Homeಕರೋನಾ ತಲ್ಲಣದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

ದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

- Advertisement -
- Advertisement -

ದೆಹಲಿಯಲ್ಲಿ ಕೋವಿಡ್ ನಿಯಂತ್ರಣ ಒಂದು ಹಂತಕ್ಕೆ ಬರುತ್ತಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಬೇರೆ ಬಗೆಯ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವೈದ್ಯರ ಪ್ರಕಾರ, ದೆಹಲಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (ಒಪಿಡಿ) ಕೋವಿಡ್‌ನಿಂದ ಗುಣಮುಖರಾಗಿ ಈಗ ಹಲವು ತೊಡಕುಗಳನ್ನು ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಒಪಿಡಿಗಳಲ್ಲಿ ಕೋವಿಡ್ ನಂತರದ ತೊಡಕುಗಳನ್ನು ಹೊಂದಿರುವ 25-30 ರೋಗಿಗಳಿಗೆ ವೈದ್ಯರು ಪ್ರತಿದಿನ ಈಗ ಚಿಕಿತ್ಸೆ ನೀಡುತ್ತಿದ್ದಾರೆ. ಮೊದಲ ಅಲೆಯಲ್ಲಿ ವರದಿಯಾದ ರೋಗಲಕ್ಷಣಗಳಿಗಿಂತ ಈಗಿನ ರೋಗಲಕ್ಷಣಗಳು ಹೆಚ್ಚು ಗಂಭೀರವಾಗಿವೆ. ಸೋಂಕಿನಿಂದ ಚೇತರಿಸಿಕೊಂಡ ನಂತರ ಹಲವಾರು ವಾರಗಳವರೆಗೆ ರೋಗಿಗಳಿಗೆ ಆಮ್ಲಜನಕದ ಬೆಂಬಲ ಬೇಕಾಗುತ್ತಿದೆ. ಕಳೆದ ವರ್ಷ, ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿ ಆಯಾಸ ಸಾಮಾನ್ಯ ಲಕ್ಷಣವಾಗಿತ್ತು.

ಮ್ಯಾಕ್ಸ್ ಆಸ್ಪತ್ರೆಯ ಉಸಿರಾಟ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ನಂಗಿಯಾ, ‘ನಮ್ಮ ಒಪಿಡಿಗಳು 70-80% ರಷ್ಟು ಕೋವಿಡ್ ನಂತರದ ರೋಗಿಗಳಿಂದ ತುಂಬಿಹೋಗಿವೆ. ಸಾಮಾನ್ಯವಾಗಿ, 65 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ ಶ್ವಾಸಕೋಶದ ಫೈಬ್ರೋಸಿಸ್ ಅನ್ನು ನಾವು ನೋಡುತ್ತೇವೆ. ಆದರೆ ಈ ಸಮಯದಲ್ಲಿ, ಮಧ್ಯ ವಯಸ್ಕ ಜನರು, ಕಿರಿಯ ರೋಗಿಗಳು ಮತ್ತು ಮಕ್ಕಳನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸಲಾಗಿದೆ. ಕೋವಿಡ್‌ನಿಂದ ಗುಣಮುಖರಾದ ನಂತರವೂ ಆಮ್ಲಜನಕದ ಬೆಂಬಲದಲ್ಲಿರುವ ರೋಗಿಗಳಿದ್ದಾರೆ ಎಂದಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡ ರೋಗಿಗಳು ನಂತರ ಹೆಚ್ಚಿನ ಪ್ರಮಾಣದ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸುರಂಜಿತ್ ಚಟರ್ಜಿ, “3 ಮತ್ತು 4 ನೇ ವಾರದ ಚೇತರಿಕೆಯ ನಂತರ ಸಹ ನಾವು ತೀವ್ರ ಜ್ವರದಿಂದ ಬಳಲುತ್ತಿರುವ ಬಹಳಷ್ಟು ರೋಗಿಗಳನ್ನು ನೋಡುತ್ತಿದ್ದೇವೆ. ಮೊದಲ ಅಲೆಯಲ್ಲಿಯೂ ಜ್ವರ ಇತ್ತು. ಆದರೆ ಈ ಸಮಯದಲ್ಲಿ ಸ್ಟೀರಾಯ್ಡ್‌ಗಳನ್ನು ಸಹ ಬಳಸಲಾಗಿದೆ, ಆದ್ದರಿಂದ ಇದು ಕೇವಲ ಉರಿಯೂತವೋ ಅಥವಾ ದ್ವಿತೀಯ ಸೋಂಕಿನ ಕಾರಣವೋ ಎಂದು ನಾವು ಗೊಂದಲಕ್ಕೊಳಗಾಗಿದ್ದೇವೆ. ಕಪ್ಪು ಶಿಲೀಂದ್ರ ಅಥವಾ ಶ್ವಾಸಕೋಶದ ಇತರ ಸೋಂಕುಗಳೂ ಕಾಣಿಸಿಕೊಳ್ಳುತ್ತಿವೆ” ಎಂದಿದ್ದಾರೆ.

ಕೆಲವು ರೋಗಿಗಳಿಗೆ, ಕೋವಿಡ್ ನಂತರದ ಲಕ್ಷಣಗಳು ತೀವ್ರವಾಗಿದ್ದರಿಂದ ಅವರನ್ನು ಮತ್ತೆ ತೀವ್ರ ನಿಗಾ ಚಿಕಿತ್ಸೆಗೆ ಸೇರಿಸಲಾಗುತ್ತಿದೆ.

ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ಟಿಟ್ಯೂಟ್‌ನ ತೀವ್ರ ನಿಗಾ ಘಟಕದ ಹೆಚ್ಚುವರಿ ನಿರ್ದೇಶಕ ಡಾ.ರಜತ್ ಅಗರ್ವಾಲ್, ‘ಪ್ರತಿದಿನ 3-4 ರೋಗಿಗಳು ವಿವಿಧ ಸಮಸ್ಯೆಗಳೊಂದಿಗೆ ನಮ್ಮ ತೀವ್ರ ನಿಗಾ ಘಟಕಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಹುಪಾಲು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಈಗ ದೈನಂದಿನ ಪ್ರಕರಣಗಳು ಸುಮಾರು 500ಕ್ಕೆ ಇಳಿದಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಇತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.


ಇದನ್ನೂ ಓದಿ; ರೋಗನಿರೋಧಕತೆ ಮತ್ತು ಲಸಿಕೆ; ಸಂಶೋಧನೆಯ ಇತಿಹಾಸ ಮತ್ತು ವಿಜ್ಞಾನ: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...