Homeಕರೋನಾ ತಲ್ಲಣದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

ದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

- Advertisement -
- Advertisement -

ದೆಹಲಿಯಲ್ಲಿ ಕೋವಿಡ್ ನಿಯಂತ್ರಣ ಒಂದು ಹಂತಕ್ಕೆ ಬರುತ್ತಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಬೇರೆ ಬಗೆಯ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವೈದ್ಯರ ಪ್ರಕಾರ, ದೆಹಲಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (ಒಪಿಡಿ) ಕೋವಿಡ್‌ನಿಂದ ಗುಣಮುಖರಾಗಿ ಈಗ ಹಲವು ತೊಡಕುಗಳನ್ನು ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಒಪಿಡಿಗಳಲ್ಲಿ ಕೋವಿಡ್ ನಂತರದ ತೊಡಕುಗಳನ್ನು ಹೊಂದಿರುವ 25-30 ರೋಗಿಗಳಿಗೆ ವೈದ್ಯರು ಪ್ರತಿದಿನ ಈಗ ಚಿಕಿತ್ಸೆ ನೀಡುತ್ತಿದ್ದಾರೆ. ಮೊದಲ ಅಲೆಯಲ್ಲಿ ವರದಿಯಾದ ರೋಗಲಕ್ಷಣಗಳಿಗಿಂತ ಈಗಿನ ರೋಗಲಕ್ಷಣಗಳು ಹೆಚ್ಚು ಗಂಭೀರವಾಗಿವೆ. ಸೋಂಕಿನಿಂದ ಚೇತರಿಸಿಕೊಂಡ ನಂತರ ಹಲವಾರು ವಾರಗಳವರೆಗೆ ರೋಗಿಗಳಿಗೆ ಆಮ್ಲಜನಕದ ಬೆಂಬಲ ಬೇಕಾಗುತ್ತಿದೆ. ಕಳೆದ ವರ್ಷ, ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿ ಆಯಾಸ ಸಾಮಾನ್ಯ ಲಕ್ಷಣವಾಗಿತ್ತು.

ಮ್ಯಾಕ್ಸ್ ಆಸ್ಪತ್ರೆಯ ಉಸಿರಾಟ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ನಂಗಿಯಾ, ‘ನಮ್ಮ ಒಪಿಡಿಗಳು 70-80% ರಷ್ಟು ಕೋವಿಡ್ ನಂತರದ ರೋಗಿಗಳಿಂದ ತುಂಬಿಹೋಗಿವೆ. ಸಾಮಾನ್ಯವಾಗಿ, 65 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ ಶ್ವಾಸಕೋಶದ ಫೈಬ್ರೋಸಿಸ್ ಅನ್ನು ನಾವು ನೋಡುತ್ತೇವೆ. ಆದರೆ ಈ ಸಮಯದಲ್ಲಿ, ಮಧ್ಯ ವಯಸ್ಕ ಜನರು, ಕಿರಿಯ ರೋಗಿಗಳು ಮತ್ತು ಮಕ್ಕಳನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸಲಾಗಿದೆ. ಕೋವಿಡ್‌ನಿಂದ ಗುಣಮುಖರಾದ ನಂತರವೂ ಆಮ್ಲಜನಕದ ಬೆಂಬಲದಲ್ಲಿರುವ ರೋಗಿಗಳಿದ್ದಾರೆ ಎಂದಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡ ರೋಗಿಗಳು ನಂತರ ಹೆಚ್ಚಿನ ಪ್ರಮಾಣದ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸುರಂಜಿತ್ ಚಟರ್ಜಿ, “3 ಮತ್ತು 4 ನೇ ವಾರದ ಚೇತರಿಕೆಯ ನಂತರ ಸಹ ನಾವು ತೀವ್ರ ಜ್ವರದಿಂದ ಬಳಲುತ್ತಿರುವ ಬಹಳಷ್ಟು ರೋಗಿಗಳನ್ನು ನೋಡುತ್ತಿದ್ದೇವೆ. ಮೊದಲ ಅಲೆಯಲ್ಲಿಯೂ ಜ್ವರ ಇತ್ತು. ಆದರೆ ಈ ಸಮಯದಲ್ಲಿ ಸ್ಟೀರಾಯ್ಡ್‌ಗಳನ್ನು ಸಹ ಬಳಸಲಾಗಿದೆ, ಆದ್ದರಿಂದ ಇದು ಕೇವಲ ಉರಿಯೂತವೋ ಅಥವಾ ದ್ವಿತೀಯ ಸೋಂಕಿನ ಕಾರಣವೋ ಎಂದು ನಾವು ಗೊಂದಲಕ್ಕೊಳಗಾಗಿದ್ದೇವೆ. ಕಪ್ಪು ಶಿಲೀಂದ್ರ ಅಥವಾ ಶ್ವಾಸಕೋಶದ ಇತರ ಸೋಂಕುಗಳೂ ಕಾಣಿಸಿಕೊಳ್ಳುತ್ತಿವೆ” ಎಂದಿದ್ದಾರೆ.

ಕೆಲವು ರೋಗಿಗಳಿಗೆ, ಕೋವಿಡ್ ನಂತರದ ಲಕ್ಷಣಗಳು ತೀವ್ರವಾಗಿದ್ದರಿಂದ ಅವರನ್ನು ಮತ್ತೆ ತೀವ್ರ ನಿಗಾ ಚಿಕಿತ್ಸೆಗೆ ಸೇರಿಸಲಾಗುತ್ತಿದೆ.

ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ಟಿಟ್ಯೂಟ್‌ನ ತೀವ್ರ ನಿಗಾ ಘಟಕದ ಹೆಚ್ಚುವರಿ ನಿರ್ದೇಶಕ ಡಾ.ರಜತ್ ಅಗರ್ವಾಲ್, ‘ಪ್ರತಿದಿನ 3-4 ರೋಗಿಗಳು ವಿವಿಧ ಸಮಸ್ಯೆಗಳೊಂದಿಗೆ ನಮ್ಮ ತೀವ್ರ ನಿಗಾ ಘಟಕಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಹುಪಾಲು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಈಗ ದೈನಂದಿನ ಪ್ರಕರಣಗಳು ಸುಮಾರು 500ಕ್ಕೆ ಇಳಿದಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಇತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.


ಇದನ್ನೂ ಓದಿ; ರೋಗನಿರೋಧಕತೆ ಮತ್ತು ಲಸಿಕೆ; ಸಂಶೋಧನೆಯ ಇತಿಹಾಸ ಮತ್ತು ವಿಜ್ಞಾನ: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...