Homeಮುಖಪುಟಮತ್ತೆ ನಡೆಯದ ದೆಹಲಿ ಮೇಯರ್ ಚುನಾವಣೆ: ಬಿಜೆಪಿ ವಿರುದ್ದ ಸುಪ್ರೀಂ ಮೊರೆ ಹೊರಟ ಎಎಪಿ

ಮತ್ತೆ ನಡೆಯದ ದೆಹಲಿ ಮೇಯರ್ ಚುನಾವಣೆ: ಬಿಜೆಪಿ ವಿರುದ್ದ ಸುಪ್ರೀಂ ಮೊರೆ ಹೊರಟ ಎಎಪಿ

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯು ಮಂಗಳವಾರ ಮೇಯರ್ ಹುದ್ದೆಗೆ ಸೋಮವಾರ ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ ಇಂದು ಕೂಡ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವಿನ ಘರ್ಷಣೆಯಿಂದಾಗಿ ಮೂರನೇ ಬಾರಿಗೆ ಚುನಾವಣೆ ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿದ ಎಎಪಿ ನಾಯಕ ಅತಿಶಿ, ”ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕು ನೀಡುವ ಬಿಜೆಪಿಯ ನಿರ್ಧಾರವನ್ನು ಪ್ರಶ್ನಿಸಲು ಪಕ್ಷವು ಸುಪ್ರೀಂ ಕೋರ್ಟ್‌ಗೆ ಹೋಗಲಿದೆ. ಕಳೆದ ಬಾರಿ ನಾವು ಬಿಜೆಪಿ ವಿರುದ್ಧದ ಅರ್ಜಿಯನ್ನು ಹಿಂಪಡೆದಿದ್ದೇವೆ ಏಕೆಂದರೆ ಮೇಯರ್ ಚುನಾವಣೆಯ ದಿನಾಂಕಗಳನ್ನು ಅನುಮೋದಿಸಲಾಗಿತ್ತು ಮತ್ತು ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುತ್ತಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿರಲಿಲ್ಲ. ಆದರೆ ಇಂದು ಅವರು ಅಕ್ರಮವಾಗಿ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕಾನೂನುಬಾಹಿರವಾಗಿ ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕನ್ನು ನೀಡಿದ್ದಾರೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‌ಗೆ ತೆರಳಿ ಬಿಜೆಪಿಯ ನಿರ್ಧಾರವನ್ನು ಪ್ರಶ್ನಿಸುತ್ತೇವೆ ಎಂದು ಅವರು ಹೇಳಿದರು.

ದೆಹಲಿಯ ಮಹಾನಗರ ಪಾಲಿಕೆ ಒಂದು ತಿಂಗಳಲ್ಲಿ ಮೂರನೇ ಬಾರಿಗೆ ಮೇಯರ್ ಆಯ್ಕೆಯನ್ನು ಮಾಡದೆ ಮುಂದೂಡಲಾಯಿತು. ನಾಮನಿರ್ದೇಶಿತ ಸದಸ್ಯರಿಗೆ ಮೇಯರ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ನೀಡುವ ಕುರಿತು ಗದ್ದಲ ಎದ್ದಿತು. ಹಾಗಾಗಿ ‘ಇಂತಹ ವಾತಾವರಣದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಸದನವನ್ನು ಮುಂದಿನ ದಿನಾಂಕಕ್ಕೆ ಮುಂದೂಡಲಾಗಿದೆ’ ಎಂದು ಸಭಾಧ್ಯಕ್ಷ ಸತ್ಯ ಶರ್ಮಾ ತಿಳಿಸಿದರು.

ಇದನ್ನೂ ಓದಿ: ಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

ಸೋಮವಾರ ದೆಹಲಿಯ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆಗೆ ಮತದಾನದ ಮೊದಲು, ಸಭಾಧ್ಯಕ್ಷ ಸತ್ಯ ಶರ್ಮಾ ಅವರು, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯಿದೆ, 1957 ರ ಪ್ರಕಾರ, ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಲು ಆಲ್ಡರ್‌ಮನ್ ಅರ್ಹರು ಎಂದು ಹೇಳಿದರು. ಇದೇ ವಿಚಾರಕ್ಕೆ ಎಎಪಿ ಕೌನ್ಸಿಲರ್‌ಗಳು ಪ್ರತಿಭಟನೆ ನಡೆಸಿದ್ದು, ಆಲ್ಡರ್‌ಮೆನ್‌ ಮತ ಚಲಾಯಿಸುವಂತಿಲ್ಲ ಎಂದು ಎಎಪಿ ನಾಯಕ ಮುಖೇಶ್ ಗೋಯೆಲ್ ಹೇಳಿದ್ದಾರೆ.

ಈ ವೇಳೆ ಗದ್ದಲ ಗಲಾಟೆ ಏರ್ಪಟ್ಟಿತು. ಆಗ ಸಭಾಧ್ಯಕ್ಷ ಶರ್ಮಾ ಅವರು, ”ಜನರು ನಿಮ್ಮನ್ನು ಇಲ್ಲಿಗೆ ಕಳುಹಿಸಿದ್ದು ಅವರ ಸೇವೆ ಮಾಡಲು, ಚುನಾವಣೆ ನಡೆಯಲಿ” ಎಂದು ಹೇಳಿದ್ದಾರೆ. ಇದಾದ ನಂತರ ಸದನವನ್ನು ಕೆಲಕಾಲ ಮುಂದೂಡಲಾಯಿತು. ಎಂಸಿಡಿಯನ್ನು ಯಾರು ನಿಯಂತ್ರಿಸುತ್ತಾರೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆಯಿರುವ 10 ಬಿಜೆಪಿ ಸದಸ್ಯರನ್ನು ಆಲ್ಡರ್‌ಮೆನ್‌ಗಳಾಗಿ ಆಯ್ಕೆ ಮಾಡುವಲ್ಲಿ ಎಲ್‌ಜಿ ಕಾರ್ಯವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಜನವರಿ 6 ಮತ್ತು ಜನವರಿ 24 ರಂದು ನಡೆದ ಮೊದಲ ಎರಡು ಅಧಿವೇಶನಗಳು ನಡೆದಿದ್ದವು. ಈ ಅಧಿವೇಶನಗಳಲ್ಲಿ ಬಿಜೆಪಿ ಮತ್ತು ಎಎಪಿ ಸದಸ್ಯರ ನಡುವಿನ ಗದ್ದಲ ಮತ್ತು ತೀವ್ರ ಮಾತಿನ ಚಕಮಕಿಯ ನಂತರ ಮೇಯರ್ ಆಯ್ಕೆ ಮಾಡದೆ ಸಭಾಧ್ಯಕ್ಷರು ಮುಂದೂಡಿದರು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (DMC) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಮುನ್ಸಿಪಲ್ ಚುನಾವಣೆ ನಡೆದು ಎರಡು ತಿಂಗಳಾದರೂ ದೆಹಲಿಗೆ ಮೇಯರ್ ಆಯ್ಕೆ ನಡೆದಿಲ್ಲ.

ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿಯ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಆಲ್ಡರ್‌ಮೆನ್‌ಗಳನ್ನು ಡಿಬಾರ್ ಮಾಡುವಂತೆ ಕೋರಿ ಭಾನುವಾರ ಎಎಪಿ ಕೌನ್ಸಿಲರ್‌ಗಳು ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ. ಇದು ದೆಹಲಿಯ ಜನರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಎಪಿ ಹೇಳಿದೆ. ನಾಮನಿರ್ದೇಶಿತ ಸದಸ್ಯರು ಸಂವಿಧಾನ ಮತ್ತು ಡಿಎಂಸಿ ಕಾಯ್ದೆಗೆ ಅನುಗುಣವಾಗಿ ಮತ ಚಲಾಯಿಸುವಂತಿಲ್ಲ ಎಂದು ಎಎಪಿ ಕೌನ್ಸಿಲರ್‌ಗಳು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...