Homeಕರೋನಾ ತಲ್ಲಣದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ನಡುವೆ ಆಕ್ಸಿಜನ್ ಸಮರ ಅರಂಭವಾಗಿದೆ. ನಿನ್ನೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಕ್ಸಿಜನ್ ಆಡಿಟ್ ಸಮಿತಿ ಸಲ್ಲಿಸಿದ್ದ ಮಧ್ಯಂತರ ವರದಿಯ ಆಧಾರದಲ್ಲಿ ಬಿಜೆಪಿ ನಾಯಕರು ಕೇಜ್ರಿವಾಲ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಕೇಜ್ರಿವಾಲ್ ಸರ್ಕಾರ ಆಕ್ಸಿಜನ್ ಬಳಕೆಯಿಂದ ದೇಶದಲ್ಲಿ ಅನೇಕ ಜನರು ಆಮ್ಲಜನಕದ ಕೊರತೆಯಿಂದ ಮೃತಪಡುವಂತಾಯಿತು ಎಂದು ಪ್ರಚಾರಾಂದೋಲನ ನಡೆಸಿದ್ದರು. ಆದರೆ ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎಂದು ಹೇಳಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಿಟ್ ಕಮಿಟಿಯ ಮುಖ್ಯಸ್ಥರಾಗಿರುವ ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕರಾದ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.

“ದೆಹಲಿ ಸರ್ಕಾರ ಅಗತ್ಯಕ್ಕಿಂತ 4 ಪಟ್ಟು ಹೆಚ್ಚು ಪ್ರಮಾಣದ ಆಕ್ಸಿಜನ್‌ಗೆ ಬೇಡಿಕೆ ಇಟ್ಟಿತ್ತು ಎಂದು ಹೇಳಲು ಸಾಧ್ಯವಿಲ್ಲ. ಈಗ ಮಧ್ಯಂತರ ವರದಿಯನ್ನಷ್ಟೇ ನೀಡಲಾಗಿದೆ. ಪೈನಲ್ ಆಡಿಟ್ ನಂತರವಷ್ಟೇ ಈ ಕುರಿತು ಹೇಳಲು ಸಾಧ್ಯ. ಕೊರೋನಾ ಎರಡನೇ ಅಲೆಯನ್ನು ಸಾಧಾರಣ ದಿನಗಳಿಗೆ ಹೋಲಿಸಿ ಲೆಕ್ಕ ಹಾಕಿದರೆ ಈ ಅಂದಾಜು ಸಿಗುತ್ತದೆ. ಕೊರೋನಾ ಸಂದರ್ಭದಲ್ಲಿ ಹೆಚ್ಚಿನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದ್ದರು. ಸಮಗ್ರವಾದ ತನಿಖೆಯಿಂದ ಮಾತ್ರ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿನ ದೆಹಲಿಯ ಆಕ್ಸಿಜನ್ ಬೇಡಿಕೆಯ ಪ್ರಮಾಣ ತಿಳಿದುಬರಲಿದೆ. ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇರುವಾಗ ಈ ವಿಚಾರವನ್ನು ಚರ್ಚಿಸುವದು ಸರಿಯಲ್ಲ” ಎಂದು ಡಾ. ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ  5 ಜನ ಸದಸ್ಯರ ತನಿಖಾ ಸಮಿತಿಯಲ್ಲಿ ಬಿರುಕು ಮೂಡಿದ್ದು ಸಮಿತಿ ಸದಸ್ಯಾರಾದ  ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್‌ ಭಲ್ಲಾ ಮತ್ತು ಮ್ಯಾಕ್ಸ್ ಹೆಲ್ತ್‌ ಕೇರ್ ನಿರ್ದೇಶಕ ಸಂದೀಪ್ ಬುಧಿರಾಜ ಅವರು ಮಧ್ಯಂತರ ವರದಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಪರಿಗಣಿಸಲಾಗಿಲ್ಲ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಸದಸ್ಯರು ಭಿನ್ನಮತದ ಕಾರಣದಿಂದ ಸಮಿತಿಯ ಅನೇಕ ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್ ಭಲ್ಲಾ ಅವರು ತಮ್ಮ ಆಕ್ಷೇಪದ ಟಿಪ್ಪಣಿಯಲ್ಲಿ ಕೇಂದ್ರ ಸರ್ಕಾರದ ಅಧೀನ ಅಧಿಕಾರಿಗಳಾಗಿರುವ ಇಬ್ಬರು ಸದಸ್ಯರು ಉಪಸಮಿತಿಯ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಸಮಿತಿಯ ಅಂತಿಮ ವರದಿಯನ್ನು ಸಲ್ಲಿಸುವ ಮೊದಲು ಇತರ ಸದಸ್ಯರ ಗಮನಕ್ಕೆ ತರಲಾಗಿಲ್ಲ. ವರದಿಯು ಅತ್ಯಂತ ಉತ್ಪೇಕ್ಷೆಯಿಂದ ಕೂಡಿದ್ದು ಪಾರದರ್ಶಕತೆಯ ಕೊರತೆ ಇದೆ ಎಂದು ತನಿಖಾ ಸಮಿತಿಯ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಒಮ್ಮತದ ಅಭಿಪ್ರಾಯಕ್ಕೆ ಬರದೇ ಇರುವುದು ಅತ್ಯಂತ ಬೇಸರ ಮತ್ತು ಅಘಾತಕಾರಿಯಾದ ವಿಷಯವಾಗಿದೆ. ಸಮಿತಿಯು ನಿಜವಾದ ಆಡಿಟ್‌ಅನ್ನು ನಡೆಸದೇ ಬಿಡುಬೀಸಾದ ತೀರ್ಮಾನಕ್ಕೆ ಬಂದಿದೆ” ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಗೆ ತನ್ನ ಆಕ್ಷೇಪವನ್ನು ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಕ್ಸಿಜನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದು, “ನೀವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೊಡಗಿದ್ದಾಗ ನಾನಿಲ್ಲಿ ಹಗಲೂ ರಾತ್ರಿ ಆಕ್ಸಿಜನ್ ಹೊಂದಿಸಲು ಕಷ್ಟಪಡುತ್ತಿದ್ದೆ. 2 ಕೋಟಿ ದೆಹಲಿ ನಿವಾಸಿಗಳ ಉಸಿರಿಗಾಗಿ ಹೋರಾಡಿದ್ದೇ ನನ್ನ ಅಪರಾಧ” ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಆಡಿಟ್ ರಿಪೋರ್ಟ್ ಎಂಬುದು ಇಲ್ಲ. ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಈ ವರದಿಗೆ ಸಹಿ ಮಾಡಿಲ್ಲ. ಬಿಜೆಪಿ ತನ್ನ ಕೇಂದ್ರ ಕಚೇರಿಯಲ್ಲಿ ತಯಾರಾದ ನಕಲಿ ರಿಪೋರ್ಟ್ ಅನ್ನು ಹಂಚುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ.

ದೆಹಲಿ ಸರ್ಕಾರ ಮತ್ತು ಕೆಂದ್ರ ಸರ್ಕಾರದ ನಡುವಿನ ರಾಜಕೀಯ ಕಿತ್ತಾಟ ಮತ್ತೊಂದು ಹಂತವನ್ನು ತಲುಪಿದ್ದು ಆಕ್ಸಿಜನ್ ವಿಚಾರದಲ್ಲಿ ಆಮ್‌ ಆದ್ಮಿ ಮತ್ತು ಬಿಜೆಪಿ ನಾಯಕರು ಕಿತ್ತಾಡುತ್ತಿದ್ದಾರೆ. ನಿನ್ನೆ ದೇಶಾದ್ಯಂತ ಸುದ್ದಿಯಾದ ಆಕ್ಸಿಜನ್ ವರದಿ ಕೂಡ ದೆಹಲಿ ಬಿಜೆಪಿ ಮೂಲಗಳಿಂದಲೇ ಹೊರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಮತ್ತು ದೆಹಲಿಯ ನಡುವಿನ ಆಕ್ಸಿಜನ್ ಗಲಾಟೆ ಸದ್ಯಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕವಷ್ಟೆ ಸತ್ಯಾಸತ್ಯತೆಗಳು ಹೊರ ಬೀಳಲಿದೆ.


ಇದನ್ನೂ ಓದಿ : ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...