Homeಮುಖಪುಟದೆಹಲಿಯಲ್ಲಿ ನಿಮ್ಮ ಶಾಸಕರನ್ನು ಎಣಿಸಿ - ಕಾಂಗ್ರೆಸ್‌ಗೆ ಪಂಜಾಬ್ ಸಿಎಂ

ದೆಹಲಿಯಲ್ಲಿ ನಿಮ್ಮ ಶಾಸಕರನ್ನು ಎಣಿಸಿ – ಕಾಂಗ್ರೆಸ್‌ಗೆ ಪಂಜಾಬ್ ಸಿಎಂ

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ಸುಮಾರು 30 ಆಮ್ ಆದ್ಮಿ ಪಕ್ಷದ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. “ಕಳೆದ ಮೂರು ವರ್ಷಗಳಿಂದ ಬಾಜ್ವಾ ಅದೇ ಹೇಳಿಕೆಯನ್ನು ನೀಡುತ್ತಿದ್ದಾರೆ ಮತ್ತು ಅವರು ಅದನ್ನು ಹೇಳಿಕೊಳ್ಳುತ್ತಲೇ ಇರಬಹುದು” ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ

“30-40 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಹಾರಲಿದ್ದಾರೆ ಎಂದು ಅವರು ಹೇಳುತ್ತಲೇ ಇದ್ದಾರೆ… ದೆಹಲಿಯಲ್ಲಿ ಅವರಿಗೆ ಎಷ್ಟು ಶಾಸಕರಿದ್ದಾರೆ ಎಂದು ಎಣಿಸಲು ನಾನು ಪ್ರತಾಪ್ ಸಿಂಗ್ ಬಾಜ್ವಾ ಅವರನ್ನು ಕೇಳುತ್ತೇನೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿ 5 ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲಿನ ಕೆಲವೇ ದಿನಗಳ ನಂತರ, ಕಾಂಗ್ರೆಸ್ ಪಕ್ಷವೂ ಎಎಪಿಯ 30 ಶಾಸಕರೊಂದಿಗೆ ಸಂಪರ್ಕದಲ್ಲಿ ಇದೆ ಎಂದು ಹೇಳಿತ್ತು. ಇದರ ನಂತರ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಿಎಂ ಮಾನ್ ಅವರು ಸಭೆ ನಡೆಸಿದ್ದಾರೆ. ಈ ಸಭೆಯ ನಂತರ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.

ಕಪುರ್ತಲಾ ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಎಲ್ಲಾ 91 ಪಂಜಾಬ್ ಎಎಪಿ ಶಾಸಕರು ಮತ್ತು ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಉನ್ನತ ನಾಯಕರು ಭಾಗವಹಿಸಿದ್ದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾನ್, ಕೇಜ್ರಿವಾಲ್ ಮತ್ತು ಸಿಸೋಡಿಯಾ ದೆಹಲಿ ಚುನಾವಣೆಗೆ ನೀಡಿದ ಕೊಡುಗೆಗಳಿಗಾಗಿ ಪಂಜಾಬ್‌ನ ಎಎಪಿ ಘಟಕಕ್ಕೆ ಕೃತಜ್ಞತೆ ಸಲ್ಲಿಸಿದ್ದು, ಧನ್ಯವಾದಗಳನ್ನು ಅರ್ಪಿಸಿದ್ದಾರೆ ಎಂದು ಹೇಳಿದ್ದಾರೆ.

“ಪಂಜಾಬ್‌ನಲ್ಲಿ ಎಎಪಿ ಸರ್ಕಾರವು ಮೂಲಸೌಕರ್ಯಗಳನ್ನು ನಿರ್ಮಿಸಲು ಮತ್ತು ರಾಜ್ಯದಲ್ಲಿ ಟೋಲ್‌ಗಳ ಹೊರೆಯನ್ನು ಕಡಿಮೆ ಮಾಡಲು ಕೆಲಸ ಮಾಡುತ್ತಿದೆ. ನಾವು ನಮ್ಮ ಕೆಲಸವನ್ನು ಚುರುಕುಗೊಳಿಸಬೇಕಾಗಿದೆ. ದೆಹಲಿಯಲ್ಲಿ ಎಎಪಿ ಕೈಗೊಂಡ ಕೆಲಸವು ಕಳೆದ 75 ವರ್ಷಗಳಲ್ಲಿ ಎಂದಿಗೂ ಮಾಡಲಾಗಿಲ್ಲ. ಗೆಲುವು ಮತ್ತು ಸೋಲು ಆಟದ ಭಾಗವಾಗಿದೆ” ಎಂದು ಅವರು ಹೇಳಿದ್ದಾರೆ.

“ಪಂಜಾಬ್‌ನಲ್ಲಿ ದೆಹಲಿಯ ಅನುಭವವನ್ನು ನಾವು ಬಳಸುತ್ತೇವೆ. ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ನಮ್ಮ ಪಕ್ಷವು ತನ್ನ ಕೆಲಸಕ್ಕೆ ಹೆಸರುವಾಸಿಯಾಗಿದೆ. ಇಂದಿನ ಸಭೆಯಲ್ಲಿ, ಮುಂಬರುವ ಎರಡು ವರ್ಷಗಳಲ್ಲಿ, ಪಂಜಾಬ್ ಅನ್ನು ಇಡೀ ರಾಷ್ಟ್ರವು ನೋಡುವ ಮಾದರಿಯನ್ನಾಗಿ ಮಾಡುತ್ತೇವೆ ಎಂದು ನಿರ್ಧರಿಸಲಾಯಿತು. ಪಂಜಾಬ್ ಯಾವಾಗಲೂ ಎಲ್ಲಾ ಹೋರಾಟಗಳಲ್ಲಿ ಮುಂಚೂಣಿಯಲ್ಲಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಸ್ತುತ, ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರದಲ್ಲಿರುವ ಏಕೈಕ ರಾಜ್ಯ ಪಂಜಾಬ್ ಆಗಿದೆ. ಪಂಜಾಬ್‌ನಲ್ಲಿ 2022 ರ ವಿಧಾನಸಭಾ ಚುನಾವಣೆಯಲ್ಲಿ, ಎಎಪಿ 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್‌ನಿಂದ ಅಧಿಕಾರವನ್ನು ಕಸಿದುಕೊಂಡಿತು. ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದರೆ, ಶಿರೋಮಣಿ ಅಕಾಲಿ ದಳವು ಮೂವರು ಶಾಸಕರನ್ನು ಹೊಂದಿದೆ.

ಇದನ್ನೂಓದಿ:  ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...