Homeಮುಖಪುಟದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

ದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡು ಬಂದಿದ್ದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಎಎಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆ ಆರಂಭವಾಗಿ 11.45ರ ವೇಳೆಗೆ ಎಎಪಿ 250 ವಾರ್ಡ್‌ಗಳಲ್ಲಿ 132ರಲ್ಲಿ ಮುನ್ನಡೆ ಸಾಧಿಸಿದೆ. ಆರಂಭದಲ್ಲೇ ಹಲವು ಬಾರಿ ಎಎಪಿಯನ್ನು ಹಿಂದಿಕ್ಕಿದ ಬಿಜೆಪಿ ಈಗ 104 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಚುನಾವಣಾ ಆಯೋಗದಿಂದ 115 ಸ್ಥಾನಗಳ ಫಲಿತಾಂಶ ಹೊರಬಿದ್ದಿದ್ದು, ಎಎಪಿ 67, ಬಿಜೆಪಿ 43, ಕಾಂಗ್ರೆಸ್ 4 ಮತ್ತು ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಗೆಲುವಾಗಿದೆ.

ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಂತೆ ಎಎಪಿ ಸ್ವೀಪ್‌ ಮಾಡುವುದು ಕಷ್ಟಸಾಧ್ಯವಾಗಿದೆ. ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ಎಎಪಿ ನಾಯಕ ರಾಘವ್ ಚಡ್ಡಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಧಾವಿಸಿದ್ದಾರೆ. ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಸೇರಿಕೊಂಡಿದ್ದಾರೆ.

ಎಎಪಿ ಕಚೇರಿಯು ಬೆಳಿಗ್ಗೆಯಿಂದಲೇ ಬಲೂನ್‌ಗಳು ಮತ್ತು ಸಂಭ್ರಮಾಚರಣೆಯ ಪೋಸ್ಟರ್‌ಗಳಿಂದ ಕಂಗೊಳಿಸುತ್ತಿದೆ. ಒಟ್ಟು ನಾಲ್ಕು ಎಕ್ಸಿಟ್ ಪೋಲ್‌ಗಳು 155 ವಾರ್ಡ್‌ಗಳಲ್ಲಿ ಎಎಪಿ ಗೆಲುವು ಸಾಧಿಸುತ್ತದೆ ಎಂದಿವೆ. ಬಿಜೆಪಿಗೆ 84 ಸ್ಥಾನಗಳು, ಕಾಂಗ್ರೆಸ್‌ಗೆ 7 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿವೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದ್ದವು.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...