Homeಮುಖಪುಟದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

- Advertisement -
- Advertisement -

ದೆಹಲಿ ಸಚಿವ ಮತ್ತು ಎಎಪಿ ಶಾಸಕ ಕೈಲಾಶ್ ಗಹ್ಲೋಟ್ ಅವರು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೆ, ಬಿಜೆಪಿಯ ಮಾಜಿ ಶಾಸಕ ಅನಿಲ್ ಝಾ ಭಾನುವಾರ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ದೆಹಲಿ ಸಚಿವ

ವಾಯವ್ಯ ದೆಹಲಿಯ ಕಿರಾರಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿರುವ ಝಾ ಅವರು ಬಿಜೆಪಿಯ ನಾಯಕತ್ವ ಮತ್ತು ನೀತಿಗಳಿಂದ ಭ್ರಮನಿರಸನಗೊಂಡು ಎಎಪಿಗೆ ಸೇರ್ಪಡೆಗೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಪಕ್ಷ ಕಟ್ಟಿದ ಝಾ ಅವರ ರಾಜೀನಾಮೆಯು ಬಿಜೆಪಿಯ ಭದ್ರಕೋಟೆಗೆ ಹಿನ್ನಡೆಯಾಗಲಿದೆ ಎಂದು ಪರಿಗಣಿಸಲಾಗಿದೆ. ದೆಹಲಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅನಧಿಕೃತ ನೀರಿನ ಪೈಪ್‌ಗಳು ಮತ್ತು ದೋಷಪೂರಿತ ಒಳಚರಂಡಿ ಮಾರ್ಗಗಳು ಸೇರಿದಂತೆ ಅಸಮರ್ಪಕ ಮೂಲಸೌಕರ್ಯಗಳೊಂದಿಗೆ ದೆಹಲಿಯ ಪೂರ್ವಂಚಲಿ ಪ್ರದೇಶದ ನಿವಾಸಿಗಳು ವಾಸಿಸುತ್ತಿದ್ದಾರೆ, ಅದರೆ ಇಲ್ಲಿನ ಸಮುದಾಯಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರು ದುಡಿದಿದ್ದಾರೆ ಎಂದು ಝಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಹೊಗಳಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರ ಅಡಳಿತದ ಅಡಿಯಲ್ಲಿ ಕಳೆದ 10 ವರ್ಷಗಳಲ್ಲಿ, ಕುಡಿಯುವ ನೀರು ಪ್ರತಿ ಮನೆಯನ್ನು ತಲುಪಿತು” ಎಂದು ಝಾ ಹೇಳಿದ್ದಾರೆ.

ಝಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಅರವಿಂದ್ ಕೇಜ್ರಿವಾಲ್, “ಅನಿಲ್ ಝಾ ಅವರನ್ನು ದೆಹಲಿಯ ಪೂರ್ವಾಂಚಲಿ ಸಮುದಾಯದ ದೊಡ್ಡ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಯುಪಿ ಮತ್ತು ಬಿಹಾರದಿಂದ ಜನರು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ದೆಹಲಿಗೆ ಬರುತ್ತಾರೆ. ವರ್ಷಗಳ ಕಾಲ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಅವರನ್ನು ನಿರ್ಲಕ್ಷಿಸಿವೆ. ನಾನು ಮುಖ್ಯಮಂತ್ರಿಯಾದಾಗ ಅವರ ಜೀವನ ಪರಿಸ್ಥಿತಿಯನ್ನು ಸುಧಾರಿಸಲು ನಾವು ಈ ಕಾಲೋನಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ.

ಎಎಪಿಗೆ ಸೇರಿದಂತೆ, ಬಿಜೆಪಿಯ ದೆಹಲಿ ಘಟಕದಲ್ಲಿರುವ ಕೆಲವು ನಾಯಕರು “ದಾರಿ ತಪ್ಪಿದ ಮಕ್ಕಳಂತೆ” ಇದ್ದು, ಬಿಜೆಪಿಯ ಕೇಂದ್ರ ನಾಯಕತ್ವವು ಅವರನ್ನು ನಿರ್ವಹಿಸಲು ಸಾಧ್ಯವಾಗದ “ವೃದ್ಧ ತಂದೆ”ಯಂತಿದೆ ಎಂದು ಅನಿಲ್ ಝಾ ತಮ್ಮ ಹಿಂದಿನ ಪಕ್ಷವನ್ನು ಟೀಕಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮತಬ್ಯಾಂಕ್ ಎಂದೆ ಪರಿಗಣಿಸಲ್ಪಟ್ಟ ಪೂರ್ವಾಂಚಲಿ ಮತದಾರರು, 2015 ರ ವಿಧಾನಸಭಾ ಚುನಾವಣೆಯಲ್ಲಿ AAP ಕಡೆಗೆ ಒಲವು ತೋರಿದ್ದರು. ಹಾಗಾಗಿ ಇಲ್ಲಿ 13 AAP ನಾಯಕರು ತಮ್ಮ ಕ್ಷೇತ್ರಗಳಲ್ಲಿ ಗೆದ್ದಿದ್ದರು. ಇದೀಗ ಅನಿಲ್ ಝಾ ಅವರು ಎಎಪಿಗೆ ಸೇರ್ಪಡೆಗೊಳ್ಳುವುದರೊಂದಿಗೆ, ರಾಷ್ಟ್ರ ರಾಜಧಾನಿಯಲ್ಲಿ ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಪೂರ್ವಾಂಚಲಿ ಸಮುದಾಯದ ಮೇಲೆ ತನ್ನ ಹಿಡಿತವನ್ನು ಬಲಪಡಿಸುವಲ್ಲಿ AAP ಒಂದು ಹೆಜ್ಜೆ ಮುಂದೆ ಸಾಗಿದೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...