Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು 'ಅರಬಿಂದೋ...

ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 21 ರಂದು ಬಂಧಿಸಿದೆ.

ಕಳೆದ ಒಂದು ವಾರದ ಹಿಂದೆ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಹಾಗೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಫೆಬ್ರವರಿ 2023ರಿಂದ ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

ಬಾಂಡ್‌ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗ ನಿನ್ನೆ(ಮಾ.21) ಸಂಜೆ ತನ್ನ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ.

ಇದರಲ್ಲಿ ಮಹತ್ವದ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಅದೇನೆಂದರೆ, ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಕವಿತಾ ಅವರ ಸಹ ಆರೋಪಿ ಪಿ ಶರತ್ ಚಂದ್ರ ಅವರು ಇಡಿಯಿಂದ ಬಂಧಿಸಲ್ಪಟ್ಟ ಬೆನ್ನಲ್ಲೇ ಅವರ ಅರಬಿಂದೋ ಫಾರ್ಮಾ ಕಂಪನಿ ಬಿಜೆಪಿಗೆ 5 ಕೋಟಿ ರೂಪಾಯಿ ದೇಣಿಗೆ ನೀಡಿರುವುದು ಗೊತ್ತಾಗಿದೆ.

ಹೈದರಾಬಾದ್ ಮೂಲದ ಉದ್ಯಮಿ ಪಿ ಶರತ್ ಚಂದ್ರ ರೆಡ್ಡಿ ಅವರು ತಮ್ಮ ತಂದೆ ಪಿವಿ ರಾಮ್ ಪ್ರಸಾದ್ ರೆಡ್ಡಿ ಸ್ಥಾಪಿಸಿದ ‘ಅರಬಿಂದೋ ಫಾರ್ಮಾ ಲಿಮಿಟೆಡ್‌’ನ ನಿರ್ದೇಶಕರಲ್ಲಿ ಒಬ್ಬರು. ನವೆಂಬರ್ 11, 2022ರಂದು ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇಡಿ ಇವರನ್ನು ಬಂಧಿಸಿತ್ತು. ನವೆಂಬರ್ 15 ರಂದು ಶರತ್ ಚಂದ್ರ ರೆಡ್ಡಿ ಅವರ ಕಂಪನಿ ಅರಬಿಂದೋ ಫಾರ್ಮಾ 5 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. 2022ರ ನವೆಂಬರ್ 21 ರಂದು ಅವೆಲ್ಲವನ್ನೂ ಬಿಜೆಪಿ ನಗದೀಕರಣ ಮಾಡಿಕೊಂಡಿದೆ. ಜೂನ್ 2023ರಲ್ಲಿ ಶರತ್ ಚಂದ್ರ ರೆಡ್ಡಿ ಈ ಪ್ರಕರಣದಲ್ಲಿ ಅನುಮೋದಕರಾದರು. ನವೆಂಬರ್ 2023ರಲ್ಲಿ ಅರಬಿಂದೋ ಫಾರ್ಮಾ ಬಿಜೆಪಿಗೆ 25 ಕೋಟಿ ರೂ. ದೇಣಿಗೆ ನೀಡಿದೆ.

ಒಟ್ಟಾರೆಯಾಗಿ, ಅರಬಿಂದೋ ಫಾರ್ಮಾ ಲಿಮಿಟೆಡ್‌ 52 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಅದರಲ್ಲಿ 34.5 ಕೋಟಿ ರೂಪಾಯಿ ಬಿಜೆಪಿಗೆ ಹೋಗಿದೆ. ಅರಬಿಂದೋ ಕಂಪನಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಗೆ ರೂ. 15 ಕೋಟಿ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಕ್ಕೆ ರೂ. 2.5 ಕೋಟಿ ದೇಣಿಗೆ ನೀಡಿದೆ.

Image Courtesy : The news minute

2021-22ರಲ್ಲಿ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರವು ಕೆಲ ತಿಂಗಳ ಕಾಲ ನೂತನ ಅಬಕಾರಿ ನೀತಿಯನ್ನು ಜಾರಿಗೊಳಿಸಿತ್ತು. ಆಗ ದೆಹಲಿಯಲ್ಲಿ ಮದ್ಯದ ಪರವಾನಗಿ ಪ್ರಕ್ರಿಯೆಗೆ ಕಿಕ್‌ಬ್ಯಾಕ್‌ ನೀಡುವಲ್ಲಿ ಶರತ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಇಡಿ ‘ದಕ್ಷಿಣ ಗುಂಪು'(ಸೌತ್ ಗ್ರೂಪ್) ಎಂದು ಉಲ್ಲೇಖಿಸಿರುವ ತೆಲುಗು ರಾಜ್ಯಗಳ ಹಲವಾರು ವ್ಯಕ್ತಿಗಳಲ್ಲಿ ಶರತ್ ಮತ್ತು ಕವಿತಾ ಸೇರಿದ್ದಾರೆ.

ದಕ್ಷಿಣ ಗುಂಪು ಒಳಗೊಂಡಿರುವ ವ್ಯಕ್ತಿಗಳು ಆಮ್ ಆದ್ಮಿ ಪಕ್ಷಕ್ಕೆ ಪಕ್ಷದ ಸಂವಹನ ಉಸ್ತುವಾರಿ ವಹಿಸಿದ್ದ ವಿಜಯ್ ನಾಯರ್ ಮೂಲಕ ಸುಮಾರು 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ದೆಹಲಿಯಲ್ಲಿ ಮದ್ಯದ ವ್ಯವಹಾರದ ಮೇಲೆ ಹಿಡಿತ ಸಾಧಿಸಲು ಈ ಮೊತ್ತವನ್ನು ಪಾವತಿಸಲಾಗಿದೆ ಮತ್ತು 2022ರ ಗೋವಾ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಮ್ ಆದ್ಮಿ ಪಕ್ಷವು ಈ ಹಣವನ್ನು ಬಳಸಿದೆ ಎಂದು ಇಡಿ ಆರೋಪಿಸಿದೆ.

ಜೂನ್ 1,2023 ರಂದು, ದೆಹಲಿ ನ್ಯಾಯಾಲಯವು ಶರತ್‌ಗೆ ಪ್ರಕರಣದಲ್ಲಿ ಅನುಮೋದಿಸಲು ಅನುಮತಿ ನೀಡಿತ್ತು. ‘ದಕ್ಷಿಣ ಗುಂಪಿನ’ ನ ಇತರ ಇಬ್ಬರು ಸದಸ್ಯರಾದ ಒಂಗೋಲ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ (ವೈಎಸ್‌ಆರ್‌ಸಿಪಿ ಟಿಕೆಟ್‌ನಲ್ಲಿ ಗೆದ್ದು ಇತ್ತೀಚೆಗೆ ಟಿಡಿಪಿಗೆ ಸೇರಿದವರು) ಮತ್ತು ಅವರ ಮಗ ರಾಘವ್ ಕೂಡ ದೆಹಲಿ ಮೂಲದ ಉದ್ಯಮಿ ದಿನೇಶ್ ಅರೋರಾ ಅವರಂತೆ ಈ ಪ್ರಕರಣದಲ್ಲಿ ಅನುಮೋದಕರಾಗಿದ್ದಾರೆ.

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖ್ಯಸ್ಥ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೂ ಅರಬಿಂದೋ ಫಾರ್ಮಾದ ಶರತ್ ಅವರ ಹೆಸರು ಕೇಳಿ ಬಂದಿದೆ.

2012ರಲ್ಲಿ ಜಗನ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ ಆರೋಪ ಪಟ್ಟಿಯಲ್ಲಿ ಶರತ್ ಹೆಸರಿತ್ತು. ಇದು 2006 ರಲ್ಲಿ ಆಂಧ್ರ ಪ್ರದೇಶ ಕೈಗಾರಿಕಾ ಮೂಲಸೌಕರ್ಯ ನಿಗಮದೊಂದಿಗೆ ಭೂ ಮಾರಾಟ ಒಪ್ಪಂದಕ್ಕೆ ಸಂಬಂಧಿಸಿದೆ. ಶರತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾಗ ಟ್ರೈಡೆಂಟ್ ಲೈಫ್ ಸೈನ್ಸಸ್ ಲಿಮಿಟೆಡ್‌ಗೆ ಲಾಭ ಮಾಡಿಕೊಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವು ನವೆಂಬರ್ 2021ರಲ್ಲಿ ಮದ್ಯ ನೀತಿಯನ್ನು ಪರಿಚಯಿಸಿತ್ತು. ಜುಲೈ 2022 ರಲ್ಲಿ ಅದನ್ನು ರದ್ದುಗೊಳಿಸಲಾಗಿದೆ. ಕೇಂದ್ರೀಯ ತನಿಖಾ ದಳ(ಸಿಬಿಐ) ವು ನೀತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಕರಣವನ್ನು ದಾಖಲಿಸಿದೆ.

ಕೆಲ ಮದ್ಯ ಮಾರಾಟಗಾರರಿಗೆ ಆದ್ಯತೆಯ ಮೂಲಕ ಕಾರ್ಟೆಲೈಸೇಶನ್ ಅನ್ನು ನೀಡಲಾಗಿದೆ ಎಂದು ಸಿಐಡಿ ಹೇಳಿದೆ. ವಿತರಕರು ಮದ್ಯದ ಪರವಾನಗಿಗಾಗಿ 100 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಜಾರಿ ನಿರ್ದೇಶನಾಲಯವು ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.

ಮಾರ್ಚ್ 9, 2023 ರಂದು ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಬಂಧಿಸಿದ ನಂತರ ಜಾರಿ ನಿರ್ದೇಶನಾಲಯವು ಕವಿತಾ ಅವರೂ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದಿತ್ತು.

ಮಾಹಿತಿ ಕೃಪೆ : The news minute

ಇದನ್ನೂ ಓದಿ : ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...