Homeಮುಖಪುಟದೆಹಲಿಯಲ್ಲಿ ಕುಳಿತು ಗುಂಪು ಹಲ್ಲೆ, ಗೋರಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ - ಸುಪ್ರೀಂಕೋರ್ಟ್

ದೆಹಲಿಯಲ್ಲಿ ಕುಳಿತು ಗುಂಪು ಹಲ್ಲೆ, ಗೋರಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

- Advertisement -
- Advertisement -

ಗುಂಪು ಹಿಂಸಾಚಾರ ಮತ್ತು ಗುಂಪು ಥಳಿತ ಘಟನೆಗಳ ಬಗ್ಗೆ, ನಿರ್ದಿಷ್ಟವಾಗಿ ಗೋವುಗಳನ್ನು ಕಳ್ಳಸಾಗಣೆ ಮತ್ತು ಹತ್ಯೆಯಿಂದ ರಕ್ಷಿಸುವ ಹೆಸರಿನಲ್ಲಿ “ಗೋ ರಕ್ಷಕರು” ನಡೆಸುವ ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಕ್ತಾಯಗೊಳಿಸಿದೆ. ದೆಹಲಿಯಲ್ಲಿ ಕುಳಿತಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಇಂತಹ ವಿಷಯಗಳನ್ನು ಸೂಕ್ಷ್ಮವಾಗಿ ನಿರ್ವಹಿಸುವುದು ಪ್ರಾಯೋಗಿಕವಲ್ಲ ಎಂದು ವಾದಿಸಿದ್ದು, ಅಂತಹ ಘಟನೆಗಳಿಗೆ ಕಾರಣವಾಗುವ ಅಂಶಗಳು ವಿವಿಧ ರಾಜ್ಯಗಳಲ್ಲಿ ಭಿನ್ನವಾಗಿರಬಹುದು ಎಂದು ಹೇಳಿದೆ. ದೆಹಲಿಯಲ್ಲಿ ಕುಳಿತು

“ಧ್ವಂಸಗೊಳಿಸುವ ವಿಷಯದಲ್ಲಿಯೂ ಸಹ (ಕ್ರಿಮಿನಲ್ ಅಪರಾಧಗಳೆಂದು ಶಂಕಿಸಲಾಗಿರುವವರ ಆಸ್ತಿಗಳನ್ನು ಧ್ವಂಸಗೊಳಿಸುವುದರ ವಿರುದ್ಧದ ಅರ್ಜಿಗಳು ಕಾನೂನುಬಾಹಿರ ಶಿಕ್ಷೆಯ ಕ್ರಮವಾಗಿ), ನಾವು ಅರ್ಜಿದಾರರಿಗೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ತೆರಳಲು ಸ್ವಾತಂತ್ರ್ಯ ನೀಡಿದ್ದೇವೆ.. ಪ್ರತಿ ರಾಜ್ಯವು ವಿಭಿನ್ನ ಪರಿಸ್ಥಿತಿಯನ್ನು ಹೊಂದಿರುತ್ತದೆ… ಕೆಲವು ರಾಜ್ಯಗಳಲ್ಲಿ, ಗೋಮಾಂಸ (ಸೇವನೆ) ನಿಯಮಿತ ರೀತಿಯದ್ದಾಗಿದೆ…,” ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತೆಹ್ಸೀನ್ ಪೂನವಾಲ ಪ್ರಕರಣದಲ್ಲಿ ಗುಂಪು ಥಳಿತದ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಈಗಾಗಲೇ ವಿವರವಾದ ನಿರ್ದೇಶನಗಳನ್ನು ನೀಡಲಾಗಿದೆ ಎಂದು ನ್ಯಾಯಾಲಯವು ಹೇಳಿದೆ. ಈ ನಿರ್ದೇಶನಗಳು ಎಲ್ಲಾ ಅಧಿಕಾರಿಗಳ ಮೇಲೆ ಬದ್ಧವಾಗಿವೆ ಎಂದು ನ್ಯಾಯಾಲಯ ಒತ್ತಿ ಹೇಳಿದ್ದು, ಅಂತಹ ಯಾವುದೇ ನಿರ್ದೇಶನವನ್ನು ಉಲ್ಲಂಘಿಸಿದರೆ, ಸಂತ್ರಸ್ತ ವ್ಯಕ್ತಿಗೆ ಕಾನೂನು ಪರಿಹಾರಗಳಿವೆ ಎಂದು ಅದು ಹೇಳಿದೆ. ದೆಹಲಿಯಲ್ಲಿ ಕುಳಿತು

“ಆದಾಗ್ಯೂ, ದೆಹಲಿಯಲ್ಲಿ ಕುಳಿತುಕೊಂಡು, ದೇಶದ ವಿವಿಧ ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಾವು ಮೇಲ್ವಿಚಾರಣೆ ಮಾಡಲು ಸಾಧ್ಯವಿಲ್ಲ. ನಮ್ಮ ಅಭಿಪ್ರಾಯದಲ್ಲಿ ಈ ನ್ಯಾಯಾಲಯದಿಂದ ಅಂತಹ ಸೂಕ್ಷ್ಮ ನಿರ್ವಹಣೆ ಕಾರ್ಯಸಾಧ್ಯವಲ್ಲ. ಯಾವುದೇ ವ್ಯಕ್ತಿ ನೊಂದಿದ್ದರೆ, ಕಾನೂನಿನ ಪ್ರಕಾರ ಸಮರ್ಥ ನ್ಯಾಯಾಲಯವನ್ನು ಸಂಪರ್ಕಿಸಬಹುದು” ಎಂದು ನ್ಯಾಯಾಲಯದ ಆದೇಶ ಹೇಳಿದೆ.

ಇದೇ ರೀತಿಯ ಕಾರಣಗಳಿಗಾಗಿ, ವಿವಿಧ ರಾಜ್ಯಗಳಲ್ಲಿ ಪರಿಚಯಿಸಲಾದ ಗೋಸಂರಕ್ಷಣಾ ಕಾನೂನುಗಳ ಸಿಂಧುತ್ವವನ್ನು ಪರಿಶೀಲಿಸಲು ನ್ಯಾಯಾಲಯವು ನಿರಾಕರಿಸಿತು. ಅಂತಹ ವಿಷಯಗಳ ಬಗ್ಗೆ ಸಂಬಂಧಪಟ್ಟ ರಾಜ್ಯದ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದು ಸುಪ್ರಿಂಕೋರ್ಟ್ ಅಭಿಪ್ರಾಯಪಟ್ಟಿದೆ.

“ಸಾಮಾನ್ಯ ಅರ್ಜಿಯಲ್ಲಿ, 13 ವಿಭಿನ್ನ ರಾಜ್ಯ ಕಾನೂನುಗಳ ಸಿಂಧುತ್ವವನ್ನು ಈ ನ್ಯಾಯಾಲಯವು ಪರೀಕ್ಷಿಸುವುದು ಸರಿಯಲ್ಲ. ಹೀಗಾಗಿ, ನಿರ್ದಿಷ್ಟ ಹೈಕೋರ್ಟ್ ಅನ್ನು ಸಂಪರ್ಕಿಸಬೇಕಾಗಿದೆ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಗುಂಪು ಹತ್ಯೆ ಘಟನೆಗಳ ವಿಷಯದ ಕುರಿತು ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟವು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ಆಲಿಸುತ್ತಿತ್ತು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲ ನಿಜಾಮುದ್ದೀನ್ ಪಾಷಾ, ಇಂತಹ ಘಟನೆಗಳ ವಿರುದ್ಧ ನ್ಯಾಯಾಲಯವು ನೀಡಿದ ಹಿಂದಿನ ನಿರ್ದೇಶನಗಳನ್ನು ನಿರ್ಲಜ್ಜವಾಗಿ ಉಲ್ಲಂಘಿಸಲಾಗುತ್ತಿದೆ. ವಿಶೇಷವಾಗಿ ಕೆಲವು ರಾಜ್ಯಗಳಲ್ಲಿ ಗೋ ಸಂರಕ್ಷಣಾ ಕಾನೂನುಗಳನ್ನು ಪರಿಚಯಿಸುವುದರಿಂದ ‘ಗೋ ರಕ್ಷಕರು’ ಗುಂಪು ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

“ಖಾಸಗಿ ವ್ಯಕ್ತಿಗಳಿಗೆ ವಾಹನಗಳನ್ನು ವಶಪಡಿಸಿಕೊಳ್ಳಲು ಮತ್ತು ದನಗಳ ಕಳ್ಳಸಾಗಣೆಗಾಗಿ ಜನರನ್ನು ಬಂಧಿಸಲು ಪೊಲೀಸ್ ಅಧಿಕಾರವನ್ನು ನೀಡಿದಾಗ… ಖಾಸಗಿ ಸಂಸ್ಥೆಗಳಿಗೆ ಪೊಲೀಸ್ ಅಧಿಕಾರವನ್ನು ಹೀಗೆ ನೀಡಲಾಗುತ್ತದೆ. ಈ ವಿಚಾರದಲ್ಲಿ ಆಡಳಿತ ಯಂತ್ರದ ಮನೋಭಾವವನ್ನು ನೋಡಬೇಕಿದ್ದು ಮತ್ತು ಅದು ಎಷ್ಟು ನಿರ್ಲಜ್ಜವಾಗಿದೆ ಎಂಬುದನ್ನು ನೋಡಬೇಕು. ಈ ನ್ಯಾಯಾಲಯವು ಕೆಲವು ರೀತಿಯ ಮೇಲ್ವಿಚಾರಣೆಗೆ ಸಹಾಯ ಮಾಡಿದರೆ, ಹದಿಮೂರು ರಾಜ್ಯಗಳು ಈ ನಿಯಮವನ್ನು ಅನುಸರಿಸುತ್ತವೆ” ಎಂದು ಪಾಷಾ ವಾದಿಸಿದ್ದಾರೆ.

ಅಂತಹ ಕಾನೂನುಗಳನ್ನು ಪ್ರತಿ ರಾಜ್ಯದಲ್ಲಿ ಸೂಕ್ತ ನ್ಯಾಯಾಲಯದ ಮುಂದೆ ಪ್ರಶ್ನಿಸಬಹುದು ಎಂದು ನ್ಯಾಯಾಲಯವು ಹೇಳಿದೆ. “ಅಂತಿಮವಾಗಿ, ಇವೆಲ್ಲವೂ ಕ್ರಿಮಿನಲ್ ಕೃತ್ಯಗಳಾಗಿರುವ ಘಟನೆಗಳು. ಅದು ಸಂಭವಿಸದಂತೆ ನೋಡಿಕೊಳ್ಳುವುದು ಮತ್ತು ವಿಚಾರಣೆ ನಡೆಸುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ನ್ಯಾಯಾಲಯವು ವೈಯಕ್ತಿಕ ಪ್ರಕರಣಗಳನ್ನು ನೋಡುಲು ಸಾಧ್ಯವೆ?” ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ರಾಜ್ಯದ ಅಧಿಕಾರಿಗಳು ಸ್ವತಃ ಅಂತಹ ಕೃತ್ಯಗಳ ಅಪರಾಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ನೋಂದಾಯಿಸಲು ನಿರಾಕರಿಸುತ್ತಾರೆ ಎಂದು ಪಾಷಾ ಉತ್ತರಿಸಿದರು. “ಸರ್ಕಾರಗಳು ಎಫ್‌ಐಆರ್‌ಗಳನ್ನು ದಾಖಲಿಸದಿದ್ದಾಗ … ರಾಜ್ಯಗಳಾದ್ಯಂತ ಇಂತಹದ್ದೆ ಮಾದರಿಯ ಘಟನೆಗಳು ವರದಿಯಾಗುತ್ತದೆ ” ಎಂದು ಅವರು ಹೇಳಿದ್ದಾರೆ.

“ನಾವು ಈಗ ಮಾದರಿಗಳ ಆಧಾರದ ಮೇಲೆ ನಿರ್ಧರಿಸಬೇಕೇ? ನೀವು ಯಾವುದೇ ಸಂತ್ರಸ್ತರ ಪರವಾಗಿ ಹಾಜರಾಗುತ್ತಿದ್ದೀರಾ?” ನ್ಯಾಯಮೂರ್ತಿ ಗವಾಯಿ ಪ್ರತಿಕ್ರಿಯಿಸಿದರು.

ಈ ಮಧ್ಯೆ, ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಸರ್ಕಾರವು ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಗುಂಪು ಹತ್ಯೆಯನ್ನು ಶಿಕ್ಷಿಸುವ ಕಾನೂನು ಪರಿಚಯಿಸಿದೆ ಎಂದು ಹೇಳಿದ್ದಾರೆ.

ಗುಂಪು ಹತ್ಯೆ ಘಟನೆಗಳ ಬಲಿಪಶುಗಳಿಗೆ ಪರಿಹಾರವನ್ನು ನೀಡಲು ಯಾವುದೇ ಏಕರೂಪದ ಮಾನದಂಡಗಳನ್ನು ಸ್ಥಾಪಿಸಲು ಸಾಧ್ಯವಿಲ್ಲ ಎಂದು ಹೇಳಿದ ನಂತರ ನ್ಯಾಯಾಲಯವು ಪ್ರಕರಣವನ್ನು ಮುಕ್ತಾಯಗೊಳಿಸಿದ್ದು, ಇದು ಪ್ರಕರಣದಿಂದ ಪ್ರಕರಣಕ್ಕೆ ನಿರ್ಧರಿಸಬೇಕಾದ ವಿಷಯವಾಗಿದೆ ಎಂದು ಹೇಳಿದೆ.

“ಗುಂಪು ಹತ್ಯೆ ಪ್ರಕರಣಗಳಲ್ಲಿ ಸಮರ್ಪಕ ಪರಿಹಾರ ಎಷ್ಟಿರಬೇಕು ಎಂಬುದು ಪ್ರಕರಣದಿಂದ ಪ್ರಕರಣಕ್ಕೆ ಭಿನ್ನವಾಗಿರುತ್ತದೆ ಮತ್ತು ಯಾವುದೇ ಏಕರೂಪದ ನಿರ್ದೇಶನಗಳನ್ನು ನೀಡಲು ಸಾಧ್ಯವಾಗುವುದಿಲ್ಲ. ಹಾಗೆ ಮಾಡುವುದರಿಂದ ಅಧಿಕಾರಿಗಳು ಅಥವಾ ನ್ಯಾಯಾಲಯಗಳಿಗೆ ಲಭ್ಯವಿರುವ ವಿವೇಚನೆಯನ್ನು ರದ್ದುಗೊಳಿಸಲಾಗುತ್ತದೆ. ಒಬ್ಬ ವ್ಯಕ್ತಿಗೆ ಸರಳವಾದ ಗಾಯವಾಗಿದ್ದರೆ ಮತ್ತು ಇನ್ನೊಬ್ಬರಿಗೆ ಗಂಭೀರವಾದ ಗಾಯವಾಗಿದ್ದರೆ, ಏಕರೂಪದ ಪರಿಹಾರ ನಿರ್ದೇಶನವು ಅನ್ಯಾಯವಾಗುತ್ತದೆ. ಆದ್ದರಿಂದ ಅಂತಹ ಸರ್ವವ್ಯಾಪಿ ಪರಿಹಾರವನ್ನು ಕೋರುವ ಅರ್ಜಿಯು ಸಂತ್ರಸ್ತರ ಪರವಾಗಿರುವ ಹಿತಾಸಕ್ತಿಯಲ್ಲ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂಓದಿ:  ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...