Homeಮುಖಪುಟದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

- Advertisement -
- Advertisement -

ದೆಹಲಿ ಸಚಿವ ಮತ್ತು ಎಎಪಿ ಶಾಸಕ ಕೈಲಾಶ್ ಗಹ್ಲೋಟ್ ಅವರು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೆ, ಬಿಜೆಪಿಯ ಮಾಜಿ ಶಾಸಕ ಅನಿಲ್ ಝಾ ಭಾನುವಾರ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ದೆಹಲಿ ಸಚಿವ

ವಾಯವ್ಯ ದೆಹಲಿಯ ಕಿರಾರಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿರುವ ಝಾ ಅವರು ಬಿಜೆಪಿಯ ನಾಯಕತ್ವ ಮತ್ತು ನೀತಿಗಳಿಂದ ಭ್ರಮನಿರಸನಗೊಂಡು ಎಎಪಿಗೆ ಸೇರ್ಪಡೆಗೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಪಕ್ಷ ಕಟ್ಟಿದ ಝಾ ಅವರ ರಾಜೀನಾಮೆಯು ಬಿಜೆಪಿಯ ಭದ್ರಕೋಟೆಗೆ ಹಿನ್ನಡೆಯಾಗಲಿದೆ ಎಂದು ಪರಿಗಣಿಸಲಾಗಿದೆ. ದೆಹಲಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅನಧಿಕೃತ ನೀರಿನ ಪೈಪ್‌ಗಳು ಮತ್ತು ದೋಷಪೂರಿತ ಒಳಚರಂಡಿ ಮಾರ್ಗಗಳು ಸೇರಿದಂತೆ ಅಸಮರ್ಪಕ ಮೂಲಸೌಕರ್ಯಗಳೊಂದಿಗೆ ದೆಹಲಿಯ ಪೂರ್ವಂಚಲಿ ಪ್ರದೇಶದ ನಿವಾಸಿಗಳು ವಾಸಿಸುತ್ತಿದ್ದಾರೆ, ಅದರೆ ಇಲ್ಲಿನ ಸಮುದಾಯಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರು ದುಡಿದಿದ್ದಾರೆ ಎಂದು ಝಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಹೊಗಳಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರ ಅಡಳಿತದ ಅಡಿಯಲ್ಲಿ ಕಳೆದ 10 ವರ್ಷಗಳಲ್ಲಿ, ಕುಡಿಯುವ ನೀರು ಪ್ರತಿ ಮನೆಯನ್ನು ತಲುಪಿತು” ಎಂದು ಝಾ ಹೇಳಿದ್ದಾರೆ.

ಝಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಅರವಿಂದ್ ಕೇಜ್ರಿವಾಲ್, “ಅನಿಲ್ ಝಾ ಅವರನ್ನು ದೆಹಲಿಯ ಪೂರ್ವಾಂಚಲಿ ಸಮುದಾಯದ ದೊಡ್ಡ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಯುಪಿ ಮತ್ತು ಬಿಹಾರದಿಂದ ಜನರು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ದೆಹಲಿಗೆ ಬರುತ್ತಾರೆ. ವರ್ಷಗಳ ಕಾಲ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಅವರನ್ನು ನಿರ್ಲಕ್ಷಿಸಿವೆ. ನಾನು ಮುಖ್ಯಮಂತ್ರಿಯಾದಾಗ ಅವರ ಜೀವನ ಪರಿಸ್ಥಿತಿಯನ್ನು ಸುಧಾರಿಸಲು ನಾವು ಈ ಕಾಲೋನಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ.

ಎಎಪಿಗೆ ಸೇರಿದಂತೆ, ಬಿಜೆಪಿಯ ದೆಹಲಿ ಘಟಕದಲ್ಲಿರುವ ಕೆಲವು ನಾಯಕರು “ದಾರಿ ತಪ್ಪಿದ ಮಕ್ಕಳಂತೆ” ಇದ್ದು, ಬಿಜೆಪಿಯ ಕೇಂದ್ರ ನಾಯಕತ್ವವು ಅವರನ್ನು ನಿರ್ವಹಿಸಲು ಸಾಧ್ಯವಾಗದ “ವೃದ್ಧ ತಂದೆ”ಯಂತಿದೆ ಎಂದು ಅನಿಲ್ ಝಾ ತಮ್ಮ ಹಿಂದಿನ ಪಕ್ಷವನ್ನು ಟೀಕಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮತಬ್ಯಾಂಕ್ ಎಂದೆ ಪರಿಗಣಿಸಲ್ಪಟ್ಟ ಪೂರ್ವಾಂಚಲಿ ಮತದಾರರು, 2015 ರ ವಿಧಾನಸಭಾ ಚುನಾವಣೆಯಲ್ಲಿ AAP ಕಡೆಗೆ ಒಲವು ತೋರಿದ್ದರು. ಹಾಗಾಗಿ ಇಲ್ಲಿ 13 AAP ನಾಯಕರು ತಮ್ಮ ಕ್ಷೇತ್ರಗಳಲ್ಲಿ ಗೆದ್ದಿದ್ದರು. ಇದೀಗ ಅನಿಲ್ ಝಾ ಅವರು ಎಎಪಿಗೆ ಸೇರ್ಪಡೆಗೊಳ್ಳುವುದರೊಂದಿಗೆ, ರಾಷ್ಟ್ರ ರಾಜಧಾನಿಯಲ್ಲಿ ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಪೂರ್ವಾಂಚಲಿ ಸಮುದಾಯದ ಮೇಲೆ ತನ್ನ ಹಿಡಿತವನ್ನು ಬಲಪಡಿಸುವಲ್ಲಿ AAP ಒಂದು ಹೆಜ್ಜೆ ಮುಂದೆ ಸಾಗಿದೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...