Homeಕರೋನಾ ತಲ್ಲಣದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

ದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

- Advertisement -
- Advertisement -

ದೆಹಲಿಯಲ್ಲಿ ಕೋವಿಡ್ ನಿಯಂತ್ರಣ ಒಂದು ಹಂತಕ್ಕೆ ಬರುತ್ತಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಬೇರೆ ಬಗೆಯ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವೈದ್ಯರ ಪ್ರಕಾರ, ದೆಹಲಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (ಒಪಿಡಿ) ಕೋವಿಡ್‌ನಿಂದ ಗುಣಮುಖರಾಗಿ ಈಗ ಹಲವು ತೊಡಕುಗಳನ್ನು ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಒಪಿಡಿಗಳಲ್ಲಿ ಕೋವಿಡ್ ನಂತರದ ತೊಡಕುಗಳನ್ನು ಹೊಂದಿರುವ 25-30 ರೋಗಿಗಳಿಗೆ ವೈದ್ಯರು ಪ್ರತಿದಿನ ಈಗ ಚಿಕಿತ್ಸೆ ನೀಡುತ್ತಿದ್ದಾರೆ. ಮೊದಲ ಅಲೆಯಲ್ಲಿ ವರದಿಯಾದ ರೋಗಲಕ್ಷಣಗಳಿಗಿಂತ ಈಗಿನ ರೋಗಲಕ್ಷಣಗಳು ಹೆಚ್ಚು ಗಂಭೀರವಾಗಿವೆ. ಸೋಂಕಿನಿಂದ ಚೇತರಿಸಿಕೊಂಡ ನಂತರ ಹಲವಾರು ವಾರಗಳವರೆಗೆ ರೋಗಿಗಳಿಗೆ ಆಮ್ಲಜನಕದ ಬೆಂಬಲ ಬೇಕಾಗುತ್ತಿದೆ. ಕಳೆದ ವರ್ಷ, ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿ ಆಯಾಸ ಸಾಮಾನ್ಯ ಲಕ್ಷಣವಾಗಿತ್ತು.

ಮ್ಯಾಕ್ಸ್ ಆಸ್ಪತ್ರೆಯ ಉಸಿರಾಟ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ನಂಗಿಯಾ, ‘ನಮ್ಮ ಒಪಿಡಿಗಳು 70-80% ರಷ್ಟು ಕೋವಿಡ್ ನಂತರದ ರೋಗಿಗಳಿಂದ ತುಂಬಿಹೋಗಿವೆ. ಸಾಮಾನ್ಯವಾಗಿ, 65 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ ಶ್ವಾಸಕೋಶದ ಫೈಬ್ರೋಸಿಸ್ ಅನ್ನು ನಾವು ನೋಡುತ್ತೇವೆ. ಆದರೆ ಈ ಸಮಯದಲ್ಲಿ, ಮಧ್ಯ ವಯಸ್ಕ ಜನರು, ಕಿರಿಯ ರೋಗಿಗಳು ಮತ್ತು ಮಕ್ಕಳನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸಲಾಗಿದೆ. ಕೋವಿಡ್‌ನಿಂದ ಗುಣಮುಖರಾದ ನಂತರವೂ ಆಮ್ಲಜನಕದ ಬೆಂಬಲದಲ್ಲಿರುವ ರೋಗಿಗಳಿದ್ದಾರೆ ಎಂದಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡ ರೋಗಿಗಳು ನಂತರ ಹೆಚ್ಚಿನ ಪ್ರಮಾಣದ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸುರಂಜಿತ್ ಚಟರ್ಜಿ, “3 ಮತ್ತು 4 ನೇ ವಾರದ ಚೇತರಿಕೆಯ ನಂತರ ಸಹ ನಾವು ತೀವ್ರ ಜ್ವರದಿಂದ ಬಳಲುತ್ತಿರುವ ಬಹಳಷ್ಟು ರೋಗಿಗಳನ್ನು ನೋಡುತ್ತಿದ್ದೇವೆ. ಮೊದಲ ಅಲೆಯಲ್ಲಿಯೂ ಜ್ವರ ಇತ್ತು. ಆದರೆ ಈ ಸಮಯದಲ್ಲಿ ಸ್ಟೀರಾಯ್ಡ್‌ಗಳನ್ನು ಸಹ ಬಳಸಲಾಗಿದೆ, ಆದ್ದರಿಂದ ಇದು ಕೇವಲ ಉರಿಯೂತವೋ ಅಥವಾ ದ್ವಿತೀಯ ಸೋಂಕಿನ ಕಾರಣವೋ ಎಂದು ನಾವು ಗೊಂದಲಕ್ಕೊಳಗಾಗಿದ್ದೇವೆ. ಕಪ್ಪು ಶಿಲೀಂದ್ರ ಅಥವಾ ಶ್ವಾಸಕೋಶದ ಇತರ ಸೋಂಕುಗಳೂ ಕಾಣಿಸಿಕೊಳ್ಳುತ್ತಿವೆ” ಎಂದಿದ್ದಾರೆ.

ಕೆಲವು ರೋಗಿಗಳಿಗೆ, ಕೋವಿಡ್ ನಂತರದ ಲಕ್ಷಣಗಳು ತೀವ್ರವಾಗಿದ್ದರಿಂದ ಅವರನ್ನು ಮತ್ತೆ ತೀವ್ರ ನಿಗಾ ಚಿಕಿತ್ಸೆಗೆ ಸೇರಿಸಲಾಗುತ್ತಿದೆ.

ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ಟಿಟ್ಯೂಟ್‌ನ ತೀವ್ರ ನಿಗಾ ಘಟಕದ ಹೆಚ್ಚುವರಿ ನಿರ್ದೇಶಕ ಡಾ.ರಜತ್ ಅಗರ್ವಾಲ್, ‘ಪ್ರತಿದಿನ 3-4 ರೋಗಿಗಳು ವಿವಿಧ ಸಮಸ್ಯೆಗಳೊಂದಿಗೆ ನಮ್ಮ ತೀವ್ರ ನಿಗಾ ಘಟಕಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಹುಪಾಲು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಈಗ ದೈನಂದಿನ ಪ್ರಕರಣಗಳು ಸುಮಾರು 500ಕ್ಕೆ ಇಳಿದಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಇತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.


ಇದನ್ನೂ ಓದಿ; ರೋಗನಿರೋಧಕತೆ ಮತ್ತು ಲಸಿಕೆ; ಸಂಶೋಧನೆಯ ಇತಿಹಾಸ ಮತ್ತು ವಿಜ್ಞಾನ: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...