Homeಮುಖಪುಟಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

ಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

- Advertisement -
- Advertisement -

ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ (ಎಂಸಿಡಿ) ಚುನಾವಣೆ ಇಂದು ನಡೆಯುತ್ತಿದ್ದು ಕಸದ ಸಮಸ್ಯೆಯನ್ನು ಗುರಿಯಾಗಿಸಿಕೊಂಡಿರುವ ಎಎಪಿ, ಎಂಸಿಡಿ ಮೇಲೆ ಕಣ್ಣಿಟ್ಟಿದೆ. ಆಡಳಿತಾರೂಢ ಬಿಜೆಪಿ ತನ್ನ ಅಧಿಕಾರವನ್ನು ವಿಸ್ತರಿಸುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಮತ್ತೆ ಗೆಲ್ಲುವ ನಿರೀಕ್ಷೆಯಲ್ಲಿದೆ.

ಸುಮಾರು 1.5 ಕೋಟಿ ಜನರು 250 ವಾರ್ಡ್‌ಗಳಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. 2011ರಲ್ಲಿ ಪ್ರದೇಶವಾರು ರೂಪುಗೊಂಡ ಮೂರು ಎಂಸಿಡಿಗಳನ್ನು ಮರುಸಂಘಟಿಸಲಾಯಿತು. ಈ ವರ್ಷದ ಆರಂಭದಲ್ಲಿ, ಬಿಜೆಪಿಯ ಅವಧಿ ಮುಗಿದ ಬಳಿಕ ವಾರ್ಡ್‌ಗಳನ್ನು ಮರುವಿನ್ಯಾಸಗೊಳಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5.30ಕ್ಕೆ ಮತದಾನ ಕೇಂದ್ರದ ಗೇಟ್‌ಗಳನ್ನು ಮುಚ್ಚಲಾಗುತ್ತದೆ. ನಂತರ ಒಳಗೆ ಇರುವವರು ಮಾತ್ರ ಮತ ಚಲಾಯಿಸಬಹುದು. ಮೆಟ್ರೋ ರೈಲು ಸೇವೆಗಳು ಸಾಮಾನ್ಯ ದಿನಗಳಿಗಿಂತ ಎರಡು ಗಂಟೆ ಮುಂಚಿತವಾಗಿ (4 ಗಂಟೆಗೆ) ಸೇವೆ ಆರಂಭಿಸಿತು. ಡಿಸೆಂಬರ್ 7ರಂದು ಫಲಿತಾಂಶ ಹೊರಬೀಳಲಿದೆ. ಅರವತ್ತೆಂಟು ಮಾದರಿ ಮತಗಟ್ಟೆಗಳು ಮತ್ತು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಹಲವು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದೆ.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read