Homeಕರ್ನಾಟಕದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

ದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

- Advertisement -
- Advertisement -

ದೆಹಲಿಯಲ್ಲಿ ಕರ್ನಾಟಕದ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ ಮೂಡಿದ್ದು, ಕಾಂಗ್ರೆಸ್‌ ಮುಖಂಡರಾದ ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದವಾಗಿದೆ ಎಂದು ಮೀಸಲಾತಿ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ಶಿಫಾರಸ್ಸಿನಂತೆ ಅಲೆಮಾರಿಗಳು ಶೇ. 1 ಪ್ರತ್ಯೇಕ ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

“ಪ್ರಕ್ರಿಯೆಯ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ದೀಪಾವಳಿ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಮಯ್ಯ, ರಣ್‌ದೀಪ್‌ ಸುರ್ಜೇವಾಲ, ಬಿ.ಕೆ. ಹರಿಪ್ರಸಾದ್‌ ಮತ್ತು ಹೆಚ್.‌ ಸಿ ಮಹದೇವಪ್ಪನವರ ಸಮ್ಮುಖದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂಬ ಭರವಸೆ ಸಿಕ್ಕಿದೆ” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 14 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಅಲೆಮಾರಿ ಸಮುದಾಯದ ಹೋರಾಟ ಇಂದು ಪರಿಹಾರದ ಕಡೆ ಮುಖಮಾಡುವ ಹಂತಕ್ಕೆ ಬಂದು ತಲುಪಿದೆ. ಅಕ್ಟೋಬರ್‌ 2ಕ್ಕೆ ದೆಹಲಿ ತಲುಪಿದ ಅಲೆಮಾರಿ ಸಮುದಾಯದ ಸುಮಾರು 600 ಜನ ಪ್ರತಿನಿಧಿಗಳು ಹಾಗೂ ಕಲಾವಿದರು ದೆಹಲಿಯ ಜಂತರ್‌ ಮಂತರಿನಲ್ಲಿ ಪ್ರತಿಭಟಿಸಿದ್ದಲ್ಲದೆ, ತಮ್ಮ ಪಾರಂಪರಿಕ ವೇಷಭೂಷಣಗಳಿಂದ ಗಮನ ಸೆಳೆದರು. ಕಾಂಗ್ರೆಸ್‌ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಎಐಸಿಸಿ ಪರವಾಗಿ ಅಲೆಮಾರಿ ನಿಯೋಗವನ್ನು ಭೇಟಿ ಮಾಡಿದ್ದ ಅಭಿಷೇಕ್‌ ದತ್ತ ಅವರು ರಾಹುಲ್‌ ಗಾಂಧಿ ಅವರು ದೇಶದಲ್ಲಿಲ್ಲ, ರಾಷ್ಟ್ರಾಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿದ್ದಾರೆ. ಕರ್ನಾಟಕದ ಅಲೆಮಾರಿಗಳ ಈ ಸಮಸ್ಯೆಯನ್ನು ನಾವು ಅವರ ಗಮನಕ್ಕೆ ತರುತ್ತೇವೆ. ನೀವು ಕರ್ನಾಟಕಕ್ಕೆ ವಾಪಸ್‌ ಹೊರಡಿ ಎಂದು ಕೇಳಿಕೊಂಡಿದ್ದರು. ಆದರೆ, ಅಂದು ಸಂಜೆ ಅಂಬೇಡ್ಕರ್‌ ಭವನದಲ್ಲಿ ನಡೆದ ಅಲೆಮಾರಿ ಸಮುದಾಯದ 59 ಜನಜಾತಿಗಳ ಸಭೆ ಈ ಕುರಿತು ʼಸರ್ಕಾರದ ಕಡೆಯಿಂದ ಸ್ಪಷ್ಟ ತೀರ್ಮಾನ ಹೊರಬರುವ ತನಕ ದೆಹಲಿ ಬಿಡುವ ಮಾತೇ ಇಲ್ಲʼ ಎಂದು ತೀರ್ಮಾನ ತೆಗೆದುಕೊಂಡಿತ್ತು. ಅಂದಿನಿಂದ ದಿ: 15.10.2025 ರವರೆಗೆ ಅಲೆಮಾರಿ ಪ್ರತಿನಿಧಿಗಳ ತಂಡವು ಎಐಸಿಸಿ ಕಚೇರಿಯ ಆವರಣದಲ್ಲಿ ನಿರಂತರ ಧರಣಿ ಸತ್ಯಾಗ್ರವನನ್ನು ಮುಂದುವರೆಸಿತ್ತು. ಕಾಂಗ್ರೆಸ್ ಹೈಕಮಾಂಡ್‌ನ ಅನೇಕ ಮುಖಂಡರುಗಳನ್ನು ಕಂಡು ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಮನವರಿಕೆ ಮಾಡಿಸುವ ಪ್ರಯತ್ನ ನಡೆಸಿತ್ತು.

ಎಐಸಿಸಿ ಕಡೆಯಿಂದ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ರಾಷ್ಟ್ರೀಯ ಘಟಕಗಳಿಗೆ ಮೇಲುಸ್ತುವಾರಿಗಳಾಗಿರುವ ಕೆ. ರಾಜು ಅವರು ಈ ಮಧ್ಯೆ ಕರ್ನಾಟಕದ ಅನೇಕ ಸಚಿವರುಗಳ ಜೊತೆ ಮಾತುಕತೆ ನಡೆಸಿದರು. ಬಿ.ಕೆ. ಹರಿಪ್ರಸಾದ್‌ ಅವರನ್ನು ಮಧ್ಯಸ್ತಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರ ಹುಡುಕಬೇಕೆಂದು ಕೋರಿದ್ದರು. ನಿನ್ನೆ ಚಂಡೀಘಡದಲ್ಲಿ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿದ್ದ ಬಿ.ಕೆ. ಹರಿಪ್ರಸಾದ ಅವರು ಸಮಸ್ಯೆಯನ್ನು ಬಗೆಹರಿಸಲು ದೆಹಲಿಯ ಎಐಸಿಸಿ ಕಚೇರಿಗೆ ವಾಪಸ್‌ ಬಂದಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಅಲೆಮಾರಿ ಪ್ರತಿನಿಧಿ ತಂಡವನ್ನು ಮಾತುಕತೆಗೆ ಕರೆದಿದ್ದರು. ಅವರೊಡನೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಕರ್ನಾಟಕದ ಎಂಎಲ್‌ಸಿ ಆರತಿ ಕೃಷ್ಣ ಅವರು ಸಹ ಇದ್ದರು.

“ದೆಹಲಿಗೆ ಇಂದು ಬರಬೇಕಿದ್ದ ರಾಹುಲ್‌ ಗಾಂಧಿ ಅವರು ಅವರ ತಾಯಿಯವರ ಆರೋಗ್ಯ ಏರುಪೇರಾದ್ದರಿಂದ ಅವರು ಶಿಮ್ಲಾಗೆ ಹೋಗಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಂತೆ ನಮಗೆ ಸೂಚಿಸಿದ್ದಾರೆ. ತಡಮಾಡದೆ ಪರಿಹಾರದ ಕುರಿತು ಚರ್ಚಿಸೋಣ. ಸಮಸ್ಯೆ ಬಗೆಹರಿಯದಿದ್ದರೆ ರಾಹುಲ್‌ ಗಾಂಧಿ ಅವರ ಜೊತೆ ಸಭೆ ನಿಗದಿ ಮಾಡೋಣ” ಬಿಕೆ ಹರಿಪ್ರಸಾದ್ ತಿಳಿಸಿದ್ದಾರೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಅಲೆಮಾರಿ ಸಮುದಾಯದ ನಿಯೋಗವು ತನ್ನ ಹಕ್ಕೊತ್ತಾಯಗಳಾದ ‘ಎ’ ಗುಂಪಿನಲ್ಲಿ ಶೇ. 1 ಪ್ರತ್ಯೇಕ ಮೀಸಲಾತಿ, 49 ಅಲೆಮಾರಿ ಸಮುದಾಯಗಗಳಿಗೆ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿ ಪ್ಯಾಕೇಜ್‌ ಬೇಕು ಎಂಬ ಹಕ್ಕೊತ್ತಾಯಗಳ ಕುರಿತು ಪ್ರಸ್ತಾಪವನ್ನು ಮುಂದಿಟ್ಟರು.

ಬಿ.ಕೆ. ಹರಿಪ್ರಸಾದ್‌ ಅವರು ಅಲ್ಲಿಂದಲೇ ಕೆ. ರಾಜು, ಗುರುದೀಪ್‌ ಸಪ್ಪಾಲ್‌, ವೇಣುಗೋಪಾಲ್‌, ಸುರ್ಜೆವಾಲ್‌ ಜಿ ಹಾಗೂ ಹೆಚ್.‌ ಸಿ. ಮಹದೇವಪ್ಪ ಅವರೊಡನೆ ದೂರವಾಣಿ ಮೂಲಕ ಕೂಲಂಕುಷವಾಗಿ ಚರ್ಚಿಸಿದರು. ಚರ್ಚೆಯ ಅಂತಿಮ ಫಲಿತಾಂಶವಾಗಿ, ಅಲೆಮಾರಿ ಸಮುದಾಯಕ್ಕೆ ಶೇ. 1 ಪ್ರತ್ಯೇಕ ಮೀಸಲಾತಿ ನೀಡಲು ಕರ್ನಾಟಕ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ. ಇದರ ಪ್ರಕ್ರಿಯೆ ಹೇಗೆ ಎಂಬ ಕುರಿತು ಮಾತ್ರ ಸಭೆಯಲ್ಲಿ ಚರ್ಚಿಸಿಕೊಳ್ಳಬೇಕಿದೆ. ವಿಶೇಷ ಪ್ಯಾಕೇಜ್‌ ಮತ್ತು 49 ಅಲೆಮಾರಿ ಸಮುದಾಯಗಗಳಿಗೆ ಮಾತ್ರ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನೂ ಮಾಡಲು ಸರ್ಕಾರ ಬದ್ಧವಿದೆ ಎಂದು ತಿಳಿದುಬಂದಿದೆ.’

ಇವೆಲ್ಲವುಗಳ ಕುರಿತು ಕುಲಂಕುಷವಾಗಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಎಐಸಿಸಿ ಕಡೆಯಿಂದ ಬಿ.ಕೆ. ಹರಿಪ್ರಸಾದ್‌, ಕೆ. ರಾಜು ಹಾಗೂ ಸುರ್ಜೆವಾಲರು ಸಹ ಇರುವಂತೆ ಕರ್ನಾಟಕ ಸರ್ಕಾರದ ಜೊತೆ ದೀಪಾವಳಿ ನಂತರದ ಮೊದಲ ವಾರದಲ್ಲೇ ಸಭೆ ನಿಗದಿ ಮಾಡಲಾಗುತ್ತದೆ. ಸಭೆ ವ್ಯವಸ್ಥೆ ಮಾಡುವ ಹೊಣೆಗಾರಿಕೆ ಬಿ.ಕೆ. ಹರಿಪ್ರಸಾದ್‌ ಅವರದಾಗಿರುತ್ತದೆ. ನಿಯೋಗದ ಜೊತೆ ದೂರವಾಣಿ ಮೂಲಕ ಮಾತನಾಡಿದ ಎಚ್.‌ಸಿ. ಮಹದೇವಪ್ಪನವರು ದಯವಿಟ್ಟು ವಾಪಾಸ್‌ ಬನ್ನಿ, ಖಂಡಿತ ಅಲೆಮಾರಿ ಸಮುದಾಯಗಳ ಸಮಸ್ಯೆ ಬಗೆಹರಿಸಿಕೊಡುತ್ತೇವೆ ಎಂದು ಕೇಳಿಕೊಂಡರು ಎಂದು ಅಲೆಮಾರಿ ಹೋರಾಟಗಾರರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಧರಣಿಯನ್ನು ಅಂತ್ಯಗೊಳಿಸಿ ಕರ್ನಾಟಕಕ್ಕೆ ವಾಪಾಸ್‌ ಆಗಲು ಕರ್ನಾಟಕ ಅಸ್ಪ್ರಷ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ತೀರ್ಮಾನಿಸಿದೆ. ಕೊಟ್ಟ ಮಾತಿನಂತೆ ಕರ್ನಾಟಕ ಸರ್ಕಾರ ಹಾಗೂ ಎಐಸಿಸಿ ಮುಖಂಡರು ನಡೆದುಕೊಳ್ಳುತ್ತಾರೆ ಎಂದು ವಿಶ್ವಾಸಿಸುತ್ತೇವೆ. ಒಂದು ವೇಳೆ ನಮ್ಮ ನಿರೀಕ್ಷೆ ಮತ್ತೆ ಹುಸಿಯಾದರೆ ಮತ್ತೆ ದೆಹಲಿಗೆ ಬರುವುದು ಖಚಿತ ಎಂದು ಸ್ಪಷ್ಟಪಡಿಸಲು ಬಯಸುತ್ತಿದ್ದೇವೆ. ಸಮುದಾಯದ ನೋವನ್ನು ಕೇಳಿಸಿಕೊಳ್ಳಲು ರಾಹುಲ್‌ ಗಾಂಧಿ ಅವರು ಭೇಟಿಗೆ ಸಮಯ ನೀಡಲೇಬೇಕು ಎಂದು ಸಹ ಮತ್ತೊಮ್ಮೆ ಒತ್ತಾಯಿಸಲು ಬಯಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ನಡೆದ ಮಾತುಕತೆಯಲ್ಲಿ ಅಲೆಮಾರಿ ಸಮುದಾಯ ಪರವಾಗಿ ಅದರ ಮುಖಂಡರುಗಳಾದ ಎ.ಎಸ್.‌ ಪ್ರಭಾಕರ್‌, ಮಂಜುನಾಥ್‌ ದಾಯತ್ಕರ್, ಬಸವರಾಜ್‌ ನಾರಾಯಣಕರ್, ಚಾವಡಿ ಲೋಕೇಶ್‌, ಮಂಡ್ಯ ರಾಜಣ್ಣ, ಸಂದೀಪ್‌ ಕುಮಾರ್‌ ದಾಸರ್‌, ಶರಣಪ್ಪ ಚನ್ನದಾಸರ್‌, ಸಿಂದೋಳು ಸಮುದಾಯದ ಹನುಮಂತು ಮುಂತಾದವರು ಭಾಗವಹಿಸಿದ್ದರು. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕರಾದ ಕರಿಯಪ್ಪ ಗುಡಿಮನಿ, ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್‌ ಶ್ರೀಧರ್‌ ಹಾಗೂ ಎದ್ದೇಳು ಕರ್ನಾಟಕದ ತಾರಾ ರಾವ್‌ ಅವರು ಸಹ ಈ ಚರ್ಚೆಗಳಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿದರು.

ಆರ್‌ಎಸ್‌ಎಸ್‌ ಹಿಂದುತ್ವದ ಪರಿಧಿಯಲ್ಲಿ ಪರಿಶಿಷ್ಟರಿಗೆ ಸ್ಥಾನವಿಲ್ಲ: ಸಚಿವ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...