Homeಮುಖಪುಟದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

ದೆಹಲಿ ಮುನ್ಸಿಪಲ್‌ ಕಾರ್ಪೊರೇಷನ್‌ ಮತ ಎಣಿಕೆ: ಎಎಪಿಗೆ ಆರಂಭಿಕ ಮುನ್ನಡೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡು ಬಂದಿದ್ದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಎಎಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆ ಆರಂಭವಾಗಿ 11.45ರ ವೇಳೆಗೆ ಎಎಪಿ 250 ವಾರ್ಡ್‌ಗಳಲ್ಲಿ 132ರಲ್ಲಿ ಮುನ್ನಡೆ ಸಾಧಿಸಿದೆ. ಆರಂಭದಲ್ಲೇ ಹಲವು ಬಾರಿ ಎಎಪಿಯನ್ನು ಹಿಂದಿಕ್ಕಿದ ಬಿಜೆಪಿ ಈಗ 104 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಚುನಾವಣಾ ಆಯೋಗದಿಂದ 115 ಸ್ಥಾನಗಳ ಫಲಿತಾಂಶ ಹೊರಬಿದ್ದಿದ್ದು, ಎಎಪಿ 67, ಬಿಜೆಪಿ 43, ಕಾಂಗ್ರೆಸ್ 4 ಮತ್ತು ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಗೆಲುವಾಗಿದೆ.

ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಂತೆ ಎಎಪಿ ಸ್ವೀಪ್‌ ಮಾಡುವುದು ಕಷ್ಟಸಾಧ್ಯವಾಗಿದೆ. ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ಎಎಪಿ ನಾಯಕ ರಾಘವ್ ಚಡ್ಡಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಧಾವಿಸಿದ್ದಾರೆ. ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಸೇರಿಕೊಂಡಿದ್ದಾರೆ.

ಎಎಪಿ ಕಚೇರಿಯು ಬೆಳಿಗ್ಗೆಯಿಂದಲೇ ಬಲೂನ್‌ಗಳು ಮತ್ತು ಸಂಭ್ರಮಾಚರಣೆಯ ಪೋಸ್ಟರ್‌ಗಳಿಂದ ಕಂಗೊಳಿಸುತ್ತಿದೆ. ಒಟ್ಟು ನಾಲ್ಕು ಎಕ್ಸಿಟ್ ಪೋಲ್‌ಗಳು 155 ವಾರ್ಡ್‌ಗಳಲ್ಲಿ ಎಎಪಿ ಗೆಲುವು ಸಾಧಿಸುತ್ತದೆ ಎಂದಿವೆ. ಬಿಜೆಪಿಗೆ 84 ಸ್ಥಾನಗಳು, ಕಾಂಗ್ರೆಸ್‌ಗೆ 7 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿವೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದ್ದವು.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...