Homeಮುಖಪುಟದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಮೀನಿನ ಅಡುಗೆಯಲ್ಲಿ ಥಾಲಿಯಮ್ (Thallium) ಎಂಬ ರಾಸಾಯನಿಕ ಬಳಸಿ ಪತ್ನಿ ಮತ್ತು ಕುಟುಂಬಕ್ಕೆ ವಿಷ ಹಾಕಿ, ಅತ್ತೆ ಮತ್ತು ಅತ್ತಿಗೆಯನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, 37 ವರ್ಷದ ವರುಣ್ ಅರೋರಾ, ಸದ್ದಾಂ ಹುಸೇನ್ ಅವರಿಂದ ಸ್ಫೂರ್ತಿ ಪಡೆದು ಈ ವಿಷವನ್ನು ಬಳಸಿದ್ದಾರೆ ಎನ್ನಲಾಗಿದೆ. ತನ್ನ ರಾಜಕೀಯ ವಿರೋಧಿಗಳನ್ನು ಕೊನೆಗಾಣಿಸಲು ಸದ್ದಾಂ ಹುಸೇನ್ ಥಾಲಿಯಮ್ ಎಂಬ ಸ್ಲೋ ಪಾಯಿಸನ್ ಬಳಸುತ್ತಿದ್ದರು ಎನ್ನಲಾಗಿದೆ.

ಕೊಲೆಗಳ ತನಿಖೆ ಬಳಿಕ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿರುವ ಮನೆಯಿಂದ ಆರೋಪಿ ವರುಣ್ ಅರೋರಾನನ್ನು ಮಂಗಳವಾರ ಬಂಧಿಸಲಾಗಿದೆ. ತನಗೆ ಮಾಡಿದ್ದ ಅಪಮಾನಕ್ಕೆ ಪ್ರತಿಕಾರವಾಗಿ ಮೀನಿನ ಅಡಿಗೆಯಲ್ಲಿ ವಿಷ ಬೆರೆಸಿ ತನ್ನ ಪತ್ನಿ ಮತ್ತು ಮನೆಯವರಿಗೆ ಬಡಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಆರೋಪಿ ವರುಣ್ ಅರೋರಾ, ಅತ್ತೆ ಅನಿತಾ ದೇವಿ ಶರ್ಮಾ ಅವರ ಸಾವಿನ ಬಗ್ಗೆ ವಿಧಿವಿಜ್ಞಾನದ ವರದಿಯು ಥಾಲಿಯಮ್ ಕುರುಹುಗಳನ್ನು ಬಹಿರಂಗಪಡಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು. ಜೊತೆಗೆ ಆತನ ಪತ್ನಿ ರಕ್ತದಲ್ಲಿ ವಿಷದ ಕುರುಹುಗಳು ಇದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

“ಹೆಚ್ಚಿನ ವಿಚಾರಣೆಯ ಸಮಯದಲ್ಲಿ, ಮೃತ ಅನಿತಾ ಅವರ ಕಿರಿಯ ಮಗಳಾದ ಪ್ರಿಯಾಂಕಾ ಕೂಡ ಬಿ.ಎಲ್. ಕಪೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಫೆಬ್ರವರಿ 15 ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಆರೋಪಿಯ ಮಾವ ದೇವೇಂದರ್ ಮೋಹನ್ ಶರ್ಮಾ ಅವರ ದೇಹದಲ್ಲೂ ಥಾಲಿಯಮ್ ವಿಷದ ಲಕ್ಷಣಗಳು ಕಂಡುಬಂದಿವೆ.  ಅಲ್ಲದೆ, ಹೆಚ್ಚಿನ ವಿಚಾರಣೆಯಲ್ಲಿ ಅವರ ಮನೆಯ ಕೆಲಸದಾಕೆ ಕೂಡ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ” ಎಂದು ಉಪ ಪೊಲೀಸ್ ಆಯುಕ್ತ ಉರ್ವಿಜಾ ಗೋಯೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಘಟನೆಗಳು ಥಾಲಿಯಮ್ ವಿಷದತ್ತ ಗಮನಸೆಳೆದಿದ್ದ ಕಾರಣ, ಪೊಲೀಸರು ಫೋರೆನ್ಸಿಕ್ ತಂಡವನ್ನು ಮೃತರ ಮನೆಗೆ ಕಳುಹಿಸಿದ್ದರು. ಅಲ್ಲಿ ಥಾಲಿಯಮ್ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ತನಿಖೆಯ ಸಮಯದಲ್ಲಿ, ಆರೋಪಿ ಅರೋರಾ ಜನವರಿ ಅಂತ್ಯದಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದರು. ಆಗ ಅವರಿಗೆ ಮೀನಿನ ಖಾದ್ಯ ತಂದಿದ್ದರು. ಸತತ ವಿಚಾರಣೆ ನಡೆಸಿದ ನಂತರ ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವರುಣ್ ಅರೋರಾ ಥಾಲಿಯಮ್ ಸಂಗ್ರಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅದನ್ನು ಅನಿತಾ (ಅತ್ತೆ), ದಿವ್ಯಾ (ಹೆಂಡತಿ), ದೇವೇಂದರ್ ಮೋಹನ್ ಶರ್ಮಾ (ಮಾವ) ಮತ್ತು ಪ್ರಿಯಾಂಕಾ (ಅತ್ತಿಗೆ) ಗೆ ನೀಡಿದ್ದಾಗಿ ಅವರು ಹೇಳಿದ್ದಾರೆ. ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು. ಇದಲ್ಲದೆ, ಆರೋಪಿ ವರುಣ್ ಅರೋರಾ ಅವರ ಮನೆಯಲ್ಲಿ ಥಾಲಿಯಮ್   ಕಂಡುಬಂದಿದೆ “ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...