Homeಮುಖಪುಟಮತ್ತೆ ನಡೆಯದ ದೆಹಲಿ ಮೇಯರ್ ಚುನಾವಣೆ: ಬಿಜೆಪಿ ವಿರುದ್ದ ಸುಪ್ರೀಂ ಮೊರೆ ಹೊರಟ ಎಎಪಿ

ಮತ್ತೆ ನಡೆಯದ ದೆಹಲಿ ಮೇಯರ್ ಚುನಾವಣೆ: ಬಿಜೆಪಿ ವಿರುದ್ದ ಸುಪ್ರೀಂ ಮೊರೆ ಹೊರಟ ಎಎಪಿ

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯು ಮಂಗಳವಾರ ಮೇಯರ್ ಹುದ್ದೆಗೆ ಸೋಮವಾರ ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ ಇಂದು ಕೂಡ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವಿನ ಘರ್ಷಣೆಯಿಂದಾಗಿ ಮೂರನೇ ಬಾರಿಗೆ ಚುನಾವಣೆ ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿದ ಎಎಪಿ ನಾಯಕ ಅತಿಶಿ, ”ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕು ನೀಡುವ ಬಿಜೆಪಿಯ ನಿರ್ಧಾರವನ್ನು ಪ್ರಶ್ನಿಸಲು ಪಕ್ಷವು ಸುಪ್ರೀಂ ಕೋರ್ಟ್‌ಗೆ ಹೋಗಲಿದೆ. ಕಳೆದ ಬಾರಿ ನಾವು ಬಿಜೆಪಿ ವಿರುದ್ಧದ ಅರ್ಜಿಯನ್ನು ಹಿಂಪಡೆದಿದ್ದೇವೆ ಏಕೆಂದರೆ ಮೇಯರ್ ಚುನಾವಣೆಯ ದಿನಾಂಕಗಳನ್ನು ಅನುಮೋದಿಸಲಾಗಿತ್ತು ಮತ್ತು ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುತ್ತಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿರಲಿಲ್ಲ. ಆದರೆ ಇಂದು ಅವರು ಅಕ್ರಮವಾಗಿ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕಾನೂನುಬಾಹಿರವಾಗಿ ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕನ್ನು ನೀಡಿದ್ದಾರೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‌ಗೆ ತೆರಳಿ ಬಿಜೆಪಿಯ ನಿರ್ಧಾರವನ್ನು ಪ್ರಶ್ನಿಸುತ್ತೇವೆ ಎಂದು ಅವರು ಹೇಳಿದರು.

ದೆಹಲಿಯ ಮಹಾನಗರ ಪಾಲಿಕೆ ಒಂದು ತಿಂಗಳಲ್ಲಿ ಮೂರನೇ ಬಾರಿಗೆ ಮೇಯರ್ ಆಯ್ಕೆಯನ್ನು ಮಾಡದೆ ಮುಂದೂಡಲಾಯಿತು. ನಾಮನಿರ್ದೇಶಿತ ಸದಸ್ಯರಿಗೆ ಮೇಯರ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ನೀಡುವ ಕುರಿತು ಗದ್ದಲ ಎದ್ದಿತು. ಹಾಗಾಗಿ ‘ಇಂತಹ ವಾತಾವರಣದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಸದನವನ್ನು ಮುಂದಿನ ದಿನಾಂಕಕ್ಕೆ ಮುಂದೂಡಲಾಗಿದೆ’ ಎಂದು ಸಭಾಧ್ಯಕ್ಷ ಸತ್ಯ ಶರ್ಮಾ ತಿಳಿಸಿದರು.

ಇದನ್ನೂ ಓದಿ: ಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

ಸೋಮವಾರ ದೆಹಲಿಯ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆಗೆ ಮತದಾನದ ಮೊದಲು, ಸಭಾಧ್ಯಕ್ಷ ಸತ್ಯ ಶರ್ಮಾ ಅವರು, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯಿದೆ, 1957 ರ ಪ್ರಕಾರ, ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಲು ಆಲ್ಡರ್‌ಮನ್ ಅರ್ಹರು ಎಂದು ಹೇಳಿದರು. ಇದೇ ವಿಚಾರಕ್ಕೆ ಎಎಪಿ ಕೌನ್ಸಿಲರ್‌ಗಳು ಪ್ರತಿಭಟನೆ ನಡೆಸಿದ್ದು, ಆಲ್ಡರ್‌ಮೆನ್‌ ಮತ ಚಲಾಯಿಸುವಂತಿಲ್ಲ ಎಂದು ಎಎಪಿ ನಾಯಕ ಮುಖೇಶ್ ಗೋಯೆಲ್ ಹೇಳಿದ್ದಾರೆ.

ಈ ವೇಳೆ ಗದ್ದಲ ಗಲಾಟೆ ಏರ್ಪಟ್ಟಿತು. ಆಗ ಸಭಾಧ್ಯಕ್ಷ ಶರ್ಮಾ ಅವರು, ”ಜನರು ನಿಮ್ಮನ್ನು ಇಲ್ಲಿಗೆ ಕಳುಹಿಸಿದ್ದು ಅವರ ಸೇವೆ ಮಾಡಲು, ಚುನಾವಣೆ ನಡೆಯಲಿ” ಎಂದು ಹೇಳಿದ್ದಾರೆ. ಇದಾದ ನಂತರ ಸದನವನ್ನು ಕೆಲಕಾಲ ಮುಂದೂಡಲಾಯಿತು. ಎಂಸಿಡಿಯನ್ನು ಯಾರು ನಿಯಂತ್ರಿಸುತ್ತಾರೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆಯಿರುವ 10 ಬಿಜೆಪಿ ಸದಸ್ಯರನ್ನು ಆಲ್ಡರ್‌ಮೆನ್‌ಗಳಾಗಿ ಆಯ್ಕೆ ಮಾಡುವಲ್ಲಿ ಎಲ್‌ಜಿ ಕಾರ್ಯವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಜನವರಿ 6 ಮತ್ತು ಜನವರಿ 24 ರಂದು ನಡೆದ ಮೊದಲ ಎರಡು ಅಧಿವೇಶನಗಳು ನಡೆದಿದ್ದವು. ಈ ಅಧಿವೇಶನಗಳಲ್ಲಿ ಬಿಜೆಪಿ ಮತ್ತು ಎಎಪಿ ಸದಸ್ಯರ ನಡುವಿನ ಗದ್ದಲ ಮತ್ತು ತೀವ್ರ ಮಾತಿನ ಚಕಮಕಿಯ ನಂತರ ಮೇಯರ್ ಆಯ್ಕೆ ಮಾಡದೆ ಸಭಾಧ್ಯಕ್ಷರು ಮುಂದೂಡಿದರು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (DMC) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಮುನ್ಸಿಪಲ್ ಚುನಾವಣೆ ನಡೆದು ಎರಡು ತಿಂಗಳಾದರೂ ದೆಹಲಿಗೆ ಮೇಯರ್ ಆಯ್ಕೆ ನಡೆದಿಲ್ಲ.

ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿಯ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಆಲ್ಡರ್‌ಮೆನ್‌ಗಳನ್ನು ಡಿಬಾರ್ ಮಾಡುವಂತೆ ಕೋರಿ ಭಾನುವಾರ ಎಎಪಿ ಕೌನ್ಸಿಲರ್‌ಗಳು ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ. ಇದು ದೆಹಲಿಯ ಜನರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಎಪಿ ಹೇಳಿದೆ. ನಾಮನಿರ್ದೇಶಿತ ಸದಸ್ಯರು ಸಂವಿಧಾನ ಮತ್ತು ಡಿಎಂಸಿ ಕಾಯ್ದೆಗೆ ಅನುಗುಣವಾಗಿ ಮತ ಚಲಾಯಿಸುವಂತಿಲ್ಲ ಎಂದು ಎಎಪಿ ಕೌನ್ಸಿಲರ್‌ಗಳು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...