Homeಕರೋನಾ ತಲ್ಲಣದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ನಡುವೆ ಆಕ್ಸಿಜನ್ ಸಮರ ಅರಂಭವಾಗಿದೆ. ನಿನ್ನೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಕ್ಸಿಜನ್ ಆಡಿಟ್ ಸಮಿತಿ ಸಲ್ಲಿಸಿದ್ದ ಮಧ್ಯಂತರ ವರದಿಯ ಆಧಾರದಲ್ಲಿ ಬಿಜೆಪಿ ನಾಯಕರು ಕೇಜ್ರಿವಾಲ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಕೇಜ್ರಿವಾಲ್ ಸರ್ಕಾರ ಆಕ್ಸಿಜನ್ ಬಳಕೆಯಿಂದ ದೇಶದಲ್ಲಿ ಅನೇಕ ಜನರು ಆಮ್ಲಜನಕದ ಕೊರತೆಯಿಂದ ಮೃತಪಡುವಂತಾಯಿತು ಎಂದು ಪ್ರಚಾರಾಂದೋಲನ ನಡೆಸಿದ್ದರು. ಆದರೆ ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎಂದು ಹೇಳಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಿಟ್ ಕಮಿಟಿಯ ಮುಖ್ಯಸ್ಥರಾಗಿರುವ ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕರಾದ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.

“ದೆಹಲಿ ಸರ್ಕಾರ ಅಗತ್ಯಕ್ಕಿಂತ 4 ಪಟ್ಟು ಹೆಚ್ಚು ಪ್ರಮಾಣದ ಆಕ್ಸಿಜನ್‌ಗೆ ಬೇಡಿಕೆ ಇಟ್ಟಿತ್ತು ಎಂದು ಹೇಳಲು ಸಾಧ್ಯವಿಲ್ಲ. ಈಗ ಮಧ್ಯಂತರ ವರದಿಯನ್ನಷ್ಟೇ ನೀಡಲಾಗಿದೆ. ಪೈನಲ್ ಆಡಿಟ್ ನಂತರವಷ್ಟೇ ಈ ಕುರಿತು ಹೇಳಲು ಸಾಧ್ಯ. ಕೊರೋನಾ ಎರಡನೇ ಅಲೆಯನ್ನು ಸಾಧಾರಣ ದಿನಗಳಿಗೆ ಹೋಲಿಸಿ ಲೆಕ್ಕ ಹಾಕಿದರೆ ಈ ಅಂದಾಜು ಸಿಗುತ್ತದೆ. ಕೊರೋನಾ ಸಂದರ್ಭದಲ್ಲಿ ಹೆಚ್ಚಿನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದ್ದರು. ಸಮಗ್ರವಾದ ತನಿಖೆಯಿಂದ ಮಾತ್ರ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿನ ದೆಹಲಿಯ ಆಕ್ಸಿಜನ್ ಬೇಡಿಕೆಯ ಪ್ರಮಾಣ ತಿಳಿದುಬರಲಿದೆ. ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇರುವಾಗ ಈ ವಿಚಾರವನ್ನು ಚರ್ಚಿಸುವದು ಸರಿಯಲ್ಲ” ಎಂದು ಡಾ. ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ  5 ಜನ ಸದಸ್ಯರ ತನಿಖಾ ಸಮಿತಿಯಲ್ಲಿ ಬಿರುಕು ಮೂಡಿದ್ದು ಸಮಿತಿ ಸದಸ್ಯಾರಾದ  ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್‌ ಭಲ್ಲಾ ಮತ್ತು ಮ್ಯಾಕ್ಸ್ ಹೆಲ್ತ್‌ ಕೇರ್ ನಿರ್ದೇಶಕ ಸಂದೀಪ್ ಬುಧಿರಾಜ ಅವರು ಮಧ್ಯಂತರ ವರದಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಪರಿಗಣಿಸಲಾಗಿಲ್ಲ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಸದಸ್ಯರು ಭಿನ್ನಮತದ ಕಾರಣದಿಂದ ಸಮಿತಿಯ ಅನೇಕ ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್ ಭಲ್ಲಾ ಅವರು ತಮ್ಮ ಆಕ್ಷೇಪದ ಟಿಪ್ಪಣಿಯಲ್ಲಿ ಕೇಂದ್ರ ಸರ್ಕಾರದ ಅಧೀನ ಅಧಿಕಾರಿಗಳಾಗಿರುವ ಇಬ್ಬರು ಸದಸ್ಯರು ಉಪಸಮಿತಿಯ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಸಮಿತಿಯ ಅಂತಿಮ ವರದಿಯನ್ನು ಸಲ್ಲಿಸುವ ಮೊದಲು ಇತರ ಸದಸ್ಯರ ಗಮನಕ್ಕೆ ತರಲಾಗಿಲ್ಲ. ವರದಿಯು ಅತ್ಯಂತ ಉತ್ಪೇಕ್ಷೆಯಿಂದ ಕೂಡಿದ್ದು ಪಾರದರ್ಶಕತೆಯ ಕೊರತೆ ಇದೆ ಎಂದು ತನಿಖಾ ಸಮಿತಿಯ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಒಮ್ಮತದ ಅಭಿಪ್ರಾಯಕ್ಕೆ ಬರದೇ ಇರುವುದು ಅತ್ಯಂತ ಬೇಸರ ಮತ್ತು ಅಘಾತಕಾರಿಯಾದ ವಿಷಯವಾಗಿದೆ. ಸಮಿತಿಯು ನಿಜವಾದ ಆಡಿಟ್‌ಅನ್ನು ನಡೆಸದೇ ಬಿಡುಬೀಸಾದ ತೀರ್ಮಾನಕ್ಕೆ ಬಂದಿದೆ” ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಗೆ ತನ್ನ ಆಕ್ಷೇಪವನ್ನು ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಕ್ಸಿಜನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದು, “ನೀವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೊಡಗಿದ್ದಾಗ ನಾನಿಲ್ಲಿ ಹಗಲೂ ರಾತ್ರಿ ಆಕ್ಸಿಜನ್ ಹೊಂದಿಸಲು ಕಷ್ಟಪಡುತ್ತಿದ್ದೆ. 2 ಕೋಟಿ ದೆಹಲಿ ನಿವಾಸಿಗಳ ಉಸಿರಿಗಾಗಿ ಹೋರಾಡಿದ್ದೇ ನನ್ನ ಅಪರಾಧ” ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಆಡಿಟ್ ರಿಪೋರ್ಟ್ ಎಂಬುದು ಇಲ್ಲ. ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಈ ವರದಿಗೆ ಸಹಿ ಮಾಡಿಲ್ಲ. ಬಿಜೆಪಿ ತನ್ನ ಕೇಂದ್ರ ಕಚೇರಿಯಲ್ಲಿ ತಯಾರಾದ ನಕಲಿ ರಿಪೋರ್ಟ್ ಅನ್ನು ಹಂಚುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ.

ದೆಹಲಿ ಸರ್ಕಾರ ಮತ್ತು ಕೆಂದ್ರ ಸರ್ಕಾರದ ನಡುವಿನ ರಾಜಕೀಯ ಕಿತ್ತಾಟ ಮತ್ತೊಂದು ಹಂತವನ್ನು ತಲುಪಿದ್ದು ಆಕ್ಸಿಜನ್ ವಿಚಾರದಲ್ಲಿ ಆಮ್‌ ಆದ್ಮಿ ಮತ್ತು ಬಿಜೆಪಿ ನಾಯಕರು ಕಿತ್ತಾಡುತ್ತಿದ್ದಾರೆ. ನಿನ್ನೆ ದೇಶಾದ್ಯಂತ ಸುದ್ದಿಯಾದ ಆಕ್ಸಿಜನ್ ವರದಿ ಕೂಡ ದೆಹಲಿ ಬಿಜೆಪಿ ಮೂಲಗಳಿಂದಲೇ ಹೊರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಮತ್ತು ದೆಹಲಿಯ ನಡುವಿನ ಆಕ್ಸಿಜನ್ ಗಲಾಟೆ ಸದ್ಯಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕವಷ್ಟೆ ಸತ್ಯಾಸತ್ಯತೆಗಳು ಹೊರ ಬೀಳಲಿದೆ.


ಇದನ್ನೂ ಓದಿ : ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...