Homeಕರ್ನಾಟಕದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

ದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

- Advertisement -
- Advertisement -

ದೆಹಲಿಯಲ್ಲಿ ಕರ್ನಾಟಕದ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ ಮೂಡಿದ್ದು, ಕಾಂಗ್ರೆಸ್‌ ಮುಖಂಡರಾದ ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದವಾಗಿದೆ ಎಂದು ಮೀಸಲಾತಿ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ಶಿಫಾರಸ್ಸಿನಂತೆ ಅಲೆಮಾರಿಗಳು ಶೇ. 1 ಪ್ರತ್ಯೇಕ ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

“ಪ್ರಕ್ರಿಯೆಯ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ದೀಪಾವಳಿ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಮಯ್ಯ, ರಣ್‌ದೀಪ್‌ ಸುರ್ಜೇವಾಲ, ಬಿ.ಕೆ. ಹರಿಪ್ರಸಾದ್‌ ಮತ್ತು ಹೆಚ್.‌ ಸಿ ಮಹದೇವಪ್ಪನವರ ಸಮ್ಮುಖದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂಬ ಭರವಸೆ ಸಿಕ್ಕಿದೆ” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 14 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಅಲೆಮಾರಿ ಸಮುದಾಯದ ಹೋರಾಟ ಇಂದು ಪರಿಹಾರದ ಕಡೆ ಮುಖಮಾಡುವ ಹಂತಕ್ಕೆ ಬಂದು ತಲುಪಿದೆ. ಅಕ್ಟೋಬರ್‌ 2ಕ್ಕೆ ದೆಹಲಿ ತಲುಪಿದ ಅಲೆಮಾರಿ ಸಮುದಾಯದ ಸುಮಾರು 600 ಜನ ಪ್ರತಿನಿಧಿಗಳು ಹಾಗೂ ಕಲಾವಿದರು ದೆಹಲಿಯ ಜಂತರ್‌ ಮಂತರಿನಲ್ಲಿ ಪ್ರತಿಭಟಿಸಿದ್ದಲ್ಲದೆ, ತಮ್ಮ ಪಾರಂಪರಿಕ ವೇಷಭೂಷಣಗಳಿಂದ ಗಮನ ಸೆಳೆದರು. ಕಾಂಗ್ರೆಸ್‌ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಎಐಸಿಸಿ ಪರವಾಗಿ ಅಲೆಮಾರಿ ನಿಯೋಗವನ್ನು ಭೇಟಿ ಮಾಡಿದ್ದ ಅಭಿಷೇಕ್‌ ದತ್ತ ಅವರು ರಾಹುಲ್‌ ಗಾಂಧಿ ಅವರು ದೇಶದಲ್ಲಿಲ್ಲ, ರಾಷ್ಟ್ರಾಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿದ್ದಾರೆ. ಕರ್ನಾಟಕದ ಅಲೆಮಾರಿಗಳ ಈ ಸಮಸ್ಯೆಯನ್ನು ನಾವು ಅವರ ಗಮನಕ್ಕೆ ತರುತ್ತೇವೆ. ನೀವು ಕರ್ನಾಟಕಕ್ಕೆ ವಾಪಸ್‌ ಹೊರಡಿ ಎಂದು ಕೇಳಿಕೊಂಡಿದ್ದರು. ಆದರೆ, ಅಂದು ಸಂಜೆ ಅಂಬೇಡ್ಕರ್‌ ಭವನದಲ್ಲಿ ನಡೆದ ಅಲೆಮಾರಿ ಸಮುದಾಯದ 59 ಜನಜಾತಿಗಳ ಸಭೆ ಈ ಕುರಿತು ʼಸರ್ಕಾರದ ಕಡೆಯಿಂದ ಸ್ಪಷ್ಟ ತೀರ್ಮಾನ ಹೊರಬರುವ ತನಕ ದೆಹಲಿ ಬಿಡುವ ಮಾತೇ ಇಲ್ಲʼ ಎಂದು ತೀರ್ಮಾನ ತೆಗೆದುಕೊಂಡಿತ್ತು. ಅಂದಿನಿಂದ ದಿ: 15.10.2025 ರವರೆಗೆ ಅಲೆಮಾರಿ ಪ್ರತಿನಿಧಿಗಳ ತಂಡವು ಎಐಸಿಸಿ ಕಚೇರಿಯ ಆವರಣದಲ್ಲಿ ನಿರಂತರ ಧರಣಿ ಸತ್ಯಾಗ್ರವನನ್ನು ಮುಂದುವರೆಸಿತ್ತು. ಕಾಂಗ್ರೆಸ್ ಹೈಕಮಾಂಡ್‌ನ ಅನೇಕ ಮುಖಂಡರುಗಳನ್ನು ಕಂಡು ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಮನವರಿಕೆ ಮಾಡಿಸುವ ಪ್ರಯತ್ನ ನಡೆಸಿತ್ತು.

ಎಐಸಿಸಿ ಕಡೆಯಿಂದ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ರಾಷ್ಟ್ರೀಯ ಘಟಕಗಳಿಗೆ ಮೇಲುಸ್ತುವಾರಿಗಳಾಗಿರುವ ಕೆ. ರಾಜು ಅವರು ಈ ಮಧ್ಯೆ ಕರ್ನಾಟಕದ ಅನೇಕ ಸಚಿವರುಗಳ ಜೊತೆ ಮಾತುಕತೆ ನಡೆಸಿದರು. ಬಿ.ಕೆ. ಹರಿಪ್ರಸಾದ್‌ ಅವರನ್ನು ಮಧ್ಯಸ್ತಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರ ಹುಡುಕಬೇಕೆಂದು ಕೋರಿದ್ದರು. ನಿನ್ನೆ ಚಂಡೀಘಡದಲ್ಲಿ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿದ್ದ ಬಿ.ಕೆ. ಹರಿಪ್ರಸಾದ ಅವರು ಸಮಸ್ಯೆಯನ್ನು ಬಗೆಹರಿಸಲು ದೆಹಲಿಯ ಎಐಸಿಸಿ ಕಚೇರಿಗೆ ವಾಪಸ್‌ ಬಂದಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಅಲೆಮಾರಿ ಪ್ರತಿನಿಧಿ ತಂಡವನ್ನು ಮಾತುಕತೆಗೆ ಕರೆದಿದ್ದರು. ಅವರೊಡನೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಕರ್ನಾಟಕದ ಎಂಎಲ್‌ಸಿ ಆರತಿ ಕೃಷ್ಣ ಅವರು ಸಹ ಇದ್ದರು.

“ದೆಹಲಿಗೆ ಇಂದು ಬರಬೇಕಿದ್ದ ರಾಹುಲ್‌ ಗಾಂಧಿ ಅವರು ಅವರ ತಾಯಿಯವರ ಆರೋಗ್ಯ ಏರುಪೇರಾದ್ದರಿಂದ ಅವರು ಶಿಮ್ಲಾಗೆ ಹೋಗಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಂತೆ ನಮಗೆ ಸೂಚಿಸಿದ್ದಾರೆ. ತಡಮಾಡದೆ ಪರಿಹಾರದ ಕುರಿತು ಚರ್ಚಿಸೋಣ. ಸಮಸ್ಯೆ ಬಗೆಹರಿಯದಿದ್ದರೆ ರಾಹುಲ್‌ ಗಾಂಧಿ ಅವರ ಜೊತೆ ಸಭೆ ನಿಗದಿ ಮಾಡೋಣ” ಬಿಕೆ ಹರಿಪ್ರಸಾದ್ ತಿಳಿಸಿದ್ದಾರೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಅಲೆಮಾರಿ ಸಮುದಾಯದ ನಿಯೋಗವು ತನ್ನ ಹಕ್ಕೊತ್ತಾಯಗಳಾದ ‘ಎ’ ಗುಂಪಿನಲ್ಲಿ ಶೇ. 1 ಪ್ರತ್ಯೇಕ ಮೀಸಲಾತಿ, 49 ಅಲೆಮಾರಿ ಸಮುದಾಯಗಗಳಿಗೆ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿ ಪ್ಯಾಕೇಜ್‌ ಬೇಕು ಎಂಬ ಹಕ್ಕೊತ್ತಾಯಗಳ ಕುರಿತು ಪ್ರಸ್ತಾಪವನ್ನು ಮುಂದಿಟ್ಟರು.

ಬಿ.ಕೆ. ಹರಿಪ್ರಸಾದ್‌ ಅವರು ಅಲ್ಲಿಂದಲೇ ಕೆ. ರಾಜು, ಗುರುದೀಪ್‌ ಸಪ್ಪಾಲ್‌, ವೇಣುಗೋಪಾಲ್‌, ಸುರ್ಜೆವಾಲ್‌ ಜಿ ಹಾಗೂ ಹೆಚ್.‌ ಸಿ. ಮಹದೇವಪ್ಪ ಅವರೊಡನೆ ದೂರವಾಣಿ ಮೂಲಕ ಕೂಲಂಕುಷವಾಗಿ ಚರ್ಚಿಸಿದರು. ಚರ್ಚೆಯ ಅಂತಿಮ ಫಲಿತಾಂಶವಾಗಿ, ಅಲೆಮಾರಿ ಸಮುದಾಯಕ್ಕೆ ಶೇ. 1 ಪ್ರತ್ಯೇಕ ಮೀಸಲಾತಿ ನೀಡಲು ಕರ್ನಾಟಕ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ. ಇದರ ಪ್ರಕ್ರಿಯೆ ಹೇಗೆ ಎಂಬ ಕುರಿತು ಮಾತ್ರ ಸಭೆಯಲ್ಲಿ ಚರ್ಚಿಸಿಕೊಳ್ಳಬೇಕಿದೆ. ವಿಶೇಷ ಪ್ಯಾಕೇಜ್‌ ಮತ್ತು 49 ಅಲೆಮಾರಿ ಸಮುದಾಯಗಗಳಿಗೆ ಮಾತ್ರ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನೂ ಮಾಡಲು ಸರ್ಕಾರ ಬದ್ಧವಿದೆ ಎಂದು ತಿಳಿದುಬಂದಿದೆ.’

ಇವೆಲ್ಲವುಗಳ ಕುರಿತು ಕುಲಂಕುಷವಾಗಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಎಐಸಿಸಿ ಕಡೆಯಿಂದ ಬಿ.ಕೆ. ಹರಿಪ್ರಸಾದ್‌, ಕೆ. ರಾಜು ಹಾಗೂ ಸುರ್ಜೆವಾಲರು ಸಹ ಇರುವಂತೆ ಕರ್ನಾಟಕ ಸರ್ಕಾರದ ಜೊತೆ ದೀಪಾವಳಿ ನಂತರದ ಮೊದಲ ವಾರದಲ್ಲೇ ಸಭೆ ನಿಗದಿ ಮಾಡಲಾಗುತ್ತದೆ. ಸಭೆ ವ್ಯವಸ್ಥೆ ಮಾಡುವ ಹೊಣೆಗಾರಿಕೆ ಬಿ.ಕೆ. ಹರಿಪ್ರಸಾದ್‌ ಅವರದಾಗಿರುತ್ತದೆ. ನಿಯೋಗದ ಜೊತೆ ದೂರವಾಣಿ ಮೂಲಕ ಮಾತನಾಡಿದ ಎಚ್.‌ಸಿ. ಮಹದೇವಪ್ಪನವರು ದಯವಿಟ್ಟು ವಾಪಾಸ್‌ ಬನ್ನಿ, ಖಂಡಿತ ಅಲೆಮಾರಿ ಸಮುದಾಯಗಳ ಸಮಸ್ಯೆ ಬಗೆಹರಿಸಿಕೊಡುತ್ತೇವೆ ಎಂದು ಕೇಳಿಕೊಂಡರು ಎಂದು ಅಲೆಮಾರಿ ಹೋರಾಟಗಾರರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಧರಣಿಯನ್ನು ಅಂತ್ಯಗೊಳಿಸಿ ಕರ್ನಾಟಕಕ್ಕೆ ವಾಪಾಸ್‌ ಆಗಲು ಕರ್ನಾಟಕ ಅಸ್ಪ್ರಷ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ತೀರ್ಮಾನಿಸಿದೆ. ಕೊಟ್ಟ ಮಾತಿನಂತೆ ಕರ್ನಾಟಕ ಸರ್ಕಾರ ಹಾಗೂ ಎಐಸಿಸಿ ಮುಖಂಡರು ನಡೆದುಕೊಳ್ಳುತ್ತಾರೆ ಎಂದು ವಿಶ್ವಾಸಿಸುತ್ತೇವೆ. ಒಂದು ವೇಳೆ ನಮ್ಮ ನಿರೀಕ್ಷೆ ಮತ್ತೆ ಹುಸಿಯಾದರೆ ಮತ್ತೆ ದೆಹಲಿಗೆ ಬರುವುದು ಖಚಿತ ಎಂದು ಸ್ಪಷ್ಟಪಡಿಸಲು ಬಯಸುತ್ತಿದ್ದೇವೆ. ಸಮುದಾಯದ ನೋವನ್ನು ಕೇಳಿಸಿಕೊಳ್ಳಲು ರಾಹುಲ್‌ ಗಾಂಧಿ ಅವರು ಭೇಟಿಗೆ ಸಮಯ ನೀಡಲೇಬೇಕು ಎಂದು ಸಹ ಮತ್ತೊಮ್ಮೆ ಒತ್ತಾಯಿಸಲು ಬಯಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ನಡೆದ ಮಾತುಕತೆಯಲ್ಲಿ ಅಲೆಮಾರಿ ಸಮುದಾಯ ಪರವಾಗಿ ಅದರ ಮುಖಂಡರುಗಳಾದ ಎ.ಎಸ್.‌ ಪ್ರಭಾಕರ್‌, ಮಂಜುನಾಥ್‌ ದಾಯತ್ಕರ್, ಬಸವರಾಜ್‌ ನಾರಾಯಣಕರ್, ಚಾವಡಿ ಲೋಕೇಶ್‌, ಮಂಡ್ಯ ರಾಜಣ್ಣ, ಸಂದೀಪ್‌ ಕುಮಾರ್‌ ದಾಸರ್‌, ಶರಣಪ್ಪ ಚನ್ನದಾಸರ್‌, ಸಿಂದೋಳು ಸಮುದಾಯದ ಹನುಮಂತು ಮುಂತಾದವರು ಭಾಗವಹಿಸಿದ್ದರು. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕರಾದ ಕರಿಯಪ್ಪ ಗುಡಿಮನಿ, ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್‌ ಶ್ರೀಧರ್‌ ಹಾಗೂ ಎದ್ದೇಳು ಕರ್ನಾಟಕದ ತಾರಾ ರಾವ್‌ ಅವರು ಸಹ ಈ ಚರ್ಚೆಗಳಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿದರು.

ಆರ್‌ಎಸ್‌ಎಸ್‌ ಹಿಂದುತ್ವದ ಪರಿಧಿಯಲ್ಲಿ ಪರಿಶಿಷ್ಟರಿಗೆ ಸ್ಥಾನವಿಲ್ಲ: ಸಚಿವ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...