Homeಮುಖಪುಟದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಮೀನಿನ ಅಡುಗೆಯಲ್ಲಿ ಥಾಲಿಯಮ್ (Thallium) ಎಂಬ ರಾಸಾಯನಿಕ ಬಳಸಿ ಪತ್ನಿ ಮತ್ತು ಕುಟುಂಬಕ್ಕೆ ವಿಷ ಹಾಕಿ, ಅತ್ತೆ ಮತ್ತು ಅತ್ತಿಗೆಯನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, 37 ವರ್ಷದ ವರುಣ್ ಅರೋರಾ, ಸದ್ದಾಂ ಹುಸೇನ್ ಅವರಿಂದ ಸ್ಫೂರ್ತಿ ಪಡೆದು ಈ ವಿಷವನ್ನು ಬಳಸಿದ್ದಾರೆ ಎನ್ನಲಾಗಿದೆ. ತನ್ನ ರಾಜಕೀಯ ವಿರೋಧಿಗಳನ್ನು ಕೊನೆಗಾಣಿಸಲು ಸದ್ದಾಂ ಹುಸೇನ್ ಥಾಲಿಯಮ್ ಎಂಬ ಸ್ಲೋ ಪಾಯಿಸನ್ ಬಳಸುತ್ತಿದ್ದರು ಎನ್ನಲಾಗಿದೆ.

ಕೊಲೆಗಳ ತನಿಖೆ ಬಳಿಕ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿರುವ ಮನೆಯಿಂದ ಆರೋಪಿ ವರುಣ್ ಅರೋರಾನನ್ನು ಮಂಗಳವಾರ ಬಂಧಿಸಲಾಗಿದೆ. ತನಗೆ ಮಾಡಿದ್ದ ಅಪಮಾನಕ್ಕೆ ಪ್ರತಿಕಾರವಾಗಿ ಮೀನಿನ ಅಡಿಗೆಯಲ್ಲಿ ವಿಷ ಬೆರೆಸಿ ತನ್ನ ಪತ್ನಿ ಮತ್ತು ಮನೆಯವರಿಗೆ ಬಡಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಆರೋಪಿ ವರುಣ್ ಅರೋರಾ, ಅತ್ತೆ ಅನಿತಾ ದೇವಿ ಶರ್ಮಾ ಅವರ ಸಾವಿನ ಬಗ್ಗೆ ವಿಧಿವಿಜ್ಞಾನದ ವರದಿಯು ಥಾಲಿಯಮ್ ಕುರುಹುಗಳನ್ನು ಬಹಿರಂಗಪಡಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು. ಜೊತೆಗೆ ಆತನ ಪತ್ನಿ ರಕ್ತದಲ್ಲಿ ವಿಷದ ಕುರುಹುಗಳು ಇದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

“ಹೆಚ್ಚಿನ ವಿಚಾರಣೆಯ ಸಮಯದಲ್ಲಿ, ಮೃತ ಅನಿತಾ ಅವರ ಕಿರಿಯ ಮಗಳಾದ ಪ್ರಿಯಾಂಕಾ ಕೂಡ ಬಿ.ಎಲ್. ಕಪೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಫೆಬ್ರವರಿ 15 ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಆರೋಪಿಯ ಮಾವ ದೇವೇಂದರ್ ಮೋಹನ್ ಶರ್ಮಾ ಅವರ ದೇಹದಲ್ಲೂ ಥಾಲಿಯಮ್ ವಿಷದ ಲಕ್ಷಣಗಳು ಕಂಡುಬಂದಿವೆ.  ಅಲ್ಲದೆ, ಹೆಚ್ಚಿನ ವಿಚಾರಣೆಯಲ್ಲಿ ಅವರ ಮನೆಯ ಕೆಲಸದಾಕೆ ಕೂಡ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ” ಎಂದು ಉಪ ಪೊಲೀಸ್ ಆಯುಕ್ತ ಉರ್ವಿಜಾ ಗೋಯೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಘಟನೆಗಳು ಥಾಲಿಯಮ್ ವಿಷದತ್ತ ಗಮನಸೆಳೆದಿದ್ದ ಕಾರಣ, ಪೊಲೀಸರು ಫೋರೆನ್ಸಿಕ್ ತಂಡವನ್ನು ಮೃತರ ಮನೆಗೆ ಕಳುಹಿಸಿದ್ದರು. ಅಲ್ಲಿ ಥಾಲಿಯಮ್ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ತನಿಖೆಯ ಸಮಯದಲ್ಲಿ, ಆರೋಪಿ ಅರೋರಾ ಜನವರಿ ಅಂತ್ಯದಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದರು. ಆಗ ಅವರಿಗೆ ಮೀನಿನ ಖಾದ್ಯ ತಂದಿದ್ದರು. ಸತತ ವಿಚಾರಣೆ ನಡೆಸಿದ ನಂತರ ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವರುಣ್ ಅರೋರಾ ಥಾಲಿಯಮ್ ಸಂಗ್ರಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅದನ್ನು ಅನಿತಾ (ಅತ್ತೆ), ದಿವ್ಯಾ (ಹೆಂಡತಿ), ದೇವೇಂದರ್ ಮೋಹನ್ ಶರ್ಮಾ (ಮಾವ) ಮತ್ತು ಪ್ರಿಯಾಂಕಾ (ಅತ್ತಿಗೆ) ಗೆ ನೀಡಿದ್ದಾಗಿ ಅವರು ಹೇಳಿದ್ದಾರೆ. ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು. ಇದಲ್ಲದೆ, ಆರೋಪಿ ವರುಣ್ ಅರೋರಾ ಅವರ ಮನೆಯಲ್ಲಿ ಥಾಲಿಯಮ್   ಕಂಡುಬಂದಿದೆ “ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...