Homeಕರ್ನಾಟಕದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

ದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

- Advertisement -
- Advertisement -

ದೆಹಲಿಯಲ್ಲಿ ಕರ್ನಾಟಕದ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ ಮೂಡಿದ್ದು, ಕಾಂಗ್ರೆಸ್‌ ಮುಖಂಡರಾದ ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದವಾಗಿದೆ ಎಂದು ಮೀಸಲಾತಿ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ಶಿಫಾರಸ್ಸಿನಂತೆ ಅಲೆಮಾರಿಗಳು ಶೇ. 1 ಪ್ರತ್ಯೇಕ ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

“ಪ್ರಕ್ರಿಯೆಯ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ದೀಪಾವಳಿ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಮಯ್ಯ, ರಣ್‌ದೀಪ್‌ ಸುರ್ಜೇವಾಲ, ಬಿ.ಕೆ. ಹರಿಪ್ರಸಾದ್‌ ಮತ್ತು ಹೆಚ್.‌ ಸಿ ಮಹದೇವಪ್ಪನವರ ಸಮ್ಮುಖದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂಬ ಭರವಸೆ ಸಿಕ್ಕಿದೆ” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 14 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಅಲೆಮಾರಿ ಸಮುದಾಯದ ಹೋರಾಟ ಇಂದು ಪರಿಹಾರದ ಕಡೆ ಮುಖಮಾಡುವ ಹಂತಕ್ಕೆ ಬಂದು ತಲುಪಿದೆ. ಅಕ್ಟೋಬರ್‌ 2ಕ್ಕೆ ದೆಹಲಿ ತಲುಪಿದ ಅಲೆಮಾರಿ ಸಮುದಾಯದ ಸುಮಾರು 600 ಜನ ಪ್ರತಿನಿಧಿಗಳು ಹಾಗೂ ಕಲಾವಿದರು ದೆಹಲಿಯ ಜಂತರ್‌ ಮಂತರಿನಲ್ಲಿ ಪ್ರತಿಭಟಿಸಿದ್ದಲ್ಲದೆ, ತಮ್ಮ ಪಾರಂಪರಿಕ ವೇಷಭೂಷಣಗಳಿಂದ ಗಮನ ಸೆಳೆದರು. ಕಾಂಗ್ರೆಸ್‌ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಎಐಸಿಸಿ ಪರವಾಗಿ ಅಲೆಮಾರಿ ನಿಯೋಗವನ್ನು ಭೇಟಿ ಮಾಡಿದ್ದ ಅಭಿಷೇಕ್‌ ದತ್ತ ಅವರು ರಾಹುಲ್‌ ಗಾಂಧಿ ಅವರು ದೇಶದಲ್ಲಿಲ್ಲ, ರಾಷ್ಟ್ರಾಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿದ್ದಾರೆ. ಕರ್ನಾಟಕದ ಅಲೆಮಾರಿಗಳ ಈ ಸಮಸ್ಯೆಯನ್ನು ನಾವು ಅವರ ಗಮನಕ್ಕೆ ತರುತ್ತೇವೆ. ನೀವು ಕರ್ನಾಟಕಕ್ಕೆ ವಾಪಸ್‌ ಹೊರಡಿ ಎಂದು ಕೇಳಿಕೊಂಡಿದ್ದರು. ಆದರೆ, ಅಂದು ಸಂಜೆ ಅಂಬೇಡ್ಕರ್‌ ಭವನದಲ್ಲಿ ನಡೆದ ಅಲೆಮಾರಿ ಸಮುದಾಯದ 59 ಜನಜಾತಿಗಳ ಸಭೆ ಈ ಕುರಿತು ʼಸರ್ಕಾರದ ಕಡೆಯಿಂದ ಸ್ಪಷ್ಟ ತೀರ್ಮಾನ ಹೊರಬರುವ ತನಕ ದೆಹಲಿ ಬಿಡುವ ಮಾತೇ ಇಲ್ಲʼ ಎಂದು ತೀರ್ಮಾನ ತೆಗೆದುಕೊಂಡಿತ್ತು. ಅಂದಿನಿಂದ ದಿ: 15.10.2025 ರವರೆಗೆ ಅಲೆಮಾರಿ ಪ್ರತಿನಿಧಿಗಳ ತಂಡವು ಎಐಸಿಸಿ ಕಚೇರಿಯ ಆವರಣದಲ್ಲಿ ನಿರಂತರ ಧರಣಿ ಸತ್ಯಾಗ್ರವನನ್ನು ಮುಂದುವರೆಸಿತ್ತು. ಕಾಂಗ್ರೆಸ್ ಹೈಕಮಾಂಡ್‌ನ ಅನೇಕ ಮುಖಂಡರುಗಳನ್ನು ಕಂಡು ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಮನವರಿಕೆ ಮಾಡಿಸುವ ಪ್ರಯತ್ನ ನಡೆಸಿತ್ತು.

ಎಐಸಿಸಿ ಕಡೆಯಿಂದ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ರಾಷ್ಟ್ರೀಯ ಘಟಕಗಳಿಗೆ ಮೇಲುಸ್ತುವಾರಿಗಳಾಗಿರುವ ಕೆ. ರಾಜು ಅವರು ಈ ಮಧ್ಯೆ ಕರ್ನಾಟಕದ ಅನೇಕ ಸಚಿವರುಗಳ ಜೊತೆ ಮಾತುಕತೆ ನಡೆಸಿದರು. ಬಿ.ಕೆ. ಹರಿಪ್ರಸಾದ್‌ ಅವರನ್ನು ಮಧ್ಯಸ್ತಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರ ಹುಡುಕಬೇಕೆಂದು ಕೋರಿದ್ದರು. ನಿನ್ನೆ ಚಂಡೀಘಡದಲ್ಲಿ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿದ್ದ ಬಿ.ಕೆ. ಹರಿಪ್ರಸಾದ ಅವರು ಸಮಸ್ಯೆಯನ್ನು ಬಗೆಹರಿಸಲು ದೆಹಲಿಯ ಎಐಸಿಸಿ ಕಚೇರಿಗೆ ವಾಪಸ್‌ ಬಂದಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಅಲೆಮಾರಿ ಪ್ರತಿನಿಧಿ ತಂಡವನ್ನು ಮಾತುಕತೆಗೆ ಕರೆದಿದ್ದರು. ಅವರೊಡನೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಕರ್ನಾಟಕದ ಎಂಎಲ್‌ಸಿ ಆರತಿ ಕೃಷ್ಣ ಅವರು ಸಹ ಇದ್ದರು.

“ದೆಹಲಿಗೆ ಇಂದು ಬರಬೇಕಿದ್ದ ರಾಹುಲ್‌ ಗಾಂಧಿ ಅವರು ಅವರ ತಾಯಿಯವರ ಆರೋಗ್ಯ ಏರುಪೇರಾದ್ದರಿಂದ ಅವರು ಶಿಮ್ಲಾಗೆ ಹೋಗಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಂತೆ ನಮಗೆ ಸೂಚಿಸಿದ್ದಾರೆ. ತಡಮಾಡದೆ ಪರಿಹಾರದ ಕುರಿತು ಚರ್ಚಿಸೋಣ. ಸಮಸ್ಯೆ ಬಗೆಹರಿಯದಿದ್ದರೆ ರಾಹುಲ್‌ ಗಾಂಧಿ ಅವರ ಜೊತೆ ಸಭೆ ನಿಗದಿ ಮಾಡೋಣ” ಬಿಕೆ ಹರಿಪ್ರಸಾದ್ ತಿಳಿಸಿದ್ದಾರೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಅಲೆಮಾರಿ ಸಮುದಾಯದ ನಿಯೋಗವು ತನ್ನ ಹಕ್ಕೊತ್ತಾಯಗಳಾದ ‘ಎ’ ಗುಂಪಿನಲ್ಲಿ ಶೇ. 1 ಪ್ರತ್ಯೇಕ ಮೀಸಲಾತಿ, 49 ಅಲೆಮಾರಿ ಸಮುದಾಯಗಗಳಿಗೆ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿ ಪ್ಯಾಕೇಜ್‌ ಬೇಕು ಎಂಬ ಹಕ್ಕೊತ್ತಾಯಗಳ ಕುರಿತು ಪ್ರಸ್ತಾಪವನ್ನು ಮುಂದಿಟ್ಟರು.

ಬಿ.ಕೆ. ಹರಿಪ್ರಸಾದ್‌ ಅವರು ಅಲ್ಲಿಂದಲೇ ಕೆ. ರಾಜು, ಗುರುದೀಪ್‌ ಸಪ್ಪಾಲ್‌, ವೇಣುಗೋಪಾಲ್‌, ಸುರ್ಜೆವಾಲ್‌ ಜಿ ಹಾಗೂ ಹೆಚ್.‌ ಸಿ. ಮಹದೇವಪ್ಪ ಅವರೊಡನೆ ದೂರವಾಣಿ ಮೂಲಕ ಕೂಲಂಕುಷವಾಗಿ ಚರ್ಚಿಸಿದರು. ಚರ್ಚೆಯ ಅಂತಿಮ ಫಲಿತಾಂಶವಾಗಿ, ಅಲೆಮಾರಿ ಸಮುದಾಯಕ್ಕೆ ಶೇ. 1 ಪ್ರತ್ಯೇಕ ಮೀಸಲಾತಿ ನೀಡಲು ಕರ್ನಾಟಕ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ. ಇದರ ಪ್ರಕ್ರಿಯೆ ಹೇಗೆ ಎಂಬ ಕುರಿತು ಮಾತ್ರ ಸಭೆಯಲ್ಲಿ ಚರ್ಚಿಸಿಕೊಳ್ಳಬೇಕಿದೆ. ವಿಶೇಷ ಪ್ಯಾಕೇಜ್‌ ಮತ್ತು 49 ಅಲೆಮಾರಿ ಸಮುದಾಯಗಗಳಿಗೆ ಮಾತ್ರ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನೂ ಮಾಡಲು ಸರ್ಕಾರ ಬದ್ಧವಿದೆ ಎಂದು ತಿಳಿದುಬಂದಿದೆ.’

ಇವೆಲ್ಲವುಗಳ ಕುರಿತು ಕುಲಂಕುಷವಾಗಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಎಐಸಿಸಿ ಕಡೆಯಿಂದ ಬಿ.ಕೆ. ಹರಿಪ್ರಸಾದ್‌, ಕೆ. ರಾಜು ಹಾಗೂ ಸುರ್ಜೆವಾಲರು ಸಹ ಇರುವಂತೆ ಕರ್ನಾಟಕ ಸರ್ಕಾರದ ಜೊತೆ ದೀಪಾವಳಿ ನಂತರದ ಮೊದಲ ವಾರದಲ್ಲೇ ಸಭೆ ನಿಗದಿ ಮಾಡಲಾಗುತ್ತದೆ. ಸಭೆ ವ್ಯವಸ್ಥೆ ಮಾಡುವ ಹೊಣೆಗಾರಿಕೆ ಬಿ.ಕೆ. ಹರಿಪ್ರಸಾದ್‌ ಅವರದಾಗಿರುತ್ತದೆ. ನಿಯೋಗದ ಜೊತೆ ದೂರವಾಣಿ ಮೂಲಕ ಮಾತನಾಡಿದ ಎಚ್.‌ಸಿ. ಮಹದೇವಪ್ಪನವರು ದಯವಿಟ್ಟು ವಾಪಾಸ್‌ ಬನ್ನಿ, ಖಂಡಿತ ಅಲೆಮಾರಿ ಸಮುದಾಯಗಳ ಸಮಸ್ಯೆ ಬಗೆಹರಿಸಿಕೊಡುತ್ತೇವೆ ಎಂದು ಕೇಳಿಕೊಂಡರು ಎಂದು ಅಲೆಮಾರಿ ಹೋರಾಟಗಾರರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಧರಣಿಯನ್ನು ಅಂತ್ಯಗೊಳಿಸಿ ಕರ್ನಾಟಕಕ್ಕೆ ವಾಪಾಸ್‌ ಆಗಲು ಕರ್ನಾಟಕ ಅಸ್ಪ್ರಷ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ತೀರ್ಮಾನಿಸಿದೆ. ಕೊಟ್ಟ ಮಾತಿನಂತೆ ಕರ್ನಾಟಕ ಸರ್ಕಾರ ಹಾಗೂ ಎಐಸಿಸಿ ಮುಖಂಡರು ನಡೆದುಕೊಳ್ಳುತ್ತಾರೆ ಎಂದು ವಿಶ್ವಾಸಿಸುತ್ತೇವೆ. ಒಂದು ವೇಳೆ ನಮ್ಮ ನಿರೀಕ್ಷೆ ಮತ್ತೆ ಹುಸಿಯಾದರೆ ಮತ್ತೆ ದೆಹಲಿಗೆ ಬರುವುದು ಖಚಿತ ಎಂದು ಸ್ಪಷ್ಟಪಡಿಸಲು ಬಯಸುತ್ತಿದ್ದೇವೆ. ಸಮುದಾಯದ ನೋವನ್ನು ಕೇಳಿಸಿಕೊಳ್ಳಲು ರಾಹುಲ್‌ ಗಾಂಧಿ ಅವರು ಭೇಟಿಗೆ ಸಮಯ ನೀಡಲೇಬೇಕು ಎಂದು ಸಹ ಮತ್ತೊಮ್ಮೆ ಒತ್ತಾಯಿಸಲು ಬಯಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ನಡೆದ ಮಾತುಕತೆಯಲ್ಲಿ ಅಲೆಮಾರಿ ಸಮುದಾಯ ಪರವಾಗಿ ಅದರ ಮುಖಂಡರುಗಳಾದ ಎ.ಎಸ್.‌ ಪ್ರಭಾಕರ್‌, ಮಂಜುನಾಥ್‌ ದಾಯತ್ಕರ್, ಬಸವರಾಜ್‌ ನಾರಾಯಣಕರ್, ಚಾವಡಿ ಲೋಕೇಶ್‌, ಮಂಡ್ಯ ರಾಜಣ್ಣ, ಸಂದೀಪ್‌ ಕುಮಾರ್‌ ದಾಸರ್‌, ಶರಣಪ್ಪ ಚನ್ನದಾಸರ್‌, ಸಿಂದೋಳು ಸಮುದಾಯದ ಹನುಮಂತು ಮುಂತಾದವರು ಭಾಗವಹಿಸಿದ್ದರು. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕರಾದ ಕರಿಯಪ್ಪ ಗುಡಿಮನಿ, ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್‌ ಶ್ರೀಧರ್‌ ಹಾಗೂ ಎದ್ದೇಳು ಕರ್ನಾಟಕದ ತಾರಾ ರಾವ್‌ ಅವರು ಸಹ ಈ ಚರ್ಚೆಗಳಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿದರು.

ಆರ್‌ಎಸ್‌ಎಸ್‌ ಹಿಂದುತ್ವದ ಪರಿಧಿಯಲ್ಲಿ ಪರಿಶಿಷ್ಟರಿಗೆ ಸ್ಥಾನವಿಲ್ಲ: ಸಚಿವ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...