Homeಮುಖಪುಟಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

ಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

- Advertisement -
- Advertisement -

ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ (ಎಂಸಿಡಿ) ಚುನಾವಣೆ ಇಂದು ನಡೆಯುತ್ತಿದ್ದು ಕಸದ ಸಮಸ್ಯೆಯನ್ನು ಗುರಿಯಾಗಿಸಿಕೊಂಡಿರುವ ಎಎಪಿ, ಎಂಸಿಡಿ ಮೇಲೆ ಕಣ್ಣಿಟ್ಟಿದೆ. ಆಡಳಿತಾರೂಢ ಬಿಜೆಪಿ ತನ್ನ ಅಧಿಕಾರವನ್ನು ವಿಸ್ತರಿಸುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಮತ್ತೆ ಗೆಲ್ಲುವ ನಿರೀಕ್ಷೆಯಲ್ಲಿದೆ.

ಸುಮಾರು 1.5 ಕೋಟಿ ಜನರು 250 ವಾರ್ಡ್‌ಗಳಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. 2011ರಲ್ಲಿ ಪ್ರದೇಶವಾರು ರೂಪುಗೊಂಡ ಮೂರು ಎಂಸಿಡಿಗಳನ್ನು ಮರುಸಂಘಟಿಸಲಾಯಿತು. ಈ ವರ್ಷದ ಆರಂಭದಲ್ಲಿ, ಬಿಜೆಪಿಯ ಅವಧಿ ಮುಗಿದ ಬಳಿಕ ವಾರ್ಡ್‌ಗಳನ್ನು ಮರುವಿನ್ಯಾಸಗೊಳಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5.30ಕ್ಕೆ ಮತದಾನ ಕೇಂದ್ರದ ಗೇಟ್‌ಗಳನ್ನು ಮುಚ್ಚಲಾಗುತ್ತದೆ. ನಂತರ ಒಳಗೆ ಇರುವವರು ಮಾತ್ರ ಮತ ಚಲಾಯಿಸಬಹುದು. ಮೆಟ್ರೋ ರೈಲು ಸೇವೆಗಳು ಸಾಮಾನ್ಯ ದಿನಗಳಿಗಿಂತ ಎರಡು ಗಂಟೆ ಮುಂಚಿತವಾಗಿ (4 ಗಂಟೆಗೆ) ಸೇವೆ ಆರಂಭಿಸಿತು. ಡಿಸೆಂಬರ್ 7ರಂದು ಫಲಿತಾಂಶ ಹೊರಬೀಳಲಿದೆ. ಅರವತ್ತೆಂಟು ಮಾದರಿ ಮತಗಟ್ಟೆಗಳು ಮತ್ತು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಹಲವು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದೆ.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...