Homeಮುಖಪುಟದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಮೀನಿನ ಅಡುಗೆಯಲ್ಲಿ ಥಾಲಿಯಮ್ (Thallium) ಎಂಬ ರಾಸಾಯನಿಕ ಬಳಸಿ ಪತ್ನಿ ಮತ್ತು ಕುಟುಂಬಕ್ಕೆ ವಿಷ ಹಾಕಿ, ಅತ್ತೆ ಮತ್ತು ಅತ್ತಿಗೆಯನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, 37 ವರ್ಷದ ವರುಣ್ ಅರೋರಾ, ಸದ್ದಾಂ ಹುಸೇನ್ ಅವರಿಂದ ಸ್ಫೂರ್ತಿ ಪಡೆದು ಈ ವಿಷವನ್ನು ಬಳಸಿದ್ದಾರೆ ಎನ್ನಲಾಗಿದೆ. ತನ್ನ ರಾಜಕೀಯ ವಿರೋಧಿಗಳನ್ನು ಕೊನೆಗಾಣಿಸಲು ಸದ್ದಾಂ ಹುಸೇನ್ ಥಾಲಿಯಮ್ ಎಂಬ ಸ್ಲೋ ಪಾಯಿಸನ್ ಬಳಸುತ್ತಿದ್ದರು ಎನ್ನಲಾಗಿದೆ.

ಕೊಲೆಗಳ ತನಿಖೆ ಬಳಿಕ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿರುವ ಮನೆಯಿಂದ ಆರೋಪಿ ವರುಣ್ ಅರೋರಾನನ್ನು ಮಂಗಳವಾರ ಬಂಧಿಸಲಾಗಿದೆ. ತನಗೆ ಮಾಡಿದ್ದ ಅಪಮಾನಕ್ಕೆ ಪ್ರತಿಕಾರವಾಗಿ ಮೀನಿನ ಅಡಿಗೆಯಲ್ಲಿ ವಿಷ ಬೆರೆಸಿ ತನ್ನ ಪತ್ನಿ ಮತ್ತು ಮನೆಯವರಿಗೆ ಬಡಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಆರೋಪಿ ವರುಣ್ ಅರೋರಾ, ಅತ್ತೆ ಅನಿತಾ ದೇವಿ ಶರ್ಮಾ ಅವರ ಸಾವಿನ ಬಗ್ಗೆ ವಿಧಿವಿಜ್ಞಾನದ ವರದಿಯು ಥಾಲಿಯಮ್ ಕುರುಹುಗಳನ್ನು ಬಹಿರಂಗಪಡಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು. ಜೊತೆಗೆ ಆತನ ಪತ್ನಿ ರಕ್ತದಲ್ಲಿ ವಿಷದ ಕುರುಹುಗಳು ಇದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

“ಹೆಚ್ಚಿನ ವಿಚಾರಣೆಯ ಸಮಯದಲ್ಲಿ, ಮೃತ ಅನಿತಾ ಅವರ ಕಿರಿಯ ಮಗಳಾದ ಪ್ರಿಯಾಂಕಾ ಕೂಡ ಬಿ.ಎಲ್. ಕಪೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಫೆಬ್ರವರಿ 15 ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಆರೋಪಿಯ ಮಾವ ದೇವೇಂದರ್ ಮೋಹನ್ ಶರ್ಮಾ ಅವರ ದೇಹದಲ್ಲೂ ಥಾಲಿಯಮ್ ವಿಷದ ಲಕ್ಷಣಗಳು ಕಂಡುಬಂದಿವೆ.  ಅಲ್ಲದೆ, ಹೆಚ್ಚಿನ ವಿಚಾರಣೆಯಲ್ಲಿ ಅವರ ಮನೆಯ ಕೆಲಸದಾಕೆ ಕೂಡ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ” ಎಂದು ಉಪ ಪೊಲೀಸ್ ಆಯುಕ್ತ ಉರ್ವಿಜಾ ಗೋಯೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಘಟನೆಗಳು ಥಾಲಿಯಮ್ ವಿಷದತ್ತ ಗಮನಸೆಳೆದಿದ್ದ ಕಾರಣ, ಪೊಲೀಸರು ಫೋರೆನ್ಸಿಕ್ ತಂಡವನ್ನು ಮೃತರ ಮನೆಗೆ ಕಳುಹಿಸಿದ್ದರು. ಅಲ್ಲಿ ಥಾಲಿಯಮ್ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ತನಿಖೆಯ ಸಮಯದಲ್ಲಿ, ಆರೋಪಿ ಅರೋರಾ ಜನವರಿ ಅಂತ್ಯದಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದರು. ಆಗ ಅವರಿಗೆ ಮೀನಿನ ಖಾದ್ಯ ತಂದಿದ್ದರು. ಸತತ ವಿಚಾರಣೆ ನಡೆಸಿದ ನಂತರ ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವರುಣ್ ಅರೋರಾ ಥಾಲಿಯಮ್ ಸಂಗ್ರಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅದನ್ನು ಅನಿತಾ (ಅತ್ತೆ), ದಿವ್ಯಾ (ಹೆಂಡತಿ), ದೇವೇಂದರ್ ಮೋಹನ್ ಶರ್ಮಾ (ಮಾವ) ಮತ್ತು ಪ್ರಿಯಾಂಕಾ (ಅತ್ತಿಗೆ) ಗೆ ನೀಡಿದ್ದಾಗಿ ಅವರು ಹೇಳಿದ್ದಾರೆ. ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು. ಇದಲ್ಲದೆ, ಆರೋಪಿ ವರುಣ್ ಅರೋರಾ ಅವರ ಮನೆಯಲ್ಲಿ ಥಾಲಿಯಮ್   ಕಂಡುಬಂದಿದೆ “ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...