Homeಮುಖಪುಟದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

ದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡು ಬಂದಿದ್ದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಎಎಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆ ಆರಂಭವಾಗಿ 11.45ರ ವೇಳೆಗೆ ಎಎಪಿ 250 ವಾರ್ಡ್‌ಗಳಲ್ಲಿ 132ರಲ್ಲಿ ಮುನ್ನಡೆ ಸಾಧಿಸಿದೆ. ಆರಂಭದಲ್ಲೇ ಹಲವು ಬಾರಿ ಎಎಪಿಯನ್ನು ಹಿಂದಿಕ್ಕಿದ ಬಿಜೆಪಿ ಈಗ 104 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಚುನಾವಣಾ ಆಯೋಗದಿಂದ 115 ಸ್ಥಾನಗಳ ಫಲಿತಾಂಶ ಹೊರಬಿದ್ದಿದ್ದು, ಎಎಪಿ 67, ಬಿಜೆಪಿ 43, ಕಾಂಗ್ರೆಸ್ 4 ಮತ್ತು ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಗೆಲುವಾಗಿದೆ.

ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಂತೆ ಎಎಪಿ ಸ್ವೀಪ್‌ ಮಾಡುವುದು ಕಷ್ಟಸಾಧ್ಯವಾಗಿದೆ. ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ಎಎಪಿ ನಾಯಕ ರಾಘವ್ ಚಡ್ಡಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಧಾವಿಸಿದ್ದಾರೆ. ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಸೇರಿಕೊಂಡಿದ್ದಾರೆ.

ಎಎಪಿ ಕಚೇರಿಯು ಬೆಳಿಗ್ಗೆಯಿಂದಲೇ ಬಲೂನ್‌ಗಳು ಮತ್ತು ಸಂಭ್ರಮಾಚರಣೆಯ ಪೋಸ್ಟರ್‌ಗಳಿಂದ ಕಂಗೊಳಿಸುತ್ತಿದೆ. ಒಟ್ಟು ನಾಲ್ಕು ಎಕ್ಸಿಟ್ ಪೋಲ್‌ಗಳು 155 ವಾರ್ಡ್‌ಗಳಲ್ಲಿ ಎಎಪಿ ಗೆಲುವು ಸಾಧಿಸುತ್ತದೆ ಎಂದಿವೆ. ಬಿಜೆಪಿಗೆ 84 ಸ್ಥಾನಗಳು, ಕಾಂಗ್ರೆಸ್‌ಗೆ 7 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿವೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದ್ದವು.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...