Homeಮುಖಪುಟದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

- Advertisement -
- Advertisement -

ದೆಹಲಿ ಸಚಿವ ಮತ್ತು ಎಎಪಿ ಶಾಸಕ ಕೈಲಾಶ್ ಗಹ್ಲೋಟ್ ಅವರು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೆ, ಬಿಜೆಪಿಯ ಮಾಜಿ ಶಾಸಕ ಅನಿಲ್ ಝಾ ಭಾನುವಾರ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ದೆಹಲಿ ಸಚಿವ

ವಾಯವ್ಯ ದೆಹಲಿಯ ಕಿರಾರಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿರುವ ಝಾ ಅವರು ಬಿಜೆಪಿಯ ನಾಯಕತ್ವ ಮತ್ತು ನೀತಿಗಳಿಂದ ಭ್ರಮನಿರಸನಗೊಂಡು ಎಎಪಿಗೆ ಸೇರ್ಪಡೆಗೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಪಕ್ಷ ಕಟ್ಟಿದ ಝಾ ಅವರ ರಾಜೀನಾಮೆಯು ಬಿಜೆಪಿಯ ಭದ್ರಕೋಟೆಗೆ ಹಿನ್ನಡೆಯಾಗಲಿದೆ ಎಂದು ಪರಿಗಣಿಸಲಾಗಿದೆ. ದೆಹಲಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅನಧಿಕೃತ ನೀರಿನ ಪೈಪ್‌ಗಳು ಮತ್ತು ದೋಷಪೂರಿತ ಒಳಚರಂಡಿ ಮಾರ್ಗಗಳು ಸೇರಿದಂತೆ ಅಸಮರ್ಪಕ ಮೂಲಸೌಕರ್ಯಗಳೊಂದಿಗೆ ದೆಹಲಿಯ ಪೂರ್ವಂಚಲಿ ಪ್ರದೇಶದ ನಿವಾಸಿಗಳು ವಾಸಿಸುತ್ತಿದ್ದಾರೆ, ಅದರೆ ಇಲ್ಲಿನ ಸಮುದಾಯಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರು ದುಡಿದಿದ್ದಾರೆ ಎಂದು ಝಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಹೊಗಳಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರ ಅಡಳಿತದ ಅಡಿಯಲ್ಲಿ ಕಳೆದ 10 ವರ್ಷಗಳಲ್ಲಿ, ಕುಡಿಯುವ ನೀರು ಪ್ರತಿ ಮನೆಯನ್ನು ತಲುಪಿತು” ಎಂದು ಝಾ ಹೇಳಿದ್ದಾರೆ.

ಝಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಅರವಿಂದ್ ಕೇಜ್ರಿವಾಲ್, “ಅನಿಲ್ ಝಾ ಅವರನ್ನು ದೆಹಲಿಯ ಪೂರ್ವಾಂಚಲಿ ಸಮುದಾಯದ ದೊಡ್ಡ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಯುಪಿ ಮತ್ತು ಬಿಹಾರದಿಂದ ಜನರು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ದೆಹಲಿಗೆ ಬರುತ್ತಾರೆ. ವರ್ಷಗಳ ಕಾಲ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಅವರನ್ನು ನಿರ್ಲಕ್ಷಿಸಿವೆ. ನಾನು ಮುಖ್ಯಮಂತ್ರಿಯಾದಾಗ ಅವರ ಜೀವನ ಪರಿಸ್ಥಿತಿಯನ್ನು ಸುಧಾರಿಸಲು ನಾವು ಈ ಕಾಲೋನಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ.

ಎಎಪಿಗೆ ಸೇರಿದಂತೆ, ಬಿಜೆಪಿಯ ದೆಹಲಿ ಘಟಕದಲ್ಲಿರುವ ಕೆಲವು ನಾಯಕರು “ದಾರಿ ತಪ್ಪಿದ ಮಕ್ಕಳಂತೆ” ಇದ್ದು, ಬಿಜೆಪಿಯ ಕೇಂದ್ರ ನಾಯಕತ್ವವು ಅವರನ್ನು ನಿರ್ವಹಿಸಲು ಸಾಧ್ಯವಾಗದ “ವೃದ್ಧ ತಂದೆ”ಯಂತಿದೆ ಎಂದು ಅನಿಲ್ ಝಾ ತಮ್ಮ ಹಿಂದಿನ ಪಕ್ಷವನ್ನು ಟೀಕಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮತಬ್ಯಾಂಕ್ ಎಂದೆ ಪರಿಗಣಿಸಲ್ಪಟ್ಟ ಪೂರ್ವಾಂಚಲಿ ಮತದಾರರು, 2015 ರ ವಿಧಾನಸಭಾ ಚುನಾವಣೆಯಲ್ಲಿ AAP ಕಡೆಗೆ ಒಲವು ತೋರಿದ್ದರು. ಹಾಗಾಗಿ ಇಲ್ಲಿ 13 AAP ನಾಯಕರು ತಮ್ಮ ಕ್ಷೇತ್ರಗಳಲ್ಲಿ ಗೆದ್ದಿದ್ದರು. ಇದೀಗ ಅನಿಲ್ ಝಾ ಅವರು ಎಎಪಿಗೆ ಸೇರ್ಪಡೆಗೊಳ್ಳುವುದರೊಂದಿಗೆ, ರಾಷ್ಟ್ರ ರಾಜಧಾನಿಯಲ್ಲಿ ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಪೂರ್ವಾಂಚಲಿ ಸಮುದಾಯದ ಮೇಲೆ ತನ್ನ ಹಿಡಿತವನ್ನು ಬಲಪಡಿಸುವಲ್ಲಿ AAP ಒಂದು ಹೆಜ್ಜೆ ಮುಂದೆ ಸಾಗಿದೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....