Homeಮುಖಪುಟದೆಹಲಿ ಸುಗ್ರೀವಾಜ್ಞೆ ಪ್ರಕರಣ: ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ಚಿಂತನೆ

ದೆಹಲಿ ಸುಗ್ರೀವಾಜ್ಞೆ ಪ್ರಕರಣ: ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ಚಿಂತನೆ

- Advertisement -
- Advertisement -

ದೆಹಲಿ ಆಡಳಿತಾತ್ಮಕ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಬಿಜೆಪಿ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರವು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ವಿಷಯವನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ಇಚ್ಚಿಸುತ್ತೇನೆ ಎಂದು ನೊಟೀಸ್ ಜಾರಿ ಮಾಡಿದೆ.

ಕಳೆದ ವಾರ, ಸುಗ್ರೀವಾಜ್ಞೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಕೇಂದ್ರವು ಈ ವರ್ಷ ಮೇ 19ರಂದು ದೆಹಲಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಸುಗ್ರೀವಾಜ್ಞೆಯನ್ನು ಪ್ರಕಟಿಸಿತು.

ಈ ವಿಷಯದ ಮೇಲೆ ದೆಹಲಿ ಸರ್ಕಾರಕ್ಕೆ ನಿಯಂತ್ರಣವನ್ನು ನೀಡುವುದನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪ್ರಕರಣವನ್ನು ಜುಲೈ 20ರಂದು ವಿಚಾರಣೆಗೆ ಮುಂದೂಡಲಾಗಿದೆ.

ಪ್ರತಿಪಕ್ಷಗಳು ಇದೀಗ ದೆಹಲಿ ಎಎಪಿ ಪರವಾಗಿ ನಿಂತಿದ್ದು, ಇದೀಗ ಕಾಂಗ್ರೆಸ್ ಪಕ್ಷ ಕೂಡ ಈ ಸುಗ್ರೀವಾಜ್ಞೆಯನ್ನು ವಿರೋಧಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅರವಿಂದ್ ಕೇಜ್ರಿವಾಲ್ ಅವರು ಧನ್ಯವಾದ ಅರ್ಪಿಸಿದ್ದಾರೆ. ”ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಗೆ “ದೆಹಲಿ ಜನರೊಂದಿಗೆ ನಿಂತಿದ್ದಕ್ಕಾಗಿ” ಕಾಂಗ್ರೆಸ್ ಅಧ್ಯಕ್ಷರಿಗೆ ಧನ್ಯವಾದ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಸ್ಪರ್ಧಿಯಾಗಿದ್ದು ಈ ಬಗ್ಗೆ ಕಾಂಗ್ರೆಸ್‌ನ ನಿಲುವಿನ ಬಗ್ಗೆ ಖರ್ಗೆ ಅವರಿಗೆ ಮಾಧ್ಯಮದವರು ಕೇಳಿದಾಗ, ”ಇದು ಕೇವಲ ಒಬ್ಬ ವ್ಯಕ್ತಿಯ (ಕೇಜ್ರಿವಾಲ್) ಬಗ್ಗೆ ಅಲ್ಲ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಹೊಡೆತ ಬಿದ್ದರೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಒಂದಾಗುವುದು ಮತ್ತು ಒಟ್ಟಾಗಿ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಯಾವುದೇ ವ್ಯಕ್ತಿ ದೇಶಕ್ಕಿಂತ ದೊಡ್ಡವನಲ್ಲ…” ಎಂದು ಉತ್ತರಿಸಿದ್ದಾರೆ.

ಖರ್ಗೆಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ”ದೆಹಲಿಯ ಜನರ ಪರವಾಗಿ ನಿಂತಿದ್ದಕ್ಕಾಗಿ ಖರ್ಗೆ ಜಿ ಅವರಿಗೆ ಧನ್ಯವಾದಗಳು. ಈ ಸುಗ್ರೀವಾಜ್ಞೆಯು ಭಾರತ ವಿರೋಧಿ ಮತ್ತು ರಾಷ್ಟ್ರವಿರೋಧಿಯಾಗಿದೆ. ಹಾಗಾಗಿ ನಾವೆಲ್ಲಾ ಇದರ ವಿರುದ್ಧ ಹೋರಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...