Homeಮುಖಪುಟಮತ್ತೆ ನಡೆಯದ ದೆಹಲಿ ಮೇಯರ್ ಚುನಾವಣೆ: ಬಿಜೆಪಿ ವಿರುದ್ದ ಸುಪ್ರೀಂ ಮೊರೆ ಹೊರಟ ಎಎಪಿ

ಮತ್ತೆ ನಡೆಯದ ದೆಹಲಿ ಮೇಯರ್ ಚುನಾವಣೆ: ಬಿಜೆಪಿ ವಿರುದ್ದ ಸುಪ್ರೀಂ ಮೊರೆ ಹೊರಟ ಎಎಪಿ

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯು ಮಂಗಳವಾರ ಮೇಯರ್ ಹುದ್ದೆಗೆ ಸೋಮವಾರ ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ ಇಂದು ಕೂಡ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವಿನ ಘರ್ಷಣೆಯಿಂದಾಗಿ ಮೂರನೇ ಬಾರಿಗೆ ಚುನಾವಣೆ ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿದ ಎಎಪಿ ನಾಯಕ ಅತಿಶಿ, ”ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕು ನೀಡುವ ಬಿಜೆಪಿಯ ನಿರ್ಧಾರವನ್ನು ಪ್ರಶ್ನಿಸಲು ಪಕ್ಷವು ಸುಪ್ರೀಂ ಕೋರ್ಟ್‌ಗೆ ಹೋಗಲಿದೆ. ಕಳೆದ ಬಾರಿ ನಾವು ಬಿಜೆಪಿ ವಿರುದ್ಧದ ಅರ್ಜಿಯನ್ನು ಹಿಂಪಡೆದಿದ್ದೇವೆ ಏಕೆಂದರೆ ಮೇಯರ್ ಚುನಾವಣೆಯ ದಿನಾಂಕಗಳನ್ನು ಅನುಮೋದಿಸಲಾಗಿತ್ತು ಮತ್ತು ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುತ್ತಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿರಲಿಲ್ಲ. ಆದರೆ ಇಂದು ಅವರು ಅಕ್ರಮವಾಗಿ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕಾನೂನುಬಾಹಿರವಾಗಿ ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕನ್ನು ನೀಡಿದ್ದಾರೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‌ಗೆ ತೆರಳಿ ಬಿಜೆಪಿಯ ನಿರ್ಧಾರವನ್ನು ಪ್ರಶ್ನಿಸುತ್ತೇವೆ ಎಂದು ಅವರು ಹೇಳಿದರು.

ದೆಹಲಿಯ ಮಹಾನಗರ ಪಾಲಿಕೆ ಒಂದು ತಿಂಗಳಲ್ಲಿ ಮೂರನೇ ಬಾರಿಗೆ ಮೇಯರ್ ಆಯ್ಕೆಯನ್ನು ಮಾಡದೆ ಮುಂದೂಡಲಾಯಿತು. ನಾಮನಿರ್ದೇಶಿತ ಸದಸ್ಯರಿಗೆ ಮೇಯರ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ನೀಡುವ ಕುರಿತು ಗದ್ದಲ ಎದ್ದಿತು. ಹಾಗಾಗಿ ‘ಇಂತಹ ವಾತಾವರಣದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಸದನವನ್ನು ಮುಂದಿನ ದಿನಾಂಕಕ್ಕೆ ಮುಂದೂಡಲಾಗಿದೆ’ ಎಂದು ಸಭಾಧ್ಯಕ್ಷ ಸತ್ಯ ಶರ್ಮಾ ತಿಳಿಸಿದರು.

ಇದನ್ನೂ ಓದಿ: ಎಎಪಿ-ಬಿಜೆಪಿ ಮಧ್ಯೆ ಮತ್ತೊಮ್ಮೆ ಫೈಟ್; ದೆಹಲಿ ಮೇಯರ್ ಚುನಾವಣೆ ಸ್ಥಗಿತ

ಸೋಮವಾರ ದೆಹಲಿಯ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆಗೆ ಮತದಾನದ ಮೊದಲು, ಸಭಾಧ್ಯಕ್ಷ ಸತ್ಯ ಶರ್ಮಾ ಅವರು, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯಿದೆ, 1957 ರ ಪ್ರಕಾರ, ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಲು ಆಲ್ಡರ್‌ಮನ್ ಅರ್ಹರು ಎಂದು ಹೇಳಿದರು. ಇದೇ ವಿಚಾರಕ್ಕೆ ಎಎಪಿ ಕೌನ್ಸಿಲರ್‌ಗಳು ಪ್ರತಿಭಟನೆ ನಡೆಸಿದ್ದು, ಆಲ್ಡರ್‌ಮೆನ್‌ ಮತ ಚಲಾಯಿಸುವಂತಿಲ್ಲ ಎಂದು ಎಎಪಿ ನಾಯಕ ಮುಖೇಶ್ ಗೋಯೆಲ್ ಹೇಳಿದ್ದಾರೆ.

ಈ ವೇಳೆ ಗದ್ದಲ ಗಲಾಟೆ ಏರ್ಪಟ್ಟಿತು. ಆಗ ಸಭಾಧ್ಯಕ್ಷ ಶರ್ಮಾ ಅವರು, ”ಜನರು ನಿಮ್ಮನ್ನು ಇಲ್ಲಿಗೆ ಕಳುಹಿಸಿದ್ದು ಅವರ ಸೇವೆ ಮಾಡಲು, ಚುನಾವಣೆ ನಡೆಯಲಿ” ಎಂದು ಹೇಳಿದ್ದಾರೆ. ಇದಾದ ನಂತರ ಸದನವನ್ನು ಕೆಲಕಾಲ ಮುಂದೂಡಲಾಯಿತು. ಎಂಸಿಡಿಯನ್ನು ಯಾರು ನಿಯಂತ್ರಿಸುತ್ತಾರೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆಯಿರುವ 10 ಬಿಜೆಪಿ ಸದಸ್ಯರನ್ನು ಆಲ್ಡರ್‌ಮೆನ್‌ಗಳಾಗಿ ಆಯ್ಕೆ ಮಾಡುವಲ್ಲಿ ಎಲ್‌ಜಿ ಕಾರ್ಯವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಜನವರಿ 6 ಮತ್ತು ಜನವರಿ 24 ರಂದು ನಡೆದ ಮೊದಲ ಎರಡು ಅಧಿವೇಶನಗಳು ನಡೆದಿದ್ದವು. ಈ ಅಧಿವೇಶನಗಳಲ್ಲಿ ಬಿಜೆಪಿ ಮತ್ತು ಎಎಪಿ ಸದಸ್ಯರ ನಡುವಿನ ಗದ್ದಲ ಮತ್ತು ತೀವ್ರ ಮಾತಿನ ಚಕಮಕಿಯ ನಂತರ ಮೇಯರ್ ಆಯ್ಕೆ ಮಾಡದೆ ಸಭಾಧ್ಯಕ್ಷರು ಮುಂದೂಡಿದರು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (DMC) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಮುನ್ಸಿಪಲ್ ಚುನಾವಣೆ ನಡೆದು ಎರಡು ತಿಂಗಳಾದರೂ ದೆಹಲಿಗೆ ಮೇಯರ್ ಆಯ್ಕೆ ನಡೆದಿಲ್ಲ.

ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿಯ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಆಲ್ಡರ್‌ಮೆನ್‌ಗಳನ್ನು ಡಿಬಾರ್ ಮಾಡುವಂತೆ ಕೋರಿ ಭಾನುವಾರ ಎಎಪಿ ಕೌನ್ಸಿಲರ್‌ಗಳು ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ. ಇದು ದೆಹಲಿಯ ಜನರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಎಪಿ ಹೇಳಿದೆ. ನಾಮನಿರ್ದೇಶಿತ ಸದಸ್ಯರು ಸಂವಿಧಾನ ಮತ್ತು ಡಿಎಂಸಿ ಕಾಯ್ದೆಗೆ ಅನುಗುಣವಾಗಿ ಮತ ಚಲಾಯಿಸುವಂತಿಲ್ಲ ಎಂದು ಎಎಪಿ ಕೌನ್ಸಿಲರ್‌ಗಳು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...