Homeಮುಖಪುಟದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಮೀನಿನ ಅಡುಗೆಯಲ್ಲಿ ಥಾಲಿಯಮ್ (Thallium) ಎಂಬ ರಾಸಾಯನಿಕ ಬಳಸಿ ಪತ್ನಿ ಮತ್ತು ಕುಟುಂಬಕ್ಕೆ ವಿಷ ಹಾಕಿ, ಅತ್ತೆ ಮತ್ತು ಅತ್ತಿಗೆಯನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, 37 ವರ್ಷದ ವರುಣ್ ಅರೋರಾ, ಸದ್ದಾಂ ಹುಸೇನ್ ಅವರಿಂದ ಸ್ಫೂರ್ತಿ ಪಡೆದು ಈ ವಿಷವನ್ನು ಬಳಸಿದ್ದಾರೆ ಎನ್ನಲಾಗಿದೆ. ತನ್ನ ರಾಜಕೀಯ ವಿರೋಧಿಗಳನ್ನು ಕೊನೆಗಾಣಿಸಲು ಸದ್ದಾಂ ಹುಸೇನ್ ಥಾಲಿಯಮ್ ಎಂಬ ಸ್ಲೋ ಪಾಯಿಸನ್ ಬಳಸುತ್ತಿದ್ದರು ಎನ್ನಲಾಗಿದೆ.

ಕೊಲೆಗಳ ತನಿಖೆ ಬಳಿಕ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿರುವ ಮನೆಯಿಂದ ಆರೋಪಿ ವರುಣ್ ಅರೋರಾನನ್ನು ಮಂಗಳವಾರ ಬಂಧಿಸಲಾಗಿದೆ. ತನಗೆ ಮಾಡಿದ್ದ ಅಪಮಾನಕ್ಕೆ ಪ್ರತಿಕಾರವಾಗಿ ಮೀನಿನ ಅಡಿಗೆಯಲ್ಲಿ ವಿಷ ಬೆರೆಸಿ ತನ್ನ ಪತ್ನಿ ಮತ್ತು ಮನೆಯವರಿಗೆ ಬಡಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಆರೋಪಿ ವರುಣ್ ಅರೋರಾ, ಅತ್ತೆ ಅನಿತಾ ದೇವಿ ಶರ್ಮಾ ಅವರ ಸಾವಿನ ಬಗ್ಗೆ ವಿಧಿವಿಜ್ಞಾನದ ವರದಿಯು ಥಾಲಿಯಮ್ ಕುರುಹುಗಳನ್ನು ಬಹಿರಂಗಪಡಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು. ಜೊತೆಗೆ ಆತನ ಪತ್ನಿ ರಕ್ತದಲ್ಲಿ ವಿಷದ ಕುರುಹುಗಳು ಇದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

“ಹೆಚ್ಚಿನ ವಿಚಾರಣೆಯ ಸಮಯದಲ್ಲಿ, ಮೃತ ಅನಿತಾ ಅವರ ಕಿರಿಯ ಮಗಳಾದ ಪ್ರಿಯಾಂಕಾ ಕೂಡ ಬಿ.ಎಲ್. ಕಪೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಫೆಬ್ರವರಿ 15 ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಆರೋಪಿಯ ಮಾವ ದೇವೇಂದರ್ ಮೋಹನ್ ಶರ್ಮಾ ಅವರ ದೇಹದಲ್ಲೂ ಥಾಲಿಯಮ್ ವಿಷದ ಲಕ್ಷಣಗಳು ಕಂಡುಬಂದಿವೆ.  ಅಲ್ಲದೆ, ಹೆಚ್ಚಿನ ವಿಚಾರಣೆಯಲ್ಲಿ ಅವರ ಮನೆಯ ಕೆಲಸದಾಕೆ ಕೂಡ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ” ಎಂದು ಉಪ ಪೊಲೀಸ್ ಆಯುಕ್ತ ಉರ್ವಿಜಾ ಗೋಯೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಘಟನೆಗಳು ಥಾಲಿಯಮ್ ವಿಷದತ್ತ ಗಮನಸೆಳೆದಿದ್ದ ಕಾರಣ, ಪೊಲೀಸರು ಫೋರೆನ್ಸಿಕ್ ತಂಡವನ್ನು ಮೃತರ ಮನೆಗೆ ಕಳುಹಿಸಿದ್ದರು. ಅಲ್ಲಿ ಥಾಲಿಯಮ್ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ತನಿಖೆಯ ಸಮಯದಲ್ಲಿ, ಆರೋಪಿ ಅರೋರಾ ಜನವರಿ ಅಂತ್ಯದಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದರು. ಆಗ ಅವರಿಗೆ ಮೀನಿನ ಖಾದ್ಯ ತಂದಿದ್ದರು. ಸತತ ವಿಚಾರಣೆ ನಡೆಸಿದ ನಂತರ ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವರುಣ್ ಅರೋರಾ ಥಾಲಿಯಮ್ ಸಂಗ್ರಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅದನ್ನು ಅನಿತಾ (ಅತ್ತೆ), ದಿವ್ಯಾ (ಹೆಂಡತಿ), ದೇವೇಂದರ್ ಮೋಹನ್ ಶರ್ಮಾ (ಮಾವ) ಮತ್ತು ಪ್ರಿಯಾಂಕಾ (ಅತ್ತಿಗೆ) ಗೆ ನೀಡಿದ್ದಾಗಿ ಅವರು ಹೇಳಿದ್ದಾರೆ. ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು. ಇದಲ್ಲದೆ, ಆರೋಪಿ ವರುಣ್ ಅರೋರಾ ಅವರ ಮನೆಯಲ್ಲಿ ಥಾಲಿಯಮ್   ಕಂಡುಬಂದಿದೆ “ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...