Homeಮುಖಪುಟ'ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಆಡಳಿತ' | ದೆಹಲಿ ಮುಂದಿನ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಆಯ್ಕೆ

‘ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಆಡಳಿತ’ | ದೆಹಲಿ ಮುಂದಿನ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಆಯ್ಕೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕೆಲವೇ ಗಂಟೆಗಳ ನಂತರ, ಎಎಪಿ ನಾಯಕಿ ಅತಿಶಿ ಅವರು ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಸರ್ಕಾರವನ್ನು ನಡೆಸುವುದಾಗಿ ಮಂಗಳವಾರ ಹೇಳಿದ್ದಾರೆ. ಇಷ್ಟು “ದೊಡ್ಡ ಜವಾಬ್ದಾರಿ”ಯನ್ನು ತನಗೆ ನೀಡಿ ತನ್ನ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದಕ್ಕೆ ನಂಬಿದ್ದಕ್ಕಾಗಿ ಕೇಜ್ರಿವಾಲ್ ಅವರಿಗೆ ಆತಿಶಿ ಧನ್ಯವಾದ ಅರ್ಪಿಸಿದ್ದಾರೆ.ದೆಹಲಿ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ದೆಹಲಿಯಲ್ಲಿ ಒಬ್ಬರೇ ಸಿಎಂ ಇದ್ದಾರೆ ಮತ್ತು ಅವರು ಅರವಿಂದ್ ಕೇಜ್ರಿವಾಲ್… ಅವರನ್ನು ಮತ್ತೆ ಸಿಎಂ ಮಾಡುವುದು ನಮ್ಮ ಏಕೈಕ ಉದ್ದೇಶವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

“ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ದೆಹಲಿಯ ಪ್ರೀತಿಯ ಮುಖ್ಯಮಂತ್ರಿ ಮತ್ತು ನನ್ನ ಗುರು ಅರವಿಂದ್ ಕೇಜ್ರಿವಾಲ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾನೊಬ್ಬ ಸಾಮಾನ್ಯ ರಾಜಕಾರಣಿ ಮತ್ತು ನಾನು ಬೇರೆ ಯಾವುದೇ ಪಕ್ಷದಲ್ಲಿದ್ದರೆ ನನಗೆ ಟಿಕೆಟ್ ಸಿಗುತ್ತಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ ಕೇಜ್ರಿವಾಲ್ ಅವರು ನನ್ನ ಮೇಲೆ ತುಂಬಾ ನಂಬಿಕೆ ಇಟ್ಟಿದ್ದಾರೆ. ನಾನು ನನ್ನ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆ”ಎಂದು 43 ವರ್ಷದ ಹಿರಿಯ ಎಎಪಿ ನಾಯಕಿ ಹೇಳಿದ್ದಾರೆ.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಿಜೆಪಿ ಸಂಚು ರೂಪಿಸಿದ್ದು, ಕೇಜ್ರಿವಾಲ್ ಅವರನ್ನು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಿದೆ ಎಂದು ಅವರು ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಅವರಿಗೆ ಈಗ ಜಾಮೀನು ನೀಡಿದ್ದು, ಜೊತೆಗೆ ತನಿಖಾ ಸಂಸ್ಥೆಯನ್ನು ಪಂಜರದ ಗಿಳಿ ಎಂದು ಕರೆಯುವ ಮೂಲಕ ಕೇಂದ್ರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಹೇಳಿದ್ದಾರೆ.

“ಜೈಲಿನಿಂದ ಹೊರಬಂದ ನಂತರ ಅರವಿಂದ್ ಕೇಜ್ರಿವಾಲ್ ಮಾಡಿದ್ದನ್ನು ಜಗತ್ತಿನಲ್ಲಿ ಯಾರೂ ಮಾಡಿಲ್ಲ ಅಥವಾ ವಿಶ್ವದ ಯಾವುದೇ ನಾಯಕರು ಮಾಡಿಲ್ಲ. ಅವರ ಪ್ರಾಮಾಣಿಕತೆಯನ್ನು ದೆಹಲಿಯ ಜನರು ಪ್ರಮಾಣೀಕರಿಸಿದ ನಂತರವೇ ಅವರು ಸಿಎಂ ಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ” ಎಂದು ಅತಿಶಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

“ಇಂದು, ದೆಹಲಿಯ ಜನರು ಬಿಜೆಪಿಯ ಪಿತೂರಿಯಿಂದ ತುಂಬಾ ಅಸಮಾಧಾನಗೊಂಡಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ಜನರು ಕೇಜ್ರಿವಾಲ್ ಅವರಂತಹ ಪ್ರಾಮಾಣಿಕ ನಾಯಕರನ್ನು ಮಾತ್ರ ತಮ್ಮ ಸಿಎಂ ಎಂದು ಬಯಸುತ್ತಾರೆ. ಏಕೆಂದರೆ ಅವರು ಸಿಎಂ ಮಾತ್ರ ಆಗಿರುವುದಿಲ್ಲ ಎಂದು ಅವರಿಗೆ ತಿಳಿದಿದೆ.” ಎಂದು ಆತಿಶಿ ಹೇಳಿದ್ದಾರೆ.

ಶಿಕ್ಷಣ, ಹಣಕಾಸು, ಕಾನೂನು, ಪ್ರವಾಸೋದ್ಯಮ ಮತ್ತು ಇತರ ಹಲವಾರು ಇಲಾಖೆಗಳ ಖಾತೆಯನ್ನು ಹೊಂದಿರುವ ಆತಿಶಿ ಅವರು, ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಆದ್ದರಿಂದ ಇದು ಸಂತೋಷದಾಯಕ ವಿಷಯಲ್ಲ. ಹಾಗಾಗಿ ನನಗೆ ಹಾರ ಹಾಕಿ ಸಂಭ್ರಮಿಸಬೇಡಿ ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಅತಿಶಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರನ್ನು ನಾಳೆ ಭೇಟಿಯಾಗುವ ಸಾಧ್ಯತೆಯಿದೆ. ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಲು ಸಂಜೆ 4.30 ಕ್ಕೆ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರನ್ನು ಭೇಟಿಯಾಗಲಿದ್ದಾರೆ. ಹೊಸ ಮುಖ್ಯಮಂತ್ರಿಯ ಪ್ರಸ್ತಾಪವನ್ನು ಸಕ್ಸೇನಾ ಅವರಿಗೆ ಕಳುಹಿಸಿದ ನಂತರ, ಅವರು ಅದನ್ನು ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ರವಾನಿಸುತ್ತಾರೆ, ನಂತರ ಅತಿಶಿ ಅವರು ದೆಹಲಿ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ.

ಇನ್ನು ಮೂರ್ನಾಲ್ಕು ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊನೋಡಿ: ತಾರತಮ್ಯವನ್ನು ಬೋಧಿಸುವ ಕೃತಿ ಭಗವದ್ಗೀತೆ: ಡಾ.ಜಿ.ರಾಮಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...