Homeಮುಖಪುಟದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚುವರಿ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

ದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚುವರಿ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ

- Advertisement -
- Advertisement -

ದೆಹಲಿಯಲ್ಲಿ ತೀವ್ರ ಜಲಕ್ಷಾಮದ ಹಿನ್ನೆಲೆ ಹರಿಯಾಣದಿಂದ ಹೆಚ್ಚುವರಿ ನೀರು ಹರಿಸುವಂತೆ ಆಗ್ರಹಿಸಿ ಸಚಿವೆ ಅತಿಶಿ ಇಂದಿನಿಂದ (ಜೂನ್ 21) ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ, ಎಎಪಿ ಸಂಸದ ಸಂಜಯ್ ಸಿಂಗ್ ಹಾಗೂ ಸಚಿವ ಸೌರಭ್ ಭಾರದ್ವಾಜ್ ಅವರು ಅತಿಶಿಗೆ ಸಾಥ್‌ ನೀಡಿದ್ದಾರೆ.

ಉಪವಾಸ ಸತ್ಯಾಗ್ರಹ ಪ್ರಾರಂಭಿಸುವ ಮುನ್ನ ಅತಿಶಿ, ಸುನೀತಾ ಕೇಜ್ರಿವಾಲ್, ಸಂಜಯ್ ಸಿಂಗ್ ಮತ್ತು ಇತರರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿಯ ಸಮಾಧಿಗೆ ಗೌರವ ನಮನ ಸಲ್ಲಿಸಿದರು.

ಇಂದು ಮುಂಜಾನೆ, ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಅತಿಶಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವ ಮುನ್ನ ಕೇಜ್ರಿವಾಲ್ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ.

“ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಯ ಬಾಕಿ ನೀರನ್ನು ಬಿಡುಗಡೆ ಮಾಡುತ್ತಿಲ್ಲ. ಅನ್ಯಾಯದ ವಿರುದ್ಧ ಹೋರಾಡಬೇಕಾದರೆ ಸತ್ಯಾಗ್ರಹದ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ಮಹಾತ್ಮ ಗಾಂಧೀಜಿ ಬೋಧಿಸಿದ್ದಾರೆ” ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಅತಿಶಿ ಹೇಳಿದ್ದಾರೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಅತಿಶಿ, ರಾಷ್ಟ್ರ ರಾಜಧಾನಿಯಲ್ಲಿ ಉಲ್ಬಣಗೊಂಡಿರುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಮಧ್ಯಪ್ರವೇಶಿಸಬೇಕೆಂದು ಕೋರಿದ್ದರು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿರುವ ಅತಿಶಿ “ದೆಹಲಿಯ 28 ಲಕ್ಷ ಜನರು ನೀರಿನ ಕೊರತೆಯಿಂದ ಬಳಲುತ್ತಿದ್ದಾರೆ. ಪ್ರಧಾನಿ ಮೋದಿ ಹರಿಯಾಣ ಅಥವಾ ಬೇರೆ ಎಲ್ಲಿಂದಲಾದರೂ ದೆಹಲಿಯ ಜನತೆಗೆ ನೀರು ತರಬೇಕು” ಎಂದು ಆಗ್ರಹಿಸಿದ್ದಾರೆ.

“ನಿನ್ನೆ ಹರಿಯಾಣ ದೆಹಲಿಗೆ 613 ಎಂಜಿಡಿ ಬದಲು 513 ಎಂಜಿಡಿ ನೀರು ಬಿಡುಗಡೆ ಮಾಡಿದೆ. ಒಂದು ಎಂಜಿಡಿ ಅಂದರೆ ನೀರು 28,500 ಜನರಿಗೆ ಸಾಕಾಗುತ್ತದೆ. ಅಂದರೆ 28 ಲಕ್ಷಕ್ಕೂ ಹೆಚ್ಚು ಜನರ ನೀರನ್ನು ಹರಿಯಾಣ ಬಿಡುಗಡೆ ಮಾಡಲು ಬಾಕಿಯಿದೆ” ಎಂದಿದ್ದಾರೆ.

ಈ ನಡುವೆ, ಆಪಾದಿತ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರೂಸ್ ಅವೆನ್ಯೂ ಕೋರ್ಟ್ ಅರವಿಂದ್ ಕೇಜ್ರಿವಾಲ್‌ಗೆ ನೀಡಿದ್ದ ಜಾಮೀನನ್ನು ದೆಹಲಿ ಹೈಕೋರ್ಟ್ ಶುಕ್ರವಾರ (ಜೂನ್ 21) ತಡೆ ಹಿಡಿದಿದೆ.

“ಹೈಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳುವವರೆಗೆ ಜಾಮೀನಿಗೆ ತಡೆ ನೀಡಲಾಗಿದೆ. ಹೈಕೋರ್ಟ್ ಪ್ರಕರಣವನ್ನು ವಿಚಾರಣೆ ಮಾಡುವವರೆಗೆ ವಿಚಾರಣಾ ನ್ಯಾಯಾಲಯದ (ರೂಸ್ ಅವೆನ್ಯೂ) ಮುಂದೆ ಯಾವುದೇ ಪ್ರಕ್ರಿಯೆಗಳು ನಡೆಯುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ‘ಯುಜಿಸಿ-ನೆಟ್’ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಯಾವಾಗ? ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...