Homeಕರೋನಾ ತಲ್ಲಣದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

ದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

- Advertisement -
- Advertisement -

ದೆಹಲಿಯಲ್ಲಿ ಕೋವಿಡ್ ನಿಯಂತ್ರಣ ಒಂದು ಹಂತಕ್ಕೆ ಬರುತ್ತಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಬೇರೆ ಬಗೆಯ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವೈದ್ಯರ ಪ್ರಕಾರ, ದೆಹಲಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (ಒಪಿಡಿ) ಕೋವಿಡ್‌ನಿಂದ ಗುಣಮುಖರಾಗಿ ಈಗ ಹಲವು ತೊಡಕುಗಳನ್ನು ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಒಪಿಡಿಗಳಲ್ಲಿ ಕೋವಿಡ್ ನಂತರದ ತೊಡಕುಗಳನ್ನು ಹೊಂದಿರುವ 25-30 ರೋಗಿಗಳಿಗೆ ವೈದ್ಯರು ಪ್ರತಿದಿನ ಈಗ ಚಿಕಿತ್ಸೆ ನೀಡುತ್ತಿದ್ದಾರೆ. ಮೊದಲ ಅಲೆಯಲ್ಲಿ ವರದಿಯಾದ ರೋಗಲಕ್ಷಣಗಳಿಗಿಂತ ಈಗಿನ ರೋಗಲಕ್ಷಣಗಳು ಹೆಚ್ಚು ಗಂಭೀರವಾಗಿವೆ. ಸೋಂಕಿನಿಂದ ಚೇತರಿಸಿಕೊಂಡ ನಂತರ ಹಲವಾರು ವಾರಗಳವರೆಗೆ ರೋಗಿಗಳಿಗೆ ಆಮ್ಲಜನಕದ ಬೆಂಬಲ ಬೇಕಾಗುತ್ತಿದೆ. ಕಳೆದ ವರ್ಷ, ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿ ಆಯಾಸ ಸಾಮಾನ್ಯ ಲಕ್ಷಣವಾಗಿತ್ತು.

ಮ್ಯಾಕ್ಸ್ ಆಸ್ಪತ್ರೆಯ ಉಸಿರಾಟ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ನಂಗಿಯಾ, ‘ನಮ್ಮ ಒಪಿಡಿಗಳು 70-80% ರಷ್ಟು ಕೋವಿಡ್ ನಂತರದ ರೋಗಿಗಳಿಂದ ತುಂಬಿಹೋಗಿವೆ. ಸಾಮಾನ್ಯವಾಗಿ, 65 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ ಶ್ವಾಸಕೋಶದ ಫೈಬ್ರೋಸಿಸ್ ಅನ್ನು ನಾವು ನೋಡುತ್ತೇವೆ. ಆದರೆ ಈ ಸಮಯದಲ್ಲಿ, ಮಧ್ಯ ವಯಸ್ಕ ಜನರು, ಕಿರಿಯ ರೋಗಿಗಳು ಮತ್ತು ಮಕ್ಕಳನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸಲಾಗಿದೆ. ಕೋವಿಡ್‌ನಿಂದ ಗುಣಮುಖರಾದ ನಂತರವೂ ಆಮ್ಲಜನಕದ ಬೆಂಬಲದಲ್ಲಿರುವ ರೋಗಿಗಳಿದ್ದಾರೆ ಎಂದಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡ ರೋಗಿಗಳು ನಂತರ ಹೆಚ್ಚಿನ ಪ್ರಮಾಣದ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸುರಂಜಿತ್ ಚಟರ್ಜಿ, “3 ಮತ್ತು 4 ನೇ ವಾರದ ಚೇತರಿಕೆಯ ನಂತರ ಸಹ ನಾವು ತೀವ್ರ ಜ್ವರದಿಂದ ಬಳಲುತ್ತಿರುವ ಬಹಳಷ್ಟು ರೋಗಿಗಳನ್ನು ನೋಡುತ್ತಿದ್ದೇವೆ. ಮೊದಲ ಅಲೆಯಲ್ಲಿಯೂ ಜ್ವರ ಇತ್ತು. ಆದರೆ ಈ ಸಮಯದಲ್ಲಿ ಸ್ಟೀರಾಯ್ಡ್‌ಗಳನ್ನು ಸಹ ಬಳಸಲಾಗಿದೆ, ಆದ್ದರಿಂದ ಇದು ಕೇವಲ ಉರಿಯೂತವೋ ಅಥವಾ ದ್ವಿತೀಯ ಸೋಂಕಿನ ಕಾರಣವೋ ಎಂದು ನಾವು ಗೊಂದಲಕ್ಕೊಳಗಾಗಿದ್ದೇವೆ. ಕಪ್ಪು ಶಿಲೀಂದ್ರ ಅಥವಾ ಶ್ವಾಸಕೋಶದ ಇತರ ಸೋಂಕುಗಳೂ ಕಾಣಿಸಿಕೊಳ್ಳುತ್ತಿವೆ” ಎಂದಿದ್ದಾರೆ.

ಕೆಲವು ರೋಗಿಗಳಿಗೆ, ಕೋವಿಡ್ ನಂತರದ ಲಕ್ಷಣಗಳು ತೀವ್ರವಾಗಿದ್ದರಿಂದ ಅವರನ್ನು ಮತ್ತೆ ತೀವ್ರ ನಿಗಾ ಚಿಕಿತ್ಸೆಗೆ ಸೇರಿಸಲಾಗುತ್ತಿದೆ.

ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ಟಿಟ್ಯೂಟ್‌ನ ತೀವ್ರ ನಿಗಾ ಘಟಕದ ಹೆಚ್ಚುವರಿ ನಿರ್ದೇಶಕ ಡಾ.ರಜತ್ ಅಗರ್ವಾಲ್, ‘ಪ್ರತಿದಿನ 3-4 ರೋಗಿಗಳು ವಿವಿಧ ಸಮಸ್ಯೆಗಳೊಂದಿಗೆ ನಮ್ಮ ತೀವ್ರ ನಿಗಾ ಘಟಕಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಹುಪಾಲು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಈಗ ದೈನಂದಿನ ಪ್ರಕರಣಗಳು ಸುಮಾರು 500ಕ್ಕೆ ಇಳಿದಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಇತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.


ಇದನ್ನೂ ಓದಿ; ರೋಗನಿರೋಧಕತೆ ಮತ್ತು ಲಸಿಕೆ; ಸಂಶೋಧನೆಯ ಇತಿಹಾಸ ಮತ್ತು ವಿಜ್ಞಾನ: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...