Homeಮುಖಪುಟದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಮೀನಿನ ಅಡುಗೆಯಲ್ಲಿ ಥಾಲಿಯಮ್ (Thallium) ಎಂಬ ರಾಸಾಯನಿಕ ಬಳಸಿ ಪತ್ನಿ ಮತ್ತು ಕುಟುಂಬಕ್ಕೆ ವಿಷ ಹಾಕಿ, ಅತ್ತೆ ಮತ್ತು ಅತ್ತಿಗೆಯನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, 37 ವರ್ಷದ ವರುಣ್ ಅರೋರಾ, ಸದ್ದಾಂ ಹುಸೇನ್ ಅವರಿಂದ ಸ್ಫೂರ್ತಿ ಪಡೆದು ಈ ವಿಷವನ್ನು ಬಳಸಿದ್ದಾರೆ ಎನ್ನಲಾಗಿದೆ. ತನ್ನ ರಾಜಕೀಯ ವಿರೋಧಿಗಳನ್ನು ಕೊನೆಗಾಣಿಸಲು ಸದ್ದಾಂ ಹುಸೇನ್ ಥಾಲಿಯಮ್ ಎಂಬ ಸ್ಲೋ ಪಾಯಿಸನ್ ಬಳಸುತ್ತಿದ್ದರು ಎನ್ನಲಾಗಿದೆ.

ಕೊಲೆಗಳ ತನಿಖೆ ಬಳಿಕ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿರುವ ಮನೆಯಿಂದ ಆರೋಪಿ ವರುಣ್ ಅರೋರಾನನ್ನು ಮಂಗಳವಾರ ಬಂಧಿಸಲಾಗಿದೆ. ತನಗೆ ಮಾಡಿದ್ದ ಅಪಮಾನಕ್ಕೆ ಪ್ರತಿಕಾರವಾಗಿ ಮೀನಿನ ಅಡಿಗೆಯಲ್ಲಿ ವಿಷ ಬೆರೆಸಿ ತನ್ನ ಪತ್ನಿ ಮತ್ತು ಮನೆಯವರಿಗೆ ಬಡಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಆರೋಪಿ ವರುಣ್ ಅರೋರಾ, ಅತ್ತೆ ಅನಿತಾ ದೇವಿ ಶರ್ಮಾ ಅವರ ಸಾವಿನ ಬಗ್ಗೆ ವಿಧಿವಿಜ್ಞಾನದ ವರದಿಯು ಥಾಲಿಯಮ್ ಕುರುಹುಗಳನ್ನು ಬಹಿರಂಗಪಡಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು. ಜೊತೆಗೆ ಆತನ ಪತ್ನಿ ರಕ್ತದಲ್ಲಿ ವಿಷದ ಕುರುಹುಗಳು ಇದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

“ಹೆಚ್ಚಿನ ವಿಚಾರಣೆಯ ಸಮಯದಲ್ಲಿ, ಮೃತ ಅನಿತಾ ಅವರ ಕಿರಿಯ ಮಗಳಾದ ಪ್ರಿಯಾಂಕಾ ಕೂಡ ಬಿ.ಎಲ್. ಕಪೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಫೆಬ್ರವರಿ 15 ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಆರೋಪಿಯ ಮಾವ ದೇವೇಂದರ್ ಮೋಹನ್ ಶರ್ಮಾ ಅವರ ದೇಹದಲ್ಲೂ ಥಾಲಿಯಮ್ ವಿಷದ ಲಕ್ಷಣಗಳು ಕಂಡುಬಂದಿವೆ.  ಅಲ್ಲದೆ, ಹೆಚ್ಚಿನ ವಿಚಾರಣೆಯಲ್ಲಿ ಅವರ ಮನೆಯ ಕೆಲಸದಾಕೆ ಕೂಡ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ” ಎಂದು ಉಪ ಪೊಲೀಸ್ ಆಯುಕ್ತ ಉರ್ವಿಜಾ ಗೋಯೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಘಟನೆಗಳು ಥಾಲಿಯಮ್ ವಿಷದತ್ತ ಗಮನಸೆಳೆದಿದ್ದ ಕಾರಣ, ಪೊಲೀಸರು ಫೋರೆನ್ಸಿಕ್ ತಂಡವನ್ನು ಮೃತರ ಮನೆಗೆ ಕಳುಹಿಸಿದ್ದರು. ಅಲ್ಲಿ ಥಾಲಿಯಮ್ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ತನಿಖೆಯ ಸಮಯದಲ್ಲಿ, ಆರೋಪಿ ಅರೋರಾ ಜನವರಿ ಅಂತ್ಯದಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದರು. ಆಗ ಅವರಿಗೆ ಮೀನಿನ ಖಾದ್ಯ ತಂದಿದ್ದರು. ಸತತ ವಿಚಾರಣೆ ನಡೆಸಿದ ನಂತರ ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವರುಣ್ ಅರೋರಾ ಥಾಲಿಯಮ್ ಸಂಗ್ರಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅದನ್ನು ಅನಿತಾ (ಅತ್ತೆ), ದಿವ್ಯಾ (ಹೆಂಡತಿ), ದೇವೇಂದರ್ ಮೋಹನ್ ಶರ್ಮಾ (ಮಾವ) ಮತ್ತು ಪ್ರಿಯಾಂಕಾ (ಅತ್ತಿಗೆ) ಗೆ ನೀಡಿದ್ದಾಗಿ ಅವರು ಹೇಳಿದ್ದಾರೆ. ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು. ಇದಲ್ಲದೆ, ಆರೋಪಿ ವರುಣ್ ಅರೋರಾ ಅವರ ಮನೆಯಲ್ಲಿ ಥಾಲಿಯಮ್   ಕಂಡುಬಂದಿದೆ “ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...