Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು 'ಅರಬಿಂದೋ...

ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 21 ರಂದು ಬಂಧಿಸಿದೆ.

ಕಳೆದ ಒಂದು ವಾರದ ಹಿಂದೆ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಹಾಗೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಫೆಬ್ರವರಿ 2023ರಿಂದ ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

ಬಾಂಡ್‌ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗ ನಿನ್ನೆ(ಮಾ.21) ಸಂಜೆ ತನ್ನ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ.

ಇದರಲ್ಲಿ ಮಹತ್ವದ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಅದೇನೆಂದರೆ, ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಕವಿತಾ ಅವರ ಸಹ ಆರೋಪಿ ಪಿ ಶರತ್ ಚಂದ್ರ ಅವರು ಇಡಿಯಿಂದ ಬಂಧಿಸಲ್ಪಟ್ಟ ಬೆನ್ನಲ್ಲೇ ಅವರ ಅರಬಿಂದೋ ಫಾರ್ಮಾ ಕಂಪನಿ ಬಿಜೆಪಿಗೆ 5 ಕೋಟಿ ರೂಪಾಯಿ ದೇಣಿಗೆ ನೀಡಿರುವುದು ಗೊತ್ತಾಗಿದೆ.

ಹೈದರಾಬಾದ್ ಮೂಲದ ಉದ್ಯಮಿ ಪಿ ಶರತ್ ಚಂದ್ರ ರೆಡ್ಡಿ ಅವರು ತಮ್ಮ ತಂದೆ ಪಿವಿ ರಾಮ್ ಪ್ರಸಾದ್ ರೆಡ್ಡಿ ಸ್ಥಾಪಿಸಿದ ‘ಅರಬಿಂದೋ ಫಾರ್ಮಾ ಲಿಮಿಟೆಡ್‌’ನ ನಿರ್ದೇಶಕರಲ್ಲಿ ಒಬ್ಬರು. ನವೆಂಬರ್ 11, 2022ರಂದು ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇಡಿ ಇವರನ್ನು ಬಂಧಿಸಿತ್ತು. ನವೆಂಬರ್ 15 ರಂದು ಶರತ್ ಚಂದ್ರ ರೆಡ್ಡಿ ಅವರ ಕಂಪನಿ ಅರಬಿಂದೋ ಫಾರ್ಮಾ 5 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. 2022ರ ನವೆಂಬರ್ 21 ರಂದು ಅವೆಲ್ಲವನ್ನೂ ಬಿಜೆಪಿ ನಗದೀಕರಣ ಮಾಡಿಕೊಂಡಿದೆ. ಜೂನ್ 2023ರಲ್ಲಿ ಶರತ್ ಚಂದ್ರ ರೆಡ್ಡಿ ಈ ಪ್ರಕರಣದಲ್ಲಿ ಅನುಮೋದಕರಾದರು. ನವೆಂಬರ್ 2023ರಲ್ಲಿ ಅರಬಿಂದೋ ಫಾರ್ಮಾ ಬಿಜೆಪಿಗೆ 25 ಕೋಟಿ ರೂ. ದೇಣಿಗೆ ನೀಡಿದೆ.

ಒಟ್ಟಾರೆಯಾಗಿ, ಅರಬಿಂದೋ ಫಾರ್ಮಾ ಲಿಮಿಟೆಡ್‌ 52 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಅದರಲ್ಲಿ 34.5 ಕೋಟಿ ರೂಪಾಯಿ ಬಿಜೆಪಿಗೆ ಹೋಗಿದೆ. ಅರಬಿಂದೋ ಕಂಪನಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಗೆ ರೂ. 15 ಕೋಟಿ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಕ್ಕೆ ರೂ. 2.5 ಕೋಟಿ ದೇಣಿಗೆ ನೀಡಿದೆ.

Image Courtesy : The news minute

2021-22ರಲ್ಲಿ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರವು ಕೆಲ ತಿಂಗಳ ಕಾಲ ನೂತನ ಅಬಕಾರಿ ನೀತಿಯನ್ನು ಜಾರಿಗೊಳಿಸಿತ್ತು. ಆಗ ದೆಹಲಿಯಲ್ಲಿ ಮದ್ಯದ ಪರವಾನಗಿ ಪ್ರಕ್ರಿಯೆಗೆ ಕಿಕ್‌ಬ್ಯಾಕ್‌ ನೀಡುವಲ್ಲಿ ಶರತ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಇಡಿ ‘ದಕ್ಷಿಣ ಗುಂಪು'(ಸೌತ್ ಗ್ರೂಪ್) ಎಂದು ಉಲ್ಲೇಖಿಸಿರುವ ತೆಲುಗು ರಾಜ್ಯಗಳ ಹಲವಾರು ವ್ಯಕ್ತಿಗಳಲ್ಲಿ ಶರತ್ ಮತ್ತು ಕವಿತಾ ಸೇರಿದ್ದಾರೆ.

ದಕ್ಷಿಣ ಗುಂಪು ಒಳಗೊಂಡಿರುವ ವ್ಯಕ್ತಿಗಳು ಆಮ್ ಆದ್ಮಿ ಪಕ್ಷಕ್ಕೆ ಪಕ್ಷದ ಸಂವಹನ ಉಸ್ತುವಾರಿ ವಹಿಸಿದ್ದ ವಿಜಯ್ ನಾಯರ್ ಮೂಲಕ ಸುಮಾರು 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ದೆಹಲಿಯಲ್ಲಿ ಮದ್ಯದ ವ್ಯವಹಾರದ ಮೇಲೆ ಹಿಡಿತ ಸಾಧಿಸಲು ಈ ಮೊತ್ತವನ್ನು ಪಾವತಿಸಲಾಗಿದೆ ಮತ್ತು 2022ರ ಗೋವಾ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಮ್ ಆದ್ಮಿ ಪಕ್ಷವು ಈ ಹಣವನ್ನು ಬಳಸಿದೆ ಎಂದು ಇಡಿ ಆರೋಪಿಸಿದೆ.

ಜೂನ್ 1,2023 ರಂದು, ದೆಹಲಿ ನ್ಯಾಯಾಲಯವು ಶರತ್‌ಗೆ ಪ್ರಕರಣದಲ್ಲಿ ಅನುಮೋದಿಸಲು ಅನುಮತಿ ನೀಡಿತ್ತು. ‘ದಕ್ಷಿಣ ಗುಂಪಿನ’ ನ ಇತರ ಇಬ್ಬರು ಸದಸ್ಯರಾದ ಒಂಗೋಲ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ (ವೈಎಸ್‌ಆರ್‌ಸಿಪಿ ಟಿಕೆಟ್‌ನಲ್ಲಿ ಗೆದ್ದು ಇತ್ತೀಚೆಗೆ ಟಿಡಿಪಿಗೆ ಸೇರಿದವರು) ಮತ್ತು ಅವರ ಮಗ ರಾಘವ್ ಕೂಡ ದೆಹಲಿ ಮೂಲದ ಉದ್ಯಮಿ ದಿನೇಶ್ ಅರೋರಾ ಅವರಂತೆ ಈ ಪ್ರಕರಣದಲ್ಲಿ ಅನುಮೋದಕರಾಗಿದ್ದಾರೆ.

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖ್ಯಸ್ಥ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೂ ಅರಬಿಂದೋ ಫಾರ್ಮಾದ ಶರತ್ ಅವರ ಹೆಸರು ಕೇಳಿ ಬಂದಿದೆ.

2012ರಲ್ಲಿ ಜಗನ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ ಆರೋಪ ಪಟ್ಟಿಯಲ್ಲಿ ಶರತ್ ಹೆಸರಿತ್ತು. ಇದು 2006 ರಲ್ಲಿ ಆಂಧ್ರ ಪ್ರದೇಶ ಕೈಗಾರಿಕಾ ಮೂಲಸೌಕರ್ಯ ನಿಗಮದೊಂದಿಗೆ ಭೂ ಮಾರಾಟ ಒಪ್ಪಂದಕ್ಕೆ ಸಂಬಂಧಿಸಿದೆ. ಶರತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾಗ ಟ್ರೈಡೆಂಟ್ ಲೈಫ್ ಸೈನ್ಸಸ್ ಲಿಮಿಟೆಡ್‌ಗೆ ಲಾಭ ಮಾಡಿಕೊಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವು ನವೆಂಬರ್ 2021ರಲ್ಲಿ ಮದ್ಯ ನೀತಿಯನ್ನು ಪರಿಚಯಿಸಿತ್ತು. ಜುಲೈ 2022 ರಲ್ಲಿ ಅದನ್ನು ರದ್ದುಗೊಳಿಸಲಾಗಿದೆ. ಕೇಂದ್ರೀಯ ತನಿಖಾ ದಳ(ಸಿಬಿಐ) ವು ನೀತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಕರಣವನ್ನು ದಾಖಲಿಸಿದೆ.

ಕೆಲ ಮದ್ಯ ಮಾರಾಟಗಾರರಿಗೆ ಆದ್ಯತೆಯ ಮೂಲಕ ಕಾರ್ಟೆಲೈಸೇಶನ್ ಅನ್ನು ನೀಡಲಾಗಿದೆ ಎಂದು ಸಿಐಡಿ ಹೇಳಿದೆ. ವಿತರಕರು ಮದ್ಯದ ಪರವಾನಗಿಗಾಗಿ 100 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಜಾರಿ ನಿರ್ದೇಶನಾಲಯವು ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.

ಮಾರ್ಚ್ 9, 2023 ರಂದು ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಬಂಧಿಸಿದ ನಂತರ ಜಾರಿ ನಿರ್ದೇಶನಾಲಯವು ಕವಿತಾ ಅವರೂ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದಿತ್ತು.

ಮಾಹಿತಿ ಕೃಪೆ : The news minute

ಇದನ್ನೂ ಓದಿ : ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...