದ್ಯಾರ್ಥಿಗಳನ್ನು ಎಲ್ಲಿ ಇರಿಸಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ, ಜೊತೆಗೆ ಬಂಧನಕ್ಕೊಳಗಾದವರಲ್ಲಿ ಅನೇಕ ಮಹಿಳಾ ವಿದ್ಯಾರ್ಥಿಗಳಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯ ಆಡಳಿತ ಮಂಡಳಿ ಮತ್ತು ದೆಹಲಿ ಪೊಲೀಸರ ಈ ಕ್ರಮವನ್ನು ಖಂಡಿಸಿದ್ದು, ಇದು ಕಾನೂನುಬಾಹಿರ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ದಮನ ಎಂದು ಕರೆದಿವೆ.

ಫೆಬ್ರವರಿ 10 ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳು ಆರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ:

— ಪಿಎಚ್‌ಡಿ ವಿದ್ಯಾರ್ಥಿಗಳಾದ ಸೌರಭ್ ಮತ್ತು ಜ್ಯೋತಿ ವಿರುದ್ಧ ಶಿಸ್ತು ಸಮಿತಿ ಸಭೆಯ ನಿರ್ಧಾರವನ್ನು ರದ್ದುಗೊಳಿಸಬೇಕು.

– ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ನಂತರ ಹೊರಡಿಸಲಾದ ಎಲ್ಲಾ ಶೋಕಾಸ್ ನೋಟಿಸ್‌ಗಳನ್ನು ಹಿಂಪಡೆಯಬೇಕು. ದೆಹಲಿ | ಜಾಮಿಯಾ

– ಆಗಸ್ಟ್ 29, 2022 ಮತ್ತು ನವೆಂಬರ್ 29, 2024 ರಂದು ಹೊರಡಿಸಲಾದ ಕಚೇರಿ ಜ್ಞಾಪಕ ಪತ್ರವನ್ನು ರದ್ದುಗೊಳಿಸಬೇಕು.

— ವಿದ್ಯಾರ್ಥಿಗಳು ಧ್ವನಿ ಎತ್ತಿದ್ದಕ್ಕಾಗಿ ತೆಗೆದುಕೊಳ್ಳಲಾಗುತ್ತಿರುವ ಎಲ್ಲಾ ರೀತಿಯ ದಮನಕಾರಿ ಕ್ರಮಗಳನ್ನು ನಿಲ್ಲಿಸಬೇಕು.

— ಜಾಮಿಯಾ ಗೋಡೆಗಳ ಮೇಲೆ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಮತ್ತು ಘೋಷಣಾ ಬರಹ ಬರೆದಿದ್ದಕ್ಕಾಗಿ ವಿದ್ಯಾರ್ಥಿಗಳನ್ನು ಶಿಕ್ಷಿಸುವ ಸೂಚನೆಯನ್ನು ರದ್ದುಗೊಳಿಸಬೇಕು.

— ಅಭಿವ್ಯಕ್ತಿ ಸ್ವಾತಂತ್ರ್ಯ, ಶಾಂತಿಯುತ ಸಭೆ ಮತ್ತು ಸಂಘಟನಾ ಸ್ವಾತಂತ್ರ್ಯವನ್ನು ಉಲ್ಲಂಘಿಸಿ ಸಭೆ ಸೇರಿ ಪ್ರತಿಭಟಿಸಿದ್ದಕ್ಕಾಗಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಶೋಕಾಸ್ ನೋಟಿಸ್‌ಗಳನ್ನು ಕಳುಹಿಸಬಾರದು.

ವಿಶ್ವವಿದ್ಯಾಲಯ ಆಡಳಿತ ಮಂಡಳಿಯೊಂದಿಗೆ ಸಂವಾದಕ್ಕಾಗಿ ನಿರಂತರ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ, ಅವರು ಅದರಲ್ಲಿ ಯಾವುದೇ ಆಸಕ್ತಿ ತೋರಿಸಲಿಲ್ಲ. ಹಾಗಾಗಿ ನಾವು ಕ್ಯಾಂಪಸ್‌ನಲ್ಲಿ ಧರಣಿ ಪ್ರಾರಂಭಿಸುವಂತೆ ಆಯಿತು. ಜೊತೆಗೆ ನಮ್ಮ ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.

ಘಟನೆಯ ವೀಡಿಯೊ ಜೊತೆಗೆ ಎಕ್ಸ್‌ನಲ್ಲಿ ಬರೆದಿರುವ ಭಾರತ ವಿದ್ಯಾರ್ಥಿ ಫಡರೇಷನ್ (SFI), “ದಿಲ್ಲಿ ಪೊಲೀಸರು JMI ಮೇಲೆ ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. JMI ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಕ್ರೂರವಾಗಿ ಬಂಧಿಸಿದ್ದಾರೆ. JMI ಪ್ರೊಕ್ಟೋರಿಯಲ್ ಸಿಬ್ಬಂದಿ ಕ್ಯಾಂಪಸ್‌ನಿಂದ ಬಲವಂತವಾಗಿ ಹೊರಗೆಳೆದಿದ್ದಾರೆ. ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ.” ಎಂದು ಹೇಳಿದೆ.

ಧರಣಿ ನೇತೃತ್ವವನ್ನು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ​​(AISA), ದಯಾರ್-ಎ-ಶೌಕ್ ಸ್ಟೂಡೆಂಟ್ ಕೇಡರ್ (DISC), ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (SFI) ಮತ್ತು ಆಲ್ ಇಂಡಿಯಾ ರೆವಲ್ಯೂಷನರಿ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIRSO) ಸೇರಿದಂತೆ ಅನೇಕ ಎಡಪಂಥೀಯ ಮತ್ತು ಇತರ ವಿದ್ಯಾರ್ಥಿ ಸಂಘಟನೆಗಳು ವಹಿಸಿದ್ದವು.

ಆದಾಗ್ಯೂ, ಜಾಮಿಯಾ ಆಡಳಿತ ಮಂಡಳಿಯು, ವಿದ್ಯಾರ್ಥಿಗಳು ಕಾಲೇಜು ಶಿಸ್ತನ್ನು “ಉಲ್ಲಂಘಿಸಿದ್ದಾರೆ” ಎಂದು ಹೇಳಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ವಾತಾವರಣವನ್ನು “ಹಾಳು ಮಾಡಿದ್ದಾರೆ”, ವಿದ್ಯಾರ್ಥಿಗಳು ತರಗತಿಗೆ ಹೋಗದಂತೆ “ತಡೆದಿದ್ದಾರೆ” ಮತ್ತು ವಿಶ್ವವಿದ್ಯಾಲಯದ ಆಸ್ತಿಯನ್ನು “ಧ್ವಂಸಗೊಳಿಸಿದ್ದಾರೆ” ಎಂದು ಅದು ಹೇಳಿಕೊಂಡಿದೆ.

ಪ್ರಾಸಂಗಿಕವಾಗಿ, ಶಿಸ್ತು ಕ್ರಮ ಕೈಗೊಳ್ಳಲಾದ ಪಿಎಚ್‌ಡಿ ವಿದ್ಯಾರ್ಥಿಗಳು 2024 ರಲ್ಲಿ ಪ್ರತಿಭಟನೆಯನ್ನು ಆಯೋಜಿಸಿದ್ದರು ಎಂದು ಆರೋಪಿಸಲಾಗಿದೆ. 2019 ರ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆಗಳ ಸ್ಮರಣಾರ್ಥ ಪ್ರತಿರೋಧ ದಿನವೆಂದು ಈ ಪ್ರತಿಭಟನೆಯನ್ನು ನಡೆಸಲಾಗಿತ್ತು.

ಡಿಸೆಂಬರ್ 15, 2019 ರಂದು ದೆಹಲಿ ಪೊಲೀಸರು ವಿಶ್ವವಿದ್ಯಾಲಯದ ಆವರಣಕ್ಕೆ ಪ್ರವೇಶಿಸಿ ಗ್ರಂಥಾಲಯದೊಳಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿಚಾರ್ಜ್ ನಡೆಸಿದ್ದರು. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿತ್ತು. ನಂತರ ಇದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪಿಎಚ್‌ಡಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಶಿಸ್ತು ಸಮಿತಿಯ ಸಭೆಯನ್ನು ಫೆಬ್ರವರಿ 25 ರಂದು ನಿಗದಿಪಡಿಸಲಾಗಿತ್ತು, ಆದರೆ ವಿಶ್ವವಿದ್ಯಾಲಯ ಆಡಳಿತವು ಇನ್ನೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಫೆಬ್ರವರಿ 11 ರ ಮಂಗಳವಾರ, ಎಐಎಸ್ಎ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಅವರನ್ನು ಜಾಮಿಯಾ ಆಡಳಿತ ಮಂಡಳಿಯು ಬಲವಂತವಾಗಿ ಕ್ಯಾಂಪಸ್‌ನಿಂದ ಹೊರಹಾಕಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಬೆಂಬಲಿಸಿ ನೇಹಾ ಜಾಮಿಯಾಕ್ಕೆ ಬಂದಿದ್ದರು.

ಇದನ್ನೂಓದಿ:  ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...