Homeಕರ್ನಾಟಕದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

ದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

- Advertisement -
- Advertisement -

ದೆಹಲಿಯಲ್ಲಿ ಕರ್ನಾಟಕದ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ ಮೂಡಿದ್ದು, ಕಾಂಗ್ರೆಸ್‌ ಮುಖಂಡರಾದ ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದವಾಗಿದೆ ಎಂದು ಮೀಸಲಾತಿ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ಶಿಫಾರಸ್ಸಿನಂತೆ ಅಲೆಮಾರಿಗಳು ಶೇ. 1 ಪ್ರತ್ಯೇಕ ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

“ಪ್ರಕ್ರಿಯೆಯ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ದೀಪಾವಳಿ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಮಯ್ಯ, ರಣ್‌ದೀಪ್‌ ಸುರ್ಜೇವಾಲ, ಬಿ.ಕೆ. ಹರಿಪ್ರಸಾದ್‌ ಮತ್ತು ಹೆಚ್.‌ ಸಿ ಮಹದೇವಪ್ಪನವರ ಸಮ್ಮುಖದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂಬ ಭರವಸೆ ಸಿಕ್ಕಿದೆ” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 14 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಅಲೆಮಾರಿ ಸಮುದಾಯದ ಹೋರಾಟ ಇಂದು ಪರಿಹಾರದ ಕಡೆ ಮುಖಮಾಡುವ ಹಂತಕ್ಕೆ ಬಂದು ತಲುಪಿದೆ. ಅಕ್ಟೋಬರ್‌ 2ಕ್ಕೆ ದೆಹಲಿ ತಲುಪಿದ ಅಲೆಮಾರಿ ಸಮುದಾಯದ ಸುಮಾರು 600 ಜನ ಪ್ರತಿನಿಧಿಗಳು ಹಾಗೂ ಕಲಾವಿದರು ದೆಹಲಿಯ ಜಂತರ್‌ ಮಂತರಿನಲ್ಲಿ ಪ್ರತಿಭಟಿಸಿದ್ದಲ್ಲದೆ, ತಮ್ಮ ಪಾರಂಪರಿಕ ವೇಷಭೂಷಣಗಳಿಂದ ಗಮನ ಸೆಳೆದರು. ಕಾಂಗ್ರೆಸ್‌ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಎಐಸಿಸಿ ಪರವಾಗಿ ಅಲೆಮಾರಿ ನಿಯೋಗವನ್ನು ಭೇಟಿ ಮಾಡಿದ್ದ ಅಭಿಷೇಕ್‌ ದತ್ತ ಅವರು ರಾಹುಲ್‌ ಗಾಂಧಿ ಅವರು ದೇಶದಲ್ಲಿಲ್ಲ, ರಾಷ್ಟ್ರಾಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿದ್ದಾರೆ. ಕರ್ನಾಟಕದ ಅಲೆಮಾರಿಗಳ ಈ ಸಮಸ್ಯೆಯನ್ನು ನಾವು ಅವರ ಗಮನಕ್ಕೆ ತರುತ್ತೇವೆ. ನೀವು ಕರ್ನಾಟಕಕ್ಕೆ ವಾಪಸ್‌ ಹೊರಡಿ ಎಂದು ಕೇಳಿಕೊಂಡಿದ್ದರು. ಆದರೆ, ಅಂದು ಸಂಜೆ ಅಂಬೇಡ್ಕರ್‌ ಭವನದಲ್ಲಿ ನಡೆದ ಅಲೆಮಾರಿ ಸಮುದಾಯದ 59 ಜನಜಾತಿಗಳ ಸಭೆ ಈ ಕುರಿತು ʼಸರ್ಕಾರದ ಕಡೆಯಿಂದ ಸ್ಪಷ್ಟ ತೀರ್ಮಾನ ಹೊರಬರುವ ತನಕ ದೆಹಲಿ ಬಿಡುವ ಮಾತೇ ಇಲ್ಲʼ ಎಂದು ತೀರ್ಮಾನ ತೆಗೆದುಕೊಂಡಿತ್ತು. ಅಂದಿನಿಂದ ದಿ: 15.10.2025 ರವರೆಗೆ ಅಲೆಮಾರಿ ಪ್ರತಿನಿಧಿಗಳ ತಂಡವು ಎಐಸಿಸಿ ಕಚೇರಿಯ ಆವರಣದಲ್ಲಿ ನಿರಂತರ ಧರಣಿ ಸತ್ಯಾಗ್ರವನನ್ನು ಮುಂದುವರೆಸಿತ್ತು. ಕಾಂಗ್ರೆಸ್ ಹೈಕಮಾಂಡ್‌ನ ಅನೇಕ ಮುಖಂಡರುಗಳನ್ನು ಕಂಡು ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಮನವರಿಕೆ ಮಾಡಿಸುವ ಪ್ರಯತ್ನ ನಡೆಸಿತ್ತು.

ಎಐಸಿಸಿ ಕಡೆಯಿಂದ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ರಾಷ್ಟ್ರೀಯ ಘಟಕಗಳಿಗೆ ಮೇಲುಸ್ತುವಾರಿಗಳಾಗಿರುವ ಕೆ. ರಾಜು ಅವರು ಈ ಮಧ್ಯೆ ಕರ್ನಾಟಕದ ಅನೇಕ ಸಚಿವರುಗಳ ಜೊತೆ ಮಾತುಕತೆ ನಡೆಸಿದರು. ಬಿ.ಕೆ. ಹರಿಪ್ರಸಾದ್‌ ಅವರನ್ನು ಮಧ್ಯಸ್ತಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರ ಹುಡುಕಬೇಕೆಂದು ಕೋರಿದ್ದರು. ನಿನ್ನೆ ಚಂಡೀಘಡದಲ್ಲಿ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿದ್ದ ಬಿ.ಕೆ. ಹರಿಪ್ರಸಾದ ಅವರು ಸಮಸ್ಯೆಯನ್ನು ಬಗೆಹರಿಸಲು ದೆಹಲಿಯ ಎಐಸಿಸಿ ಕಚೇರಿಗೆ ವಾಪಸ್‌ ಬಂದಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಅಲೆಮಾರಿ ಪ್ರತಿನಿಧಿ ತಂಡವನ್ನು ಮಾತುಕತೆಗೆ ಕರೆದಿದ್ದರು. ಅವರೊಡನೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಕರ್ನಾಟಕದ ಎಂಎಲ್‌ಸಿ ಆರತಿ ಕೃಷ್ಣ ಅವರು ಸಹ ಇದ್ದರು.

“ದೆಹಲಿಗೆ ಇಂದು ಬರಬೇಕಿದ್ದ ರಾಹುಲ್‌ ಗಾಂಧಿ ಅವರು ಅವರ ತಾಯಿಯವರ ಆರೋಗ್ಯ ಏರುಪೇರಾದ್ದರಿಂದ ಅವರು ಶಿಮ್ಲಾಗೆ ಹೋಗಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಂತೆ ನಮಗೆ ಸೂಚಿಸಿದ್ದಾರೆ. ತಡಮಾಡದೆ ಪರಿಹಾರದ ಕುರಿತು ಚರ್ಚಿಸೋಣ. ಸಮಸ್ಯೆ ಬಗೆಹರಿಯದಿದ್ದರೆ ರಾಹುಲ್‌ ಗಾಂಧಿ ಅವರ ಜೊತೆ ಸಭೆ ನಿಗದಿ ಮಾಡೋಣ” ಬಿಕೆ ಹರಿಪ್ರಸಾದ್ ತಿಳಿಸಿದ್ದಾರೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಅಲೆಮಾರಿ ಸಮುದಾಯದ ನಿಯೋಗವು ತನ್ನ ಹಕ್ಕೊತ್ತಾಯಗಳಾದ ‘ಎ’ ಗುಂಪಿನಲ್ಲಿ ಶೇ. 1 ಪ್ರತ್ಯೇಕ ಮೀಸಲಾತಿ, 49 ಅಲೆಮಾರಿ ಸಮುದಾಯಗಗಳಿಗೆ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿ ಪ್ಯಾಕೇಜ್‌ ಬೇಕು ಎಂಬ ಹಕ್ಕೊತ್ತಾಯಗಳ ಕುರಿತು ಪ್ರಸ್ತಾಪವನ್ನು ಮುಂದಿಟ್ಟರು.

ಬಿ.ಕೆ. ಹರಿಪ್ರಸಾದ್‌ ಅವರು ಅಲ್ಲಿಂದಲೇ ಕೆ. ರಾಜು, ಗುರುದೀಪ್‌ ಸಪ್ಪಾಲ್‌, ವೇಣುಗೋಪಾಲ್‌, ಸುರ್ಜೆವಾಲ್‌ ಜಿ ಹಾಗೂ ಹೆಚ್.‌ ಸಿ. ಮಹದೇವಪ್ಪ ಅವರೊಡನೆ ದೂರವಾಣಿ ಮೂಲಕ ಕೂಲಂಕುಷವಾಗಿ ಚರ್ಚಿಸಿದರು. ಚರ್ಚೆಯ ಅಂತಿಮ ಫಲಿತಾಂಶವಾಗಿ, ಅಲೆಮಾರಿ ಸಮುದಾಯಕ್ಕೆ ಶೇ. 1 ಪ್ರತ್ಯೇಕ ಮೀಸಲಾತಿ ನೀಡಲು ಕರ್ನಾಟಕ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ. ಇದರ ಪ್ರಕ್ರಿಯೆ ಹೇಗೆ ಎಂಬ ಕುರಿತು ಮಾತ್ರ ಸಭೆಯಲ್ಲಿ ಚರ್ಚಿಸಿಕೊಳ್ಳಬೇಕಿದೆ. ವಿಶೇಷ ಪ್ಯಾಕೇಜ್‌ ಮತ್ತು 49 ಅಲೆಮಾರಿ ಸಮುದಾಯಗಗಳಿಗೆ ಮಾತ್ರ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನೂ ಮಾಡಲು ಸರ್ಕಾರ ಬದ್ಧವಿದೆ ಎಂದು ತಿಳಿದುಬಂದಿದೆ.’

ಇವೆಲ್ಲವುಗಳ ಕುರಿತು ಕುಲಂಕುಷವಾಗಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಎಐಸಿಸಿ ಕಡೆಯಿಂದ ಬಿ.ಕೆ. ಹರಿಪ್ರಸಾದ್‌, ಕೆ. ರಾಜು ಹಾಗೂ ಸುರ್ಜೆವಾಲರು ಸಹ ಇರುವಂತೆ ಕರ್ನಾಟಕ ಸರ್ಕಾರದ ಜೊತೆ ದೀಪಾವಳಿ ನಂತರದ ಮೊದಲ ವಾರದಲ್ಲೇ ಸಭೆ ನಿಗದಿ ಮಾಡಲಾಗುತ್ತದೆ. ಸಭೆ ವ್ಯವಸ್ಥೆ ಮಾಡುವ ಹೊಣೆಗಾರಿಕೆ ಬಿ.ಕೆ. ಹರಿಪ್ರಸಾದ್‌ ಅವರದಾಗಿರುತ್ತದೆ. ನಿಯೋಗದ ಜೊತೆ ದೂರವಾಣಿ ಮೂಲಕ ಮಾತನಾಡಿದ ಎಚ್.‌ಸಿ. ಮಹದೇವಪ್ಪನವರು ದಯವಿಟ್ಟು ವಾಪಾಸ್‌ ಬನ್ನಿ, ಖಂಡಿತ ಅಲೆಮಾರಿ ಸಮುದಾಯಗಳ ಸಮಸ್ಯೆ ಬಗೆಹರಿಸಿಕೊಡುತ್ತೇವೆ ಎಂದು ಕೇಳಿಕೊಂಡರು ಎಂದು ಅಲೆಮಾರಿ ಹೋರಾಟಗಾರರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಧರಣಿಯನ್ನು ಅಂತ್ಯಗೊಳಿಸಿ ಕರ್ನಾಟಕಕ್ಕೆ ವಾಪಾಸ್‌ ಆಗಲು ಕರ್ನಾಟಕ ಅಸ್ಪ್ರಷ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ತೀರ್ಮಾನಿಸಿದೆ. ಕೊಟ್ಟ ಮಾತಿನಂತೆ ಕರ್ನಾಟಕ ಸರ್ಕಾರ ಹಾಗೂ ಎಐಸಿಸಿ ಮುಖಂಡರು ನಡೆದುಕೊಳ್ಳುತ್ತಾರೆ ಎಂದು ವಿಶ್ವಾಸಿಸುತ್ತೇವೆ. ಒಂದು ವೇಳೆ ನಮ್ಮ ನಿರೀಕ್ಷೆ ಮತ್ತೆ ಹುಸಿಯಾದರೆ ಮತ್ತೆ ದೆಹಲಿಗೆ ಬರುವುದು ಖಚಿತ ಎಂದು ಸ್ಪಷ್ಟಪಡಿಸಲು ಬಯಸುತ್ತಿದ್ದೇವೆ. ಸಮುದಾಯದ ನೋವನ್ನು ಕೇಳಿಸಿಕೊಳ್ಳಲು ರಾಹುಲ್‌ ಗಾಂಧಿ ಅವರು ಭೇಟಿಗೆ ಸಮಯ ನೀಡಲೇಬೇಕು ಎಂದು ಸಹ ಮತ್ತೊಮ್ಮೆ ಒತ್ತಾಯಿಸಲು ಬಯಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ನಡೆದ ಮಾತುಕತೆಯಲ್ಲಿ ಅಲೆಮಾರಿ ಸಮುದಾಯ ಪರವಾಗಿ ಅದರ ಮುಖಂಡರುಗಳಾದ ಎ.ಎಸ್.‌ ಪ್ರಭಾಕರ್‌, ಮಂಜುನಾಥ್‌ ದಾಯತ್ಕರ್, ಬಸವರಾಜ್‌ ನಾರಾಯಣಕರ್, ಚಾವಡಿ ಲೋಕೇಶ್‌, ಮಂಡ್ಯ ರಾಜಣ್ಣ, ಸಂದೀಪ್‌ ಕುಮಾರ್‌ ದಾಸರ್‌, ಶರಣಪ್ಪ ಚನ್ನದಾಸರ್‌, ಸಿಂದೋಳು ಸಮುದಾಯದ ಹನುಮಂತು ಮುಂತಾದವರು ಭಾಗವಹಿಸಿದ್ದರು. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕರಾದ ಕರಿಯಪ್ಪ ಗುಡಿಮನಿ, ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್‌ ಶ್ರೀಧರ್‌ ಹಾಗೂ ಎದ್ದೇಳು ಕರ್ನಾಟಕದ ತಾರಾ ರಾವ್‌ ಅವರು ಸಹ ಈ ಚರ್ಚೆಗಳಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿದರು.

ಆರ್‌ಎಸ್‌ಎಸ್‌ ಹಿಂದುತ್ವದ ಪರಿಧಿಯಲ್ಲಿ ಪರಿಶಿಷ್ಟರಿಗೆ ಸ್ಥಾನವಿಲ್ಲ: ಸಚಿವ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...