Homeಮುಖಪುಟದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

- Advertisement -
- Advertisement -

ದೆಹಲಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಸುಪ್ರೀಂ ಕೋರ್ಟ್ ಆದೇಶದ ನಂತರ ಇಂದು (ಫೆಬ್ರವರಿ 22) ಹೊಸ ಮೇಯರ್ ಆಯ್ಕೆಗೆ ಮತದಾನ ನಡೆಯಿತು. ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ ಅವರು, ಬಿಜೆಪಿಯ ರೇಖಾ ಗುಪ್ತಾ ಅವರನ್ನು 34 ಮತಗಳಿಂದ ಸೋಲಿಸಿ ದೆಹಲಿಯ ಹೊಸ ಮೇಯರ್ ಆಗಿ ಆಯ್ಕೆಯಾದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ಇದರಿಂದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

ಈ ಚುನಾವಣೆಯಲ್ಲಿ ಒಟ್ಟು 266 ಮತಗಳ ಪೈಕಿ ರೇಖಾ ಗುಪ್ತಾ 116 ಮತಗಳನ್ನು ಪಡೆದರೆ ಶೆಲ್ಲಿ ಒಬೆರಾಯ್ 150 ಮತಗಳನ್ನು ಪಡೆದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು. ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಶೆಲ್ಲಿ ಒಬೆರಾಯ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.

”ಗೂಂಡಾಗಳು ಸೋತರು, ಸಾರ್ವಜನಿಕರು ಗೆದ್ದರು. ಇಂದು ದೆಹಲಿಯ ಮಹಾನಗರ ಪಾಲಿಕೆಯಲ್ಲಿ ದೆಹಲಿಯ ಜನರು ಗೆದ್ದಿದ್ದಾರೆ ಮತ್ತು ಗೂಂಡಾಗಿರಿಯನ್ನು ಸೋಲಿಸಿದ್ದಾರೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ರಾಜ್ಯಪಾಲರಿಂದ ನಾಮನಿರ್ದೇಶನಗೊಂಡ 10 ಸದಸ್ಯರು-ಆಲ್ಡರ್‌ಮೆನ್‌ಗಳಿಗೆ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶವಿದೆ ಎಂದು ಬಿಜೆಪಿ ವಾದಿಸಿತ್ತು. ಇದಕ್ಕೆ ಎಎಪಿ ವಿರೋಧ ವ್ಯಕ್ತಪಡಿಸಿದ್ದರಿಂದಲೇ ಮೂರು ಬಾರಿಯೂ ಮೇಯರ್ ಚುನಾವಣೆ ಮುಂದೂಡಲಾಯಿತು. ಇತ್ತಿಚೇಗೆ ಒಬೆರಾಯ್ ಅವರು ಬಿಜೆಪಿಯ ಈ ವಾದವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: ಬಹುದಿನಗಳ ನಂತರ ಇಂದು ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಾಧೀಶರು, ನಾಮನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಹೇಳಿದ್ದಾರೆ. “ನಾಮನಿರ್ದೇಶಿತ ಸದಸ್ಯರು ಚುನಾವಣೆಗೆ ಹೋಗುವಂತಿಲ್ಲ. ಸಾಂವಿಧಾನಿಕ ನಿಬಂಧನೆಯು ತುಂಬಾ ಸ್ಪಷ್ಟವಾಗಿದೆ” ಎಂದು ನ್ಯಾಯಾಲಯವು ಹೇಳಿತು.

ದೆಹಲಿ ಮಹಾನಗರ ಪಾಲಿಕೆ (ಡಿಎಂಸಿ) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಡಿಸೆಂಬರ್ 4ರಂದು ಪಾಲಿಕೆ ಚುನಾವಣೆ ನಡೆದು ಎರಡು ತಿಂಗಳಾಗಿದೆ.

ಪಾಲಿಕೆ ಚುನಾವಣೆ ಮುಗಿದ ಒಂದು ತಿಂಗಳ ನಂತರ, ಜನವರಿ 6ರಂದು ಮೊದಲ ಬಾರಿಗೆ ಸದನ ನಡೆಯಿತು. ಆದರೆ ಅಂದು ಬಿಜೆಪಿ ಮತ್ತು ಆಪ್ ಸದಸ್ಯರ ನಡುವಿನ ವಾಗ್ವಾದದ ನಂತರ ಅದನ್ನು ಮುಂದೂಡಲಾಯಿತು. ಜನವರಿ 24 ಮತ್ತು ಫೆಬ್ರವರಿ 6 ರಂದು ನಡೆದ ಎರಡನೇ ಮತ್ತು ಮೂರನೇ ಸಭೆಗಳು ಸಹ ಮೇಯರ್ ಆಯ್ಕೆಯ ಚುನಾವಣೆ ಪ್ರಕ್ರಿಯೆ ವಿಫಲವಾದವು. ಇದೀಗ ಸುಪ್ರೀಂ ಕೋರ್ಟ್‌ನ ಆದೇಶದ ನಂತರ ಇಂದು (ಫೆಬ್ರವರಿ 22) ಹೊಸ ಮೇಯರ್ ಆಯ್ಕೆಗೆ ಮತದಾನ ನಡೆಯಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Wr is operation lotus , bjp and party why u can’t make it successful, all public are rejecting u think of it , ur false media wheat media all wrong information giving to public

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...