Homeಮುಖಪುಟತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಿಂಗಾಪುರ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಬಾರದೆಂಬ ರಾಜ್ಯದ ಲೆಫ್ಟಿನೆಂಟ್ ಗವರ್ನರ್‌ ಆಜ್ಞೆಯನ್ನು ಉಲ್ಲಂಘಿಸಿದ ಬೆನ್ನಲ್ಲೆ ಅವರ ವಿರುದ್ದ ಲಿಕ್ಕರ್ ವಿಷಯಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ವಿನಯ್ ಕುಮಾರ್‌ ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ.

“ವಿಶ್ವ ನಗರಗಳ ಶೃಂಗಸಭೆ”ಗಾಗಿ ಕೇಜ್ರಿವಾಲ್ ಅವರನ್ನು ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಆಹ್ವಾನಿಸಿದ್ದರು. ಅವರು ಆಗಸ್ಟ್ 1 ರಂದು ನಡೆಯುವ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಆದರೆ ಆ ಕಾರ್ಯಕ್ರಮ ಮೇಯರ್‌ಗಳದ್ದಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಈ ವಾದವೆ ಸರಿಯೆಂದಾದರೆ, ಪ್ರಧಾನಿ ಮೋದಿ ಅವರು ಕೂಡ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿ ಸಭೆಗೆ ಹೋಗುವುದಾಗಿ ಘೋಷಿಸಿದ್ದಾರೆ.

ದೆಹಲಿ ಮಾದರಿ ಕುರಿತು ಸಿಂಗಾಪುರ್‌ನಲ್ಲಿ ನಾನು ಮಾತನಾಡಲಿದ್ದೇನೆ. ಇದನ್ನು ತಡೆಯುವ ಸಲುವಾಗಿ ವಿನಾಕಾರಣ ತಡೆ ನೀಡಲಾಗುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದರು.

ಇದರ ಬೆನ್ನಲ್ಲೆ ಅವರ ವಿರುದ್ಧ ಜುಲೈ 8 ರಂದು ಲಿಕ್ಕರ್ ಪರವಾನಗಿ ನೀಡುವಾಗ ಟೆಂಡರ್ ನಂತರ ಹಲವು ನಿಯಮಗಳನ್ನು ಮೀರಲಾಗಿದೆ ಎಂದು ಆರೋಪಿಸಿ ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್‌ ಆದೇಶಿಸಿದ್ದಾರೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೇರವಾಗಿ ಹೆಸರಿಸಿರುವ ಲೆಫ್ಟಿನೆಂಟ್ ಗವರ್ನರ್, ವರದಿಯು ಉನ್ನತ ರಾಜಕೀಯ ಮಟ್ಟದಲ್ಲಿ “ಗಣನೀಯ” ಹಣಕಾಸಿನ ಅನುಕೂಲಗಳನ್ನು ಸೂಚಿಸುತ್ತದೆ ಎಂದು ಆರೋಪಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ರವರ ಈ ನಡೆಯನ್ನು ರಾಜಕೀಯ ಪ್ರೇರಿತ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ಸಿಎಂ ಸಿಂಗಾಪುರ ಭೇಟಿ ನಡೆಯುತ್ತದೆ ಎಂದಿದ್ದಾರೆ.

“ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ್ ಭೇಟಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ನಿರ್ಬಂಧಿಸಿದ ನಂತರ, ಸಿಎಂ ಈಗ ‘ರಾಜಕೀಯ ಕ್ಲಿಯರೆನ್ಸ್’ಗಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಭೇಟಿಯು ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತದೆಯಾದ್ದರಿಂದ ಕೇಂದ್ರವು ಈ ಅನುಮತಿಯನ್ನು ನೀಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮೇಯರ್‌ಗಳ ಸಮ್ಮೇಳನವಾಗಿರುವುದರಿಂದ ಈ ಸಮಾವೇಶಕ್ಕೆ ಹಾಜರಾಗದಂತೆ ಎಲ್‌ಜಿ ಕೇಜ್ರಿವಾಲ್‌ಗೆ ಸೂಚಿಸಿದ್ದಾರೆ. ಈ ಹಿಂದೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ಕೂಡ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಿಗೆ ಹೋಗುತ್ತಾರೆ. ಇದು ರಾಜಕೀಯ ಪ್ರೇರಿತ ಕೃತ್ಯವಾಗಿದೆ” ಎಂದು ಸಿಸೋಡಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

2019 ರಲ್ಲಿ, ಮೇಯರ್‌ಗಳಿಗೆ ಮೀಸಲಾದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದು ಯೋಗ್ಯವಲ್ಲ ಎಂದು ಹೇಳುವ ಮೂಲಕ ಒಕ್ಕೂಟ ಸರ್ಕಾರವೂ ಕೇಜ್ರಿವಾಲ್‌ಗೆ ಇದೇ ರೀತಿಯ ಭೇಟಿಗೆ ಅನುಮತಿಯನ್ನು ತಡೆಹಿಡಿದಿತ್ತು. ಅಂತಿಮವಾಗಿ ಕೇಜ್ರಿವಾಲ್ ಅವರು ಆನ್‌ಲೈನ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಯಿತು.

ಇದನ್ನೂ ಓದಿ: ಶೃಂಗಸಭೆಗೆ ತೆರಳದಂತೆ ತಡೆ: ಲೆಫ್ಟಿನೆಂಟ್ ಗವರ್ನರ್‌ರನ್ನು ಧಿಕ್ಕರಿಸಿದ ಅರವಿಂದ್ ಕೇಜ್ರಿವಾಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...