Homeಮುಖಪುಟದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

ದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡು ಬಂದಿದ್ದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಎಎಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆ ಆರಂಭವಾಗಿ 11.45ರ ವೇಳೆಗೆ ಎಎಪಿ 250 ವಾರ್ಡ್‌ಗಳಲ್ಲಿ 132ರಲ್ಲಿ ಮುನ್ನಡೆ ಸಾಧಿಸಿದೆ. ಆರಂಭದಲ್ಲೇ ಹಲವು ಬಾರಿ ಎಎಪಿಯನ್ನು ಹಿಂದಿಕ್ಕಿದ ಬಿಜೆಪಿ ಈಗ 104 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಚುನಾವಣಾ ಆಯೋಗದಿಂದ 115 ಸ್ಥಾನಗಳ ಫಲಿತಾಂಶ ಹೊರಬಿದ್ದಿದ್ದು, ಎಎಪಿ 67, ಬಿಜೆಪಿ 43, ಕಾಂಗ್ರೆಸ್ 4 ಮತ್ತು ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಗೆಲುವಾಗಿದೆ.

ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಂತೆ ಎಎಪಿ ಸ್ವೀಪ್‌ ಮಾಡುವುದು ಕಷ್ಟಸಾಧ್ಯವಾಗಿದೆ. ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ಎಎಪಿ ನಾಯಕ ರಾಘವ್ ಚಡ್ಡಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಧಾವಿಸಿದ್ದಾರೆ. ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಸೇರಿಕೊಂಡಿದ್ದಾರೆ.

ಎಎಪಿ ಕಚೇರಿಯು ಬೆಳಿಗ್ಗೆಯಿಂದಲೇ ಬಲೂನ್‌ಗಳು ಮತ್ತು ಸಂಭ್ರಮಾಚರಣೆಯ ಪೋಸ್ಟರ್‌ಗಳಿಂದ ಕಂಗೊಳಿಸುತ್ತಿದೆ. ಒಟ್ಟು ನಾಲ್ಕು ಎಕ್ಸಿಟ್ ಪೋಲ್‌ಗಳು 155 ವಾರ್ಡ್‌ಗಳಲ್ಲಿ ಎಎಪಿ ಗೆಲುವು ಸಾಧಿಸುತ್ತದೆ ಎಂದಿವೆ. ಬಿಜೆಪಿಗೆ 84 ಸ್ಥಾನಗಳು, ಕಾಂಗ್ರೆಸ್‌ಗೆ 7 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿವೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದ್ದವು.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...