Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು 'ಅರಬಿಂದೋ...

ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 21 ರಂದು ಬಂಧಿಸಿದೆ.

ಕಳೆದ ಒಂದು ವಾರದ ಹಿಂದೆ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಹಾಗೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಫೆಬ್ರವರಿ 2023ರಿಂದ ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

ಬಾಂಡ್‌ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗ ನಿನ್ನೆ(ಮಾ.21) ಸಂಜೆ ತನ್ನ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ.

ಇದರಲ್ಲಿ ಮಹತ್ವದ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಅದೇನೆಂದರೆ, ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಕವಿತಾ ಅವರ ಸಹ ಆರೋಪಿ ಪಿ ಶರತ್ ಚಂದ್ರ ಅವರು ಇಡಿಯಿಂದ ಬಂಧಿಸಲ್ಪಟ್ಟ ಬೆನ್ನಲ್ಲೇ ಅವರ ಅರಬಿಂದೋ ಫಾರ್ಮಾ ಕಂಪನಿ ಬಿಜೆಪಿಗೆ 5 ಕೋಟಿ ರೂಪಾಯಿ ದೇಣಿಗೆ ನೀಡಿರುವುದು ಗೊತ್ತಾಗಿದೆ.

ಹೈದರಾಬಾದ್ ಮೂಲದ ಉದ್ಯಮಿ ಪಿ ಶರತ್ ಚಂದ್ರ ರೆಡ್ಡಿ ಅವರು ತಮ್ಮ ತಂದೆ ಪಿವಿ ರಾಮ್ ಪ್ರಸಾದ್ ರೆಡ್ಡಿ ಸ್ಥಾಪಿಸಿದ ‘ಅರಬಿಂದೋ ಫಾರ್ಮಾ ಲಿಮಿಟೆಡ್‌’ನ ನಿರ್ದೇಶಕರಲ್ಲಿ ಒಬ್ಬರು. ನವೆಂಬರ್ 11, 2022ರಂದು ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇಡಿ ಇವರನ್ನು ಬಂಧಿಸಿತ್ತು. ನವೆಂಬರ್ 15 ರಂದು ಶರತ್ ಚಂದ್ರ ರೆಡ್ಡಿ ಅವರ ಕಂಪನಿ ಅರಬಿಂದೋ ಫಾರ್ಮಾ 5 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. 2022ರ ನವೆಂಬರ್ 21 ರಂದು ಅವೆಲ್ಲವನ್ನೂ ಬಿಜೆಪಿ ನಗದೀಕರಣ ಮಾಡಿಕೊಂಡಿದೆ. ಜೂನ್ 2023ರಲ್ಲಿ ಶರತ್ ಚಂದ್ರ ರೆಡ್ಡಿ ಈ ಪ್ರಕರಣದಲ್ಲಿ ಅನುಮೋದಕರಾದರು. ನವೆಂಬರ್ 2023ರಲ್ಲಿ ಅರಬಿಂದೋ ಫಾರ್ಮಾ ಬಿಜೆಪಿಗೆ 25 ಕೋಟಿ ರೂ. ದೇಣಿಗೆ ನೀಡಿದೆ.

ಒಟ್ಟಾರೆಯಾಗಿ, ಅರಬಿಂದೋ ಫಾರ್ಮಾ ಲಿಮಿಟೆಡ್‌ 52 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಅದರಲ್ಲಿ 34.5 ಕೋಟಿ ರೂಪಾಯಿ ಬಿಜೆಪಿಗೆ ಹೋಗಿದೆ. ಅರಬಿಂದೋ ಕಂಪನಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಗೆ ರೂ. 15 ಕೋಟಿ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಕ್ಕೆ ರೂ. 2.5 ಕೋಟಿ ದೇಣಿಗೆ ನೀಡಿದೆ.

Image Courtesy : The news minute

2021-22ರಲ್ಲಿ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರವು ಕೆಲ ತಿಂಗಳ ಕಾಲ ನೂತನ ಅಬಕಾರಿ ನೀತಿಯನ್ನು ಜಾರಿಗೊಳಿಸಿತ್ತು. ಆಗ ದೆಹಲಿಯಲ್ಲಿ ಮದ್ಯದ ಪರವಾನಗಿ ಪ್ರಕ್ರಿಯೆಗೆ ಕಿಕ್‌ಬ್ಯಾಕ್‌ ನೀಡುವಲ್ಲಿ ಶರತ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಇಡಿ ‘ದಕ್ಷಿಣ ಗುಂಪು'(ಸೌತ್ ಗ್ರೂಪ್) ಎಂದು ಉಲ್ಲೇಖಿಸಿರುವ ತೆಲುಗು ರಾಜ್ಯಗಳ ಹಲವಾರು ವ್ಯಕ್ತಿಗಳಲ್ಲಿ ಶರತ್ ಮತ್ತು ಕವಿತಾ ಸೇರಿದ್ದಾರೆ.

ದಕ್ಷಿಣ ಗುಂಪು ಒಳಗೊಂಡಿರುವ ವ್ಯಕ್ತಿಗಳು ಆಮ್ ಆದ್ಮಿ ಪಕ್ಷಕ್ಕೆ ಪಕ್ಷದ ಸಂವಹನ ಉಸ್ತುವಾರಿ ವಹಿಸಿದ್ದ ವಿಜಯ್ ನಾಯರ್ ಮೂಲಕ ಸುಮಾರು 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ದೆಹಲಿಯಲ್ಲಿ ಮದ್ಯದ ವ್ಯವಹಾರದ ಮೇಲೆ ಹಿಡಿತ ಸಾಧಿಸಲು ಈ ಮೊತ್ತವನ್ನು ಪಾವತಿಸಲಾಗಿದೆ ಮತ್ತು 2022ರ ಗೋವಾ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಮ್ ಆದ್ಮಿ ಪಕ್ಷವು ಈ ಹಣವನ್ನು ಬಳಸಿದೆ ಎಂದು ಇಡಿ ಆರೋಪಿಸಿದೆ.

ಜೂನ್ 1,2023 ರಂದು, ದೆಹಲಿ ನ್ಯಾಯಾಲಯವು ಶರತ್‌ಗೆ ಪ್ರಕರಣದಲ್ಲಿ ಅನುಮೋದಿಸಲು ಅನುಮತಿ ನೀಡಿತ್ತು. ‘ದಕ್ಷಿಣ ಗುಂಪಿನ’ ನ ಇತರ ಇಬ್ಬರು ಸದಸ್ಯರಾದ ಒಂಗೋಲ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ (ವೈಎಸ್‌ಆರ್‌ಸಿಪಿ ಟಿಕೆಟ್‌ನಲ್ಲಿ ಗೆದ್ದು ಇತ್ತೀಚೆಗೆ ಟಿಡಿಪಿಗೆ ಸೇರಿದವರು) ಮತ್ತು ಅವರ ಮಗ ರಾಘವ್ ಕೂಡ ದೆಹಲಿ ಮೂಲದ ಉದ್ಯಮಿ ದಿನೇಶ್ ಅರೋರಾ ಅವರಂತೆ ಈ ಪ್ರಕರಣದಲ್ಲಿ ಅನುಮೋದಕರಾಗಿದ್ದಾರೆ.

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖ್ಯಸ್ಥ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೂ ಅರಬಿಂದೋ ಫಾರ್ಮಾದ ಶರತ್ ಅವರ ಹೆಸರು ಕೇಳಿ ಬಂದಿದೆ.

2012ರಲ್ಲಿ ಜಗನ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ ಆರೋಪ ಪಟ್ಟಿಯಲ್ಲಿ ಶರತ್ ಹೆಸರಿತ್ತು. ಇದು 2006 ರಲ್ಲಿ ಆಂಧ್ರ ಪ್ರದೇಶ ಕೈಗಾರಿಕಾ ಮೂಲಸೌಕರ್ಯ ನಿಗಮದೊಂದಿಗೆ ಭೂ ಮಾರಾಟ ಒಪ್ಪಂದಕ್ಕೆ ಸಂಬಂಧಿಸಿದೆ. ಶರತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾಗ ಟ್ರೈಡೆಂಟ್ ಲೈಫ್ ಸೈನ್ಸಸ್ ಲಿಮಿಟೆಡ್‌ಗೆ ಲಾಭ ಮಾಡಿಕೊಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವು ನವೆಂಬರ್ 2021ರಲ್ಲಿ ಮದ್ಯ ನೀತಿಯನ್ನು ಪರಿಚಯಿಸಿತ್ತು. ಜುಲೈ 2022 ರಲ್ಲಿ ಅದನ್ನು ರದ್ದುಗೊಳಿಸಲಾಗಿದೆ. ಕೇಂದ್ರೀಯ ತನಿಖಾ ದಳ(ಸಿಬಿಐ) ವು ನೀತಿಯಲ್ಲಿನ ಅಕ್ರಮಗಳ ಬಗ್ಗೆ ಪ್ರಕರಣವನ್ನು ದಾಖಲಿಸಿದೆ.

ಕೆಲ ಮದ್ಯ ಮಾರಾಟಗಾರರಿಗೆ ಆದ್ಯತೆಯ ಮೂಲಕ ಕಾರ್ಟೆಲೈಸೇಶನ್ ಅನ್ನು ನೀಡಲಾಗಿದೆ ಎಂದು ಸಿಐಡಿ ಹೇಳಿದೆ. ವಿತರಕರು ಮದ್ಯದ ಪರವಾನಗಿಗಾಗಿ 100 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಜಾರಿ ನಿರ್ದೇಶನಾಲಯವು ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.

ಮಾರ್ಚ್ 9, 2023 ರಂದು ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಬಂಧಿಸಿದ ನಂತರ ಜಾರಿ ನಿರ್ದೇಶನಾಲಯವು ಕವಿತಾ ಅವರೂ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದಿತ್ತು.

ಮಾಹಿತಿ ಕೃಪೆ : The news minute

ಇದನ್ನೂ ಓದಿ : ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...