Homeಮುಖಪುಟ'ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಆಡಳಿತ' | ದೆಹಲಿ ಮುಂದಿನ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಆಯ್ಕೆ

‘ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಆಡಳಿತ’ | ದೆಹಲಿ ಮುಂದಿನ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಆಯ್ಕೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕೆಲವೇ ಗಂಟೆಗಳ ನಂತರ, ಎಎಪಿ ನಾಯಕಿ ಅತಿಶಿ ಅವರು ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಸರ್ಕಾರವನ್ನು ನಡೆಸುವುದಾಗಿ ಮಂಗಳವಾರ ಹೇಳಿದ್ದಾರೆ. ಇಷ್ಟು “ದೊಡ್ಡ ಜವಾಬ್ದಾರಿ”ಯನ್ನು ತನಗೆ ನೀಡಿ ತನ್ನ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದಕ್ಕೆ ನಂಬಿದ್ದಕ್ಕಾಗಿ ಕೇಜ್ರಿವಾಲ್ ಅವರಿಗೆ ಆತಿಶಿ ಧನ್ಯವಾದ ಅರ್ಪಿಸಿದ್ದಾರೆ.ದೆಹಲಿ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ದೆಹಲಿಯಲ್ಲಿ ಒಬ್ಬರೇ ಸಿಎಂ ಇದ್ದಾರೆ ಮತ್ತು ಅವರು ಅರವಿಂದ್ ಕೇಜ್ರಿವಾಲ್… ಅವರನ್ನು ಮತ್ತೆ ಸಿಎಂ ಮಾಡುವುದು ನಮ್ಮ ಏಕೈಕ ಉದ್ದೇಶವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

“ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ದೆಹಲಿಯ ಪ್ರೀತಿಯ ಮುಖ್ಯಮಂತ್ರಿ ಮತ್ತು ನನ್ನ ಗುರು ಅರವಿಂದ್ ಕೇಜ್ರಿವಾಲ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾನೊಬ್ಬ ಸಾಮಾನ್ಯ ರಾಜಕಾರಣಿ ಮತ್ತು ನಾನು ಬೇರೆ ಯಾವುದೇ ಪಕ್ಷದಲ್ಲಿದ್ದರೆ ನನಗೆ ಟಿಕೆಟ್ ಸಿಗುತ್ತಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ ಕೇಜ್ರಿವಾಲ್ ಅವರು ನನ್ನ ಮೇಲೆ ತುಂಬಾ ನಂಬಿಕೆ ಇಟ್ಟಿದ್ದಾರೆ. ನಾನು ನನ್ನ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆ”ಎಂದು 43 ವರ್ಷದ ಹಿರಿಯ ಎಎಪಿ ನಾಯಕಿ ಹೇಳಿದ್ದಾರೆ.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಿಜೆಪಿ ಸಂಚು ರೂಪಿಸಿದ್ದು, ಕೇಜ್ರಿವಾಲ್ ಅವರನ್ನು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಿದೆ ಎಂದು ಅವರು ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಅವರಿಗೆ ಈಗ ಜಾಮೀನು ನೀಡಿದ್ದು, ಜೊತೆಗೆ ತನಿಖಾ ಸಂಸ್ಥೆಯನ್ನು ಪಂಜರದ ಗಿಳಿ ಎಂದು ಕರೆಯುವ ಮೂಲಕ ಕೇಂದ್ರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಹೇಳಿದ್ದಾರೆ.

“ಜೈಲಿನಿಂದ ಹೊರಬಂದ ನಂತರ ಅರವಿಂದ್ ಕೇಜ್ರಿವಾಲ್ ಮಾಡಿದ್ದನ್ನು ಜಗತ್ತಿನಲ್ಲಿ ಯಾರೂ ಮಾಡಿಲ್ಲ ಅಥವಾ ವಿಶ್ವದ ಯಾವುದೇ ನಾಯಕರು ಮಾಡಿಲ್ಲ. ಅವರ ಪ್ರಾಮಾಣಿಕತೆಯನ್ನು ದೆಹಲಿಯ ಜನರು ಪ್ರಮಾಣೀಕರಿಸಿದ ನಂತರವೇ ಅವರು ಸಿಎಂ ಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ” ಎಂದು ಅತಿಶಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

“ಇಂದು, ದೆಹಲಿಯ ಜನರು ಬಿಜೆಪಿಯ ಪಿತೂರಿಯಿಂದ ತುಂಬಾ ಅಸಮಾಧಾನಗೊಂಡಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ಜನರು ಕೇಜ್ರಿವಾಲ್ ಅವರಂತಹ ಪ್ರಾಮಾಣಿಕ ನಾಯಕರನ್ನು ಮಾತ್ರ ತಮ್ಮ ಸಿಎಂ ಎಂದು ಬಯಸುತ್ತಾರೆ. ಏಕೆಂದರೆ ಅವರು ಸಿಎಂ ಮಾತ್ರ ಆಗಿರುವುದಿಲ್ಲ ಎಂದು ಅವರಿಗೆ ತಿಳಿದಿದೆ.” ಎಂದು ಆತಿಶಿ ಹೇಳಿದ್ದಾರೆ.

ಶಿಕ್ಷಣ, ಹಣಕಾಸು, ಕಾನೂನು, ಪ್ರವಾಸೋದ್ಯಮ ಮತ್ತು ಇತರ ಹಲವಾರು ಇಲಾಖೆಗಳ ಖಾತೆಯನ್ನು ಹೊಂದಿರುವ ಆತಿಶಿ ಅವರು, ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಆದ್ದರಿಂದ ಇದು ಸಂತೋಷದಾಯಕ ವಿಷಯಲ್ಲ. ಹಾಗಾಗಿ ನನಗೆ ಹಾರ ಹಾಕಿ ಸಂಭ್ರಮಿಸಬೇಡಿ ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಅತಿಶಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರನ್ನು ನಾಳೆ ಭೇಟಿಯಾಗುವ ಸಾಧ್ಯತೆಯಿದೆ. ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಲು ಸಂಜೆ 4.30 ಕ್ಕೆ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರನ್ನು ಭೇಟಿಯಾಗಲಿದ್ದಾರೆ. ಹೊಸ ಮುಖ್ಯಮಂತ್ರಿಯ ಪ್ರಸ್ತಾಪವನ್ನು ಸಕ್ಸೇನಾ ಅವರಿಗೆ ಕಳುಹಿಸಿದ ನಂತರ, ಅವರು ಅದನ್ನು ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ರವಾನಿಸುತ್ತಾರೆ, ನಂತರ ಅತಿಶಿ ಅವರು ದೆಹಲಿ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ.

ಇನ್ನು ಮೂರ್ನಾಲ್ಕು ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊನೋಡಿ: ತಾರತಮ್ಯವನ್ನು ಬೋಧಿಸುವ ಕೃತಿ ಭಗವದ್ಗೀತೆ: ಡಾ.ಜಿ.ರಾಮಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...