Homeಮುಖಪುಟದೆಹಲಿ: ಅಶ್ಲೀಲ ಚಿತ್ರ, ವಿಡಿಯೊಗಳನ್ನು ಕಳಿಸುವಂತೆ ಒತ್ತಡ ಹೇರುತ್ತಿದ್ದ ಯುವಕನ ಬಂಧನ

ದೆಹಲಿ: ಅಶ್ಲೀಲ ಚಿತ್ರ, ವಿಡಿಯೊಗಳನ್ನು ಕಳಿಸುವಂತೆ ಒತ್ತಡ ಹೇರುತ್ತಿದ್ದ ಯುವಕನ ಬಂಧನ

- Advertisement -
- Advertisement -

ದಕ್ಷಿಣ ಏಷ್ಯಾ ದೇಶಗಳ ಮಹಿಳೆಯರೊಂದಿಗೆ ಆನ್‌ಲೈನ್‌ನಲ್ಲಿ ಸ್ನೇಹ ಬೆಳೆಸಿ, ಹಣದ ಆಮಿಷ ಒಡ್ಡಿ ಅವರ ನಗ್ನ ಫೋಟೋಗಳು ಮತ್ತು ಅಶ್ಲೀಲ ವಿಡಿಯೊಗಳನ್ನು ಕಳುಹಿಸುವಂತೆ ಒತ್ತಡ ಹೇರುತ್ತಿದ್ದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಒಮ್ಮೆ ಹಣದ ಬದಲಾಗಿ ಅವರ ಅಶ್ಲೀಲ ಫೋಟೋಗಳು ಮತ್ತು ವಿಡಿಯೊಗಳನ್ನು ಕಳುಹಿಸಿದ ಬಳಿಕ ಮತ್ತಷ್ಟು ಪೋಟೋ, ವಿಡಿಯೊ ಕಳುಹಿಸಲು ಒಪ್ಪದಿದ್ದರೇ, ಮೊದಲು ಕಳುಹಿಸಿರುವ ಚಿತ್ರಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಈ ಪ್ರಕರಣದಲ್ಲಿ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಜತಿನ್ ಭಾರದ್ವಾಜ್ ಸಾಮಾನ್ಯವಾಗಿ ಖಿನ್ನತೆಯಿಂದ ಬಳಲುತ್ತಿರುವ ಮಹಿಳೆಯರನ್ನು ಅಥವಾ  ಆರ್ಥಿಕವಾಗಿ ದುರ್ಬಲಗೊಂಡ ವರ್ಗಕ್ಕೆ ಸೇರಿದ ಮಹಿಳೆಯರನ್ನು “ಟಾಕ್ ಲೈಫ್” ಎಂಬ ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಚಯ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಬುಡಕಟ್ಟು ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪತಿ ಮತ್ತು ಗ್ರಾಮಸ್ಥರು

ಇಂಡೋನೇಷ್ಯಾದ ಮಹಿಳೆಯೊಬ್ಬರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈ ಮಹಿಳೆಯೂ ಟಾಕ್ ಲೈಫ್ ಆ್ಯಪ್‌ನಲ್ಲಿ ಆರೋಪಿಯನ್ನು ಭೇಟಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಜತಿನ್ ಭಾರದ್ವಾಜ್ 15 ಕ್ಕೂ ಹೆಚ್ಚು ಮಹಿಳೆಯರನ್ನು ಈ ಆನ್‌ಲೈನ್ ಅಪ್ಲಿಕೇಶನ್ ಮೂಲಕ ಪರಿಚಯ ಮಾಡಿಕೊಂಡಿದ್ದಾರೆ. ಅವರಲ್ಲಿ ಮೂವರು ಮಹಿಳೆಯರು ಈತನಿಗೆ ನಗ್ನ ಫೋಟೋಗಳು ಮತ್ತು ವಿಡಿಯೊಗಳನ್ನು ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಮ್ಮ ತಂಡವು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿದೆ. ಆರೋಪಿಯ ಮೊಬೈಲ್ ಸಂಖ್ಯೆ ಸ್ವಿಚ್ ಆಫ್ ಆಗಿದೆ. ಆದರೆ ಮೊಬೈಲ್ ಕರೆ ವಿವರಗಳು ಮತ್ತು ಸಂಖ್ಯೆಯ ಮಾಲೀಕರು ಯಾರು ಎಂಬುದನ್ನು ತನಿಖೆ ನಡೆಸಿದ ಬಳಿಕ ಆತನನ್ನು ಬಂಧಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (ಶಹದಾರಾ) ಆರ್.ಸತ್ಯಾಸುಂದರಂ ಹೇಳಿದ್ದಾರೆ.

ಇನ್ನು ತನಿಖೆ ಮುಂದುವರೆದಿದ್ದು, ಈ ಪ್ರಕರಣದಲ್ಲಿ ಮತ್ಯಾರಾದರೂ ಭಾಗಿಯಾಗಿದ್ದಾರಾ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ ಅಶ್ಲೀಲ ವಿಷಯ ಹೊಂದಿದ್ದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...