Homeಮುಖಪುಟಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

ಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

- Advertisement -
- Advertisement -

ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ (ಎಂಸಿಡಿ) ಚುನಾವಣೆ ಇಂದು ನಡೆಯುತ್ತಿದ್ದು ಕಸದ ಸಮಸ್ಯೆಯನ್ನು ಗುರಿಯಾಗಿಸಿಕೊಂಡಿರುವ ಎಎಪಿ, ಎಂಸಿಡಿ ಮೇಲೆ ಕಣ್ಣಿಟ್ಟಿದೆ. ಆಡಳಿತಾರೂಢ ಬಿಜೆಪಿ ತನ್ನ ಅಧಿಕಾರವನ್ನು ವಿಸ್ತರಿಸುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಮತ್ತೆ ಗೆಲ್ಲುವ ನಿರೀಕ್ಷೆಯಲ್ಲಿದೆ.

ಸುಮಾರು 1.5 ಕೋಟಿ ಜನರು 250 ವಾರ್ಡ್‌ಗಳಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. 2011ರಲ್ಲಿ ಪ್ರದೇಶವಾರು ರೂಪುಗೊಂಡ ಮೂರು ಎಂಸಿಡಿಗಳನ್ನು ಮರುಸಂಘಟಿಸಲಾಯಿತು. ಈ ವರ್ಷದ ಆರಂಭದಲ್ಲಿ, ಬಿಜೆಪಿಯ ಅವಧಿ ಮುಗಿದ ಬಳಿಕ ವಾರ್ಡ್‌ಗಳನ್ನು ಮರುವಿನ್ಯಾಸಗೊಳಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5.30ಕ್ಕೆ ಮತದಾನ ಕೇಂದ್ರದ ಗೇಟ್‌ಗಳನ್ನು ಮುಚ್ಚಲಾಗುತ್ತದೆ. ನಂತರ ಒಳಗೆ ಇರುವವರು ಮಾತ್ರ ಮತ ಚಲಾಯಿಸಬಹುದು. ಮೆಟ್ರೋ ರೈಲು ಸೇವೆಗಳು ಸಾಮಾನ್ಯ ದಿನಗಳಿಗಿಂತ ಎರಡು ಗಂಟೆ ಮುಂಚಿತವಾಗಿ (4 ಗಂಟೆಗೆ) ಸೇವೆ ಆರಂಭಿಸಿತು. ಡಿಸೆಂಬರ್ 7ರಂದು ಫಲಿತಾಂಶ ಹೊರಬೀಳಲಿದೆ. ಅರವತ್ತೆಂಟು ಮಾದರಿ ಮತಗಟ್ಟೆಗಳು ಮತ್ತು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಹಲವು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದೆ.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...