Homeಮುಖಪುಟದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

- Advertisement -
- Advertisement -

ದೆಹಲಿ ಸಚಿವ ಮತ್ತು ಎಎಪಿ ಶಾಸಕ ಕೈಲಾಶ್ ಗಹ್ಲೋಟ್ ಅವರು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೆ, ಬಿಜೆಪಿಯ ಮಾಜಿ ಶಾಸಕ ಅನಿಲ್ ಝಾ ಭಾನುವಾರ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ದೆಹಲಿ ಸಚಿವ

ವಾಯವ್ಯ ದೆಹಲಿಯ ಕಿರಾರಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿರುವ ಝಾ ಅವರು ಬಿಜೆಪಿಯ ನಾಯಕತ್ವ ಮತ್ತು ನೀತಿಗಳಿಂದ ಭ್ರಮನಿರಸನಗೊಂಡು ಎಎಪಿಗೆ ಸೇರ್ಪಡೆಗೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಪಕ್ಷ ಕಟ್ಟಿದ ಝಾ ಅವರ ರಾಜೀನಾಮೆಯು ಬಿಜೆಪಿಯ ಭದ್ರಕೋಟೆಗೆ ಹಿನ್ನಡೆಯಾಗಲಿದೆ ಎಂದು ಪರಿಗಣಿಸಲಾಗಿದೆ. ದೆಹಲಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅನಧಿಕೃತ ನೀರಿನ ಪೈಪ್‌ಗಳು ಮತ್ತು ದೋಷಪೂರಿತ ಒಳಚರಂಡಿ ಮಾರ್ಗಗಳು ಸೇರಿದಂತೆ ಅಸಮರ್ಪಕ ಮೂಲಸೌಕರ್ಯಗಳೊಂದಿಗೆ ದೆಹಲಿಯ ಪೂರ್ವಂಚಲಿ ಪ್ರದೇಶದ ನಿವಾಸಿಗಳು ವಾಸಿಸುತ್ತಿದ್ದಾರೆ, ಅದರೆ ಇಲ್ಲಿನ ಸಮುದಾಯಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರು ದುಡಿದಿದ್ದಾರೆ ಎಂದು ಝಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಹೊಗಳಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರ ಅಡಳಿತದ ಅಡಿಯಲ್ಲಿ ಕಳೆದ 10 ವರ್ಷಗಳಲ್ಲಿ, ಕುಡಿಯುವ ನೀರು ಪ್ರತಿ ಮನೆಯನ್ನು ತಲುಪಿತು” ಎಂದು ಝಾ ಹೇಳಿದ್ದಾರೆ.

ಝಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಅರವಿಂದ್ ಕೇಜ್ರಿವಾಲ್, “ಅನಿಲ್ ಝಾ ಅವರನ್ನು ದೆಹಲಿಯ ಪೂರ್ವಾಂಚಲಿ ಸಮುದಾಯದ ದೊಡ್ಡ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಯುಪಿ ಮತ್ತು ಬಿಹಾರದಿಂದ ಜನರು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ದೆಹಲಿಗೆ ಬರುತ್ತಾರೆ. ವರ್ಷಗಳ ಕಾಲ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಅವರನ್ನು ನಿರ್ಲಕ್ಷಿಸಿವೆ. ನಾನು ಮುಖ್ಯಮಂತ್ರಿಯಾದಾಗ ಅವರ ಜೀವನ ಪರಿಸ್ಥಿತಿಯನ್ನು ಸುಧಾರಿಸಲು ನಾವು ಈ ಕಾಲೋನಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ.

ಎಎಪಿಗೆ ಸೇರಿದಂತೆ, ಬಿಜೆಪಿಯ ದೆಹಲಿ ಘಟಕದಲ್ಲಿರುವ ಕೆಲವು ನಾಯಕರು “ದಾರಿ ತಪ್ಪಿದ ಮಕ್ಕಳಂತೆ” ಇದ್ದು, ಬಿಜೆಪಿಯ ಕೇಂದ್ರ ನಾಯಕತ್ವವು ಅವರನ್ನು ನಿರ್ವಹಿಸಲು ಸಾಧ್ಯವಾಗದ “ವೃದ್ಧ ತಂದೆ”ಯಂತಿದೆ ಎಂದು ಅನಿಲ್ ಝಾ ತಮ್ಮ ಹಿಂದಿನ ಪಕ್ಷವನ್ನು ಟೀಕಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮತಬ್ಯಾಂಕ್ ಎಂದೆ ಪರಿಗಣಿಸಲ್ಪಟ್ಟ ಪೂರ್ವಾಂಚಲಿ ಮತದಾರರು, 2015 ರ ವಿಧಾನಸಭಾ ಚುನಾವಣೆಯಲ್ಲಿ AAP ಕಡೆಗೆ ಒಲವು ತೋರಿದ್ದರು. ಹಾಗಾಗಿ ಇಲ್ಲಿ 13 AAP ನಾಯಕರು ತಮ್ಮ ಕ್ಷೇತ್ರಗಳಲ್ಲಿ ಗೆದ್ದಿದ್ದರು. ಇದೀಗ ಅನಿಲ್ ಝಾ ಅವರು ಎಎಪಿಗೆ ಸೇರ್ಪಡೆಗೊಳ್ಳುವುದರೊಂದಿಗೆ, ರಾಷ್ಟ್ರ ರಾಜಧಾನಿಯಲ್ಲಿ ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಪೂರ್ವಾಂಚಲಿ ಸಮುದಾಯದ ಮೇಲೆ ತನ್ನ ಹಿಡಿತವನ್ನು ಬಲಪಡಿಸುವಲ್ಲಿ AAP ಒಂದು ಹೆಜ್ಜೆ ಮುಂದೆ ಸಾಗಿದೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...