Homeಮುಖಪುಟಮದ್ಯಸೇವನೆಗೆ ವಯೋಮಿತಿ: 25 ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ

ಮದ್ಯಸೇವನೆಗೆ ವಯೋಮಿತಿ: 25 ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯಸೇವನೆ ಮಾಡಲು ಇದ್ದ ಕಾನೂನುಬದ್ಧ ವಯೋಮಿತಿಯನ್ನು 25 ರಿಂದ 21 ಕ್ಕೆ ಇಳಿಸುವುದಾಗಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸೋಮವಾರ ಘೋಷಿಸಿದ್ದಾರೆ. ಜೊತೆಗೆ ದೆಹಲಿಯಲ್ಲಿ ಯಾವುದೇ ಹೊಸ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದೂ ಹೇಳಿದ್ದಾರೆ.

ದೆಹಲಿಯಲ್ಲಿ ಮದ್ಯಪಾನ ಮಾಡಲು ಇರುವ ಕಾನೂನುಬದ್ಧ ವಯಸ್ಸು ಇನ್ನು ಮುಂದೆ 21 ಆಗಿರುತ್ತದೆ. ದೆಹಲಿಯಲ್ಲಿ ಇನ್ನು ಯಾವುದೇ ಸರ್ಕಾರಿ ಮದ್ಯದಂಗಡಿಗಳು ಇರುವುದಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಹೊಸ ಮದ್ಯದಂಗಡಿಗಳನ್ನು  ಸರ್ಕಾರದಿಂದ ತೆರೆಯಲಾಗುವುದಿಲ್ಲಎಂದು ಸಿಸೋಡಿಯಾ ಹೇಳಿದ್ದಾರೆ.

ದೆಹಲಿಯಲ್ಲಿ ಹೊಸ ಅಬಕಾರಿ ನೀತಿಯಲ್ಲಿ ಮಾಡಿರುವ ಬದಲಾವಣೆಗಳನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ ಅವರು “ಹೊಸ ಅಬಕಾರಿ ನೀತಿಯನ್ನು ಸಚಿವರ ಶಿಫಾರಸುಗಳ ಆಧಾರದ ಮೇಲೆ ಕ್ಯಾಬಿನೆಟ್ ಅಂಗೀಕರಿಸಿದೆ. ಪ್ರಸ್ತುತ ದೆಹಲಿಯಲ್ಲಿ ಶೇಕಡಾ 60 ರಷ್ಟು ಮದ್ಯದಂಗಡಿಗಳನ್ನು ಸರ್ಕಾರ ನಡೆಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

“ಮದ್ಯದ ಅಂಗಡಿಗಳ ಸಮನಾದ ವಿತರಣೆಯನ್ನು ಸರ್ಕಾರ ಖಚಿತಪಡಿಸುತ್ತದೆ. ಇದರಿಂದ ಮದ್ಯ ಮಾಫಿಯಾವನ್ನು ವ್ಯಾಪಾರದಿಂದ ಹೊರಹಾಕಲಾಗುತ್ತದೆ. ಅಬಕಾರಿ ನೀತಿಯ ಸುಧಾರಣೆಗಳ ಬಳಿಕ ಇಲಾಖೆಯಲ್ಲಿ ಶೇಕಡಾ 20 ರಷ್ಟು ಆದಾಯದ ಬೆಳವಣಿಗೆಯನ್ನು ಅಂದಾಜಿಸಲಾಗಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರ್ಕಾರ ರಚಿಸಿದ ತಜ್ಞರ ಸಮಿತಿಯು ಡಿಸೆಂಬರ್‌ನಲ್ಲಿ ಕಾನೂನುಬದ್ಧ ಮದ್ಯಸೇವನೆ ವಯಸ್ಸನ್ನು 21 ಕ್ಕೆ ಬದಲಾಯಿಸುವಂತೆ ಶಿಫಾರಸು ಮಾಡಿತ್ತು.

ಮುಂಬೈನಂತಹ ಇತರ ನಗರಗಳಲ್ಲಿ, 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಆಲ್ಕೋಹಾಲ್ ಪ್ರಮಾಣ ಜಾಸ್ತಿಯಿರುವ ಮದ್ಯವನ್ನು ಮಾತ್ರ ನಿಷೇಧಿಸಲಾಗಿದೆ, ಆದರೆ ವೈನ್ ಮತ್ತು ಬಿಯರ್ ಸೇವನೆಗೆ 21 ವಯೋಮಿತಿಯವರಿಗೂ ಅನುಮತಿಸಲಾಗಿದೆ. ಪ್ರಮುಖ ಜಾಗತಿಕ ನಗರಗಳಾದ ನ್ಯೂಯಾರ್ಕ್ ಮತ್ತು ಲಂಡನ್ನಲ್ಲಿ, ಮದ್ಯಸೇವನೆ ವಯೋಮೀತಿ ಕ್ರಮವಾಗಿ 21 ಮತ್ತು 18 ಆಗಿದೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...