Homeಮುಖಪುಟದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

ದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡು ಬಂದಿದ್ದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಎಎಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆ ಆರಂಭವಾಗಿ 11.45ರ ವೇಳೆಗೆ ಎಎಪಿ 250 ವಾರ್ಡ್‌ಗಳಲ್ಲಿ 132ರಲ್ಲಿ ಮುನ್ನಡೆ ಸಾಧಿಸಿದೆ. ಆರಂಭದಲ್ಲೇ ಹಲವು ಬಾರಿ ಎಎಪಿಯನ್ನು ಹಿಂದಿಕ್ಕಿದ ಬಿಜೆಪಿ ಈಗ 104 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಚುನಾವಣಾ ಆಯೋಗದಿಂದ 115 ಸ್ಥಾನಗಳ ಫಲಿತಾಂಶ ಹೊರಬಿದ್ದಿದ್ದು, ಎಎಪಿ 67, ಬಿಜೆಪಿ 43, ಕಾಂಗ್ರೆಸ್ 4 ಮತ್ತು ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಗೆಲುವಾಗಿದೆ.

ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಂತೆ ಎಎಪಿ ಸ್ವೀಪ್‌ ಮಾಡುವುದು ಕಷ್ಟಸಾಧ್ಯವಾಗಿದೆ. ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ಎಎಪಿ ನಾಯಕ ರಾಘವ್ ಚಡ್ಡಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಧಾವಿಸಿದ್ದಾರೆ. ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಸೇರಿಕೊಂಡಿದ್ದಾರೆ.

ಎಎಪಿ ಕಚೇರಿಯು ಬೆಳಿಗ್ಗೆಯಿಂದಲೇ ಬಲೂನ್‌ಗಳು ಮತ್ತು ಸಂಭ್ರಮಾಚರಣೆಯ ಪೋಸ್ಟರ್‌ಗಳಿಂದ ಕಂಗೊಳಿಸುತ್ತಿದೆ. ಒಟ್ಟು ನಾಲ್ಕು ಎಕ್ಸಿಟ್ ಪೋಲ್‌ಗಳು 155 ವಾರ್ಡ್‌ಗಳಲ್ಲಿ ಎಎಪಿ ಗೆಲುವು ಸಾಧಿಸುತ್ತದೆ ಎಂದಿವೆ. ಬಿಜೆಪಿಗೆ 84 ಸ್ಥಾನಗಳು, ಕಾಂಗ್ರೆಸ್‌ಗೆ 7 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿವೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದ್ದವು.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...