Homeಮುಖಪುಟತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಿಂಗಾಪುರ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಬಾರದೆಂಬ ರಾಜ್ಯದ ಲೆಫ್ಟಿನೆಂಟ್ ಗವರ್ನರ್‌ ಆಜ್ಞೆಯನ್ನು ಉಲ್ಲಂಘಿಸಿದ ಬೆನ್ನಲ್ಲೆ ಅವರ ವಿರುದ್ದ ಲಿಕ್ಕರ್ ವಿಷಯಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ವಿನಯ್ ಕುಮಾರ್‌ ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ.

“ವಿಶ್ವ ನಗರಗಳ ಶೃಂಗಸಭೆ”ಗಾಗಿ ಕೇಜ್ರಿವಾಲ್ ಅವರನ್ನು ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಆಹ್ವಾನಿಸಿದ್ದರು. ಅವರು ಆಗಸ್ಟ್ 1 ರಂದು ನಡೆಯುವ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಆದರೆ ಆ ಕಾರ್ಯಕ್ರಮ ಮೇಯರ್‌ಗಳದ್ದಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಈ ವಾದವೆ ಸರಿಯೆಂದಾದರೆ, ಪ್ರಧಾನಿ ಮೋದಿ ಅವರು ಕೂಡ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿ ಸಭೆಗೆ ಹೋಗುವುದಾಗಿ ಘೋಷಿಸಿದ್ದಾರೆ.

ದೆಹಲಿ ಮಾದರಿ ಕುರಿತು ಸಿಂಗಾಪುರ್‌ನಲ್ಲಿ ನಾನು ಮಾತನಾಡಲಿದ್ದೇನೆ. ಇದನ್ನು ತಡೆಯುವ ಸಲುವಾಗಿ ವಿನಾಕಾರಣ ತಡೆ ನೀಡಲಾಗುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದರು.

ಇದರ ಬೆನ್ನಲ್ಲೆ ಅವರ ವಿರುದ್ಧ ಜುಲೈ 8 ರಂದು ಲಿಕ್ಕರ್ ಪರವಾನಗಿ ನೀಡುವಾಗ ಟೆಂಡರ್ ನಂತರ ಹಲವು ನಿಯಮಗಳನ್ನು ಮೀರಲಾಗಿದೆ ಎಂದು ಆರೋಪಿಸಿ ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್‌ ಆದೇಶಿಸಿದ್ದಾರೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೇರವಾಗಿ ಹೆಸರಿಸಿರುವ ಲೆಫ್ಟಿನೆಂಟ್ ಗವರ್ನರ್, ವರದಿಯು ಉನ್ನತ ರಾಜಕೀಯ ಮಟ್ಟದಲ್ಲಿ “ಗಣನೀಯ” ಹಣಕಾಸಿನ ಅನುಕೂಲಗಳನ್ನು ಸೂಚಿಸುತ್ತದೆ ಎಂದು ಆರೋಪಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ರವರ ಈ ನಡೆಯನ್ನು ರಾಜಕೀಯ ಪ್ರೇರಿತ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ಸಿಎಂ ಸಿಂಗಾಪುರ ಭೇಟಿ ನಡೆಯುತ್ತದೆ ಎಂದಿದ್ದಾರೆ.

“ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ್ ಭೇಟಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ನಿರ್ಬಂಧಿಸಿದ ನಂತರ, ಸಿಎಂ ಈಗ ‘ರಾಜಕೀಯ ಕ್ಲಿಯರೆನ್ಸ್’ಗಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಭೇಟಿಯು ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತದೆಯಾದ್ದರಿಂದ ಕೇಂದ್ರವು ಈ ಅನುಮತಿಯನ್ನು ನೀಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮೇಯರ್‌ಗಳ ಸಮ್ಮೇಳನವಾಗಿರುವುದರಿಂದ ಈ ಸಮಾವೇಶಕ್ಕೆ ಹಾಜರಾಗದಂತೆ ಎಲ್‌ಜಿ ಕೇಜ್ರಿವಾಲ್‌ಗೆ ಸೂಚಿಸಿದ್ದಾರೆ. ಈ ಹಿಂದೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ಕೂಡ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಿಗೆ ಹೋಗುತ್ತಾರೆ. ಇದು ರಾಜಕೀಯ ಪ್ರೇರಿತ ಕೃತ್ಯವಾಗಿದೆ” ಎಂದು ಸಿಸೋಡಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

2019 ರಲ್ಲಿ, ಮೇಯರ್‌ಗಳಿಗೆ ಮೀಸಲಾದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದು ಯೋಗ್ಯವಲ್ಲ ಎಂದು ಹೇಳುವ ಮೂಲಕ ಒಕ್ಕೂಟ ಸರ್ಕಾರವೂ ಕೇಜ್ರಿವಾಲ್‌ಗೆ ಇದೇ ರೀತಿಯ ಭೇಟಿಗೆ ಅನುಮತಿಯನ್ನು ತಡೆಹಿಡಿದಿತ್ತು. ಅಂತಿಮವಾಗಿ ಕೇಜ್ರಿವಾಲ್ ಅವರು ಆನ್‌ಲೈನ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಯಿತು.

ಇದನ್ನೂ ಓದಿ: ಶೃಂಗಸಭೆಗೆ ತೆರಳದಂತೆ ತಡೆ: ಲೆಫ್ಟಿನೆಂಟ್ ಗವರ್ನರ್‌ರನ್ನು ಧಿಕ್ಕರಿಸಿದ ಅರವಿಂದ್ ಕೇಜ್ರಿವಾಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...