Homeಮುಖಪುಟ'ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಆಡಳಿತ' | ದೆಹಲಿ ಮುಂದಿನ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಆಯ್ಕೆ

‘ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಆಡಳಿತ’ | ದೆಹಲಿ ಮುಂದಿನ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಆಯ್ಕೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕೆಲವೇ ಗಂಟೆಗಳ ನಂತರ, ಎಎಪಿ ನಾಯಕಿ ಅತಿಶಿ ಅವರು ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಸರ್ಕಾರವನ್ನು ನಡೆಸುವುದಾಗಿ ಮಂಗಳವಾರ ಹೇಳಿದ್ದಾರೆ. ಇಷ್ಟು “ದೊಡ್ಡ ಜವಾಬ್ದಾರಿ”ಯನ್ನು ತನಗೆ ನೀಡಿ ತನ್ನ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದಕ್ಕೆ ನಂಬಿದ್ದಕ್ಕಾಗಿ ಕೇಜ್ರಿವಾಲ್ ಅವರಿಗೆ ಆತಿಶಿ ಧನ್ಯವಾದ ಅರ್ಪಿಸಿದ್ದಾರೆ.ದೆಹಲಿ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ದೆಹಲಿಯಲ್ಲಿ ಒಬ್ಬರೇ ಸಿಎಂ ಇದ್ದಾರೆ ಮತ್ತು ಅವರು ಅರವಿಂದ್ ಕೇಜ್ರಿವಾಲ್… ಅವರನ್ನು ಮತ್ತೆ ಸಿಎಂ ಮಾಡುವುದು ನಮ್ಮ ಏಕೈಕ ಉದ್ದೇಶವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

“ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ದೆಹಲಿಯ ಪ್ರೀತಿಯ ಮುಖ್ಯಮಂತ್ರಿ ಮತ್ತು ನನ್ನ ಗುರು ಅರವಿಂದ್ ಕೇಜ್ರಿವಾಲ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾನೊಬ್ಬ ಸಾಮಾನ್ಯ ರಾಜಕಾರಣಿ ಮತ್ತು ನಾನು ಬೇರೆ ಯಾವುದೇ ಪಕ್ಷದಲ್ಲಿದ್ದರೆ ನನಗೆ ಟಿಕೆಟ್ ಸಿಗುತ್ತಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ ಕೇಜ್ರಿವಾಲ್ ಅವರು ನನ್ನ ಮೇಲೆ ತುಂಬಾ ನಂಬಿಕೆ ಇಟ್ಟಿದ್ದಾರೆ. ನಾನು ನನ್ನ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆ”ಎಂದು 43 ವರ್ಷದ ಹಿರಿಯ ಎಎಪಿ ನಾಯಕಿ ಹೇಳಿದ್ದಾರೆ.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಿಜೆಪಿ ಸಂಚು ರೂಪಿಸಿದ್ದು, ಕೇಜ್ರಿವಾಲ್ ಅವರನ್ನು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಿದೆ ಎಂದು ಅವರು ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಅವರಿಗೆ ಈಗ ಜಾಮೀನು ನೀಡಿದ್ದು, ಜೊತೆಗೆ ತನಿಖಾ ಸಂಸ್ಥೆಯನ್ನು ಪಂಜರದ ಗಿಳಿ ಎಂದು ಕರೆಯುವ ಮೂಲಕ ಕೇಂದ್ರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಹೇಳಿದ್ದಾರೆ.

“ಜೈಲಿನಿಂದ ಹೊರಬಂದ ನಂತರ ಅರವಿಂದ್ ಕೇಜ್ರಿವಾಲ್ ಮಾಡಿದ್ದನ್ನು ಜಗತ್ತಿನಲ್ಲಿ ಯಾರೂ ಮಾಡಿಲ್ಲ ಅಥವಾ ವಿಶ್ವದ ಯಾವುದೇ ನಾಯಕರು ಮಾಡಿಲ್ಲ. ಅವರ ಪ್ರಾಮಾಣಿಕತೆಯನ್ನು ದೆಹಲಿಯ ಜನರು ಪ್ರಮಾಣೀಕರಿಸಿದ ನಂತರವೇ ಅವರು ಸಿಎಂ ಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ” ಎಂದು ಅತಿಶಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

“ಇಂದು, ದೆಹಲಿಯ ಜನರು ಬಿಜೆಪಿಯ ಪಿತೂರಿಯಿಂದ ತುಂಬಾ ಅಸಮಾಧಾನಗೊಂಡಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ಜನರು ಕೇಜ್ರಿವಾಲ್ ಅವರಂತಹ ಪ್ರಾಮಾಣಿಕ ನಾಯಕರನ್ನು ಮಾತ್ರ ತಮ್ಮ ಸಿಎಂ ಎಂದು ಬಯಸುತ್ತಾರೆ. ಏಕೆಂದರೆ ಅವರು ಸಿಎಂ ಮಾತ್ರ ಆಗಿರುವುದಿಲ್ಲ ಎಂದು ಅವರಿಗೆ ತಿಳಿದಿದೆ.” ಎಂದು ಆತಿಶಿ ಹೇಳಿದ್ದಾರೆ.

ಶಿಕ್ಷಣ, ಹಣಕಾಸು, ಕಾನೂನು, ಪ್ರವಾಸೋದ್ಯಮ ಮತ್ತು ಇತರ ಹಲವಾರು ಇಲಾಖೆಗಳ ಖಾತೆಯನ್ನು ಹೊಂದಿರುವ ಆತಿಶಿ ಅವರು, ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಆದ್ದರಿಂದ ಇದು ಸಂತೋಷದಾಯಕ ವಿಷಯಲ್ಲ. ಹಾಗಾಗಿ ನನಗೆ ಹಾರ ಹಾಕಿ ಸಂಭ್ರಮಿಸಬೇಡಿ ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಅತಿಶಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರನ್ನು ನಾಳೆ ಭೇಟಿಯಾಗುವ ಸಾಧ್ಯತೆಯಿದೆ. ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಲು ಸಂಜೆ 4.30 ಕ್ಕೆ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರನ್ನು ಭೇಟಿಯಾಗಲಿದ್ದಾರೆ. ಹೊಸ ಮುಖ್ಯಮಂತ್ರಿಯ ಪ್ರಸ್ತಾಪವನ್ನು ಸಕ್ಸೇನಾ ಅವರಿಗೆ ಕಳುಹಿಸಿದ ನಂತರ, ಅವರು ಅದನ್ನು ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ರವಾನಿಸುತ್ತಾರೆ, ನಂತರ ಅತಿಶಿ ಅವರು ದೆಹಲಿ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ.

ಇನ್ನು ಮೂರ್ನಾಲ್ಕು ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊನೋಡಿ: ತಾರತಮ್ಯವನ್ನು ಬೋಧಿಸುವ ಕೃತಿ ಭಗವದ್ಗೀತೆ: ಡಾ.ಜಿ.ರಾಮಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...